<p><strong>ತಿರುವನಂತಪುರ:</strong> ಡ್ರಗ್ಸ್ ಜಪ್ತಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಕೇರಳದ ಮಾಜಿ ಸಾರಿಗೆ ಸಚಿವ ಹಾಗೂ ಹಾಲಿ ಶಾಸಕ ಆ್ಯಂಟೊನಿ ರಾಜು ಹಾಗೂ ಕೋರ್ಟ್ನ ಮಾಜಿ ಗುಮಾಸ್ತ ಕೆ.ಎಸ್.ಜೋಸ್ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶನಿವಾರ ಆದೇಶಿಸಿದೆ.</p><p>ಆ್ಯಂಟೊನಿ ರಾಜು, ಆಡಳಿತಾರೂಢ ಎಲ್ಡಿಎಫ್ ಮೈತ್ರಿಕೂಟದ ಅಂಗಪಕ್ಷವಾದ ಜನಾಧಿಪತ್ಯ ಕೇರಳ ಕಾಂಗ್ರೆಸ್ನ ಶಾಸಕ.</p><p>1990ರಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಆಸ್ಟ್ರೇಲಿಯಾ ಪ್ರಜೆಯೊಬ್ಬರಿಂದ 61.5 ಗ್ರಾಂ ಹಶೀಶ್ ಜಪ್ತಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದ ಆರೋಪದಡಿ ಆ್ಯಂಟೊನಿ ರಾಜು ಮತ್ತು ಜೋಸ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ನೆಡುಮಂಗಾಡ್ ನ್ಯಾಯಾಲಯದ ನ್ಯಾಯಾಧೀಶೆ ರುಬಿ ಇಸ್ಮಾಯಿಲ್, ಇಬ್ಬರು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ.</p><p>ಈ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಜೈಮೋಹನ್ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ.</p><p>‘ಶಿಕ್ಷೆಯ ಪ್ರಮಾಣಕ್ಕಿಂತ ಅವರನ್ನು ಅಪರಾಧಿಗಳೆಂದು ತೀರ್ಮಾನಿಸಿ ನ್ಯಾಯಾಲಯ ಆದೇಶಿಸಿರುವುದು ನನಗೆ ಮುಖ್ಯ ಎನಿಸಿದೆ. ಸಾಕ್ಷ್ಯಗಳನ್ನು ತಿರುಚಿದವರಿಗೆ ಶಿಕ್ಷೆ ನೀಡಲಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಡ್ರಗ್ಸ್ ಜಪ್ತಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಕೇರಳದ ಮಾಜಿ ಸಾರಿಗೆ ಸಚಿವ ಹಾಗೂ ಹಾಲಿ ಶಾಸಕ ಆ್ಯಂಟೊನಿ ರಾಜು ಹಾಗೂ ಕೋರ್ಟ್ನ ಮಾಜಿ ಗುಮಾಸ್ತ ಕೆ.ಎಸ್.ಜೋಸ್ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಶನಿವಾರ ಆದೇಶಿಸಿದೆ.</p><p>ಆ್ಯಂಟೊನಿ ರಾಜು, ಆಡಳಿತಾರೂಢ ಎಲ್ಡಿಎಫ್ ಮೈತ್ರಿಕೂಟದ ಅಂಗಪಕ್ಷವಾದ ಜನಾಧಿಪತ್ಯ ಕೇರಳ ಕಾಂಗ್ರೆಸ್ನ ಶಾಸಕ.</p><p>1990ರಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಆಸ್ಟ್ರೇಲಿಯಾ ಪ್ರಜೆಯೊಬ್ಬರಿಂದ 61.5 ಗ್ರಾಂ ಹಶೀಶ್ ಜಪ್ತಿ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತಿರುಚಿದ್ದ ಆರೋಪದಡಿ ಆ್ಯಂಟೊನಿ ರಾಜು ಮತ್ತು ಜೋಸ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ ನೆಡುಮಂಗಾಡ್ ನ್ಯಾಯಾಲಯದ ನ್ಯಾಯಾಧೀಶೆ ರುಬಿ ಇಸ್ಮಾಯಿಲ್, ಇಬ್ಬರು ತಪ್ಪಿತಸ್ಥರೆಂದು ತೀರ್ಮಾನಿಸಿ ಶಿಕ್ಷೆ ವಿಧಿಸಿದ್ದಾರೆ.</p><p>ಈ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ಜೈಮೋಹನ್ ಅವರು ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ.</p><p>‘ಶಿಕ್ಷೆಯ ಪ್ರಮಾಣಕ್ಕಿಂತ ಅವರನ್ನು ಅಪರಾಧಿಗಳೆಂದು ತೀರ್ಮಾನಿಸಿ ನ್ಯಾಯಾಲಯ ಆದೇಶಿಸಿರುವುದು ನನಗೆ ಮುಖ್ಯ ಎನಿಸಿದೆ. ಸಾಕ್ಷ್ಯಗಳನ್ನು ತಿರುಚಿದವರಿಗೆ ಶಿಕ್ಷೆ ನೀಡಲಾಗಿದೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>