<p><strong>ತಿರುವನಂತಪುರ:</strong> ‘ಕೇರಳದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ ಕೂಡಿದೆ. ಕಳ್ಳಸಾಗಾಣಿಕೆ ತಂಡವು ಕೃತ್ಯಕ್ಕಾಗಿ ಯುಎಇ ದೂತಾವಾಸದ ನಕಲಿ ದಾಖಲೆಗಳನ್ನು ಬಳಸಿತ್ತು’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎಎನ್ಐ) ಹೇಳಿದೆ.</p>.<p>ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ನೀಡಿದ ಮಾಹಿತಿ ಆಧಾರದಲ್ಲಿ ಯುಎಇ ದೂತಾವಾಸ ಕಚೇರಿಯ ಮಾಜಿ ಉದ್ಯೋಗಿಯೊಬ್ಬರ ವಿಚಾರಣೆಗೆ ಅನುಮತಿ ಕೋರಿ ಕೊಚ್ಚಿಯಲ್ಲಿರುವ ಎನ್ಐಎ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಬಂಧಿತ ಆರೋಪಗಳನ್ನು ಸದ್ಯ ವಿಚಾರಣೆಗಾಗಿ ಎನ್ಐಎ ವಶಕ್ಕೊಪ್ಪಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಚಿನ್ನ ಕಳ್ಳಸಾಗಾಣಿಕೆ ನಡೆಸಲು ಯುಎಇ ದೂತಾವಾಸ ಕಚೇರಿಯ ನಕಲಿ ಲಾಂಛನ ಮತ್ತು ಸೀಲ್ಗಳನ್ನು ಬಳಸಿದ್ದರು. ಅವುಗಳನ್ನು ಬಳಸಿಕೊಂಡು ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ನಡೆಸಿದ್ದರು. ದೂತಾವಾಸ ಕಚೇರಿ ಅಧಿಕಾರಿಗಳಿಗೆ ಗೊತ್ತಾಗದಂತೆ ಆರೋಪಿಗಳು ಈ ಕೃತ್ಯ ನಡೆಸಿರಬಹುದು ಎಂದು ನ್ಯಾಯಾಲಯದ ಮುಂದೆ ತನಿಖಾ ಸಂಸ್ಥೆ ಹೇಳಿದೆ ಎನ್ನಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<p>ಪ್ರಕರಣದ ಮೂರನೇ ಆರೋಪಿ ಫೈಜಲ್ ಫರೀದ್ನನ್ನು ಬಂಧಿಸಲು ವಾರಂಟ್ಗಾಗಿಯೂ ಎನ್ಐಎ ಮನವಿ ಸಲ್ಲಿಸಿದೆ. ಫರೀದ್ ಯುಎಇಯಲ್ಲಿ ಇದ್ದಾನೆ ಎನ್ನಲಾಗಿದ್ದು, ಆತನ ಗಡಿಪಾರು ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.</p>.<p>ಈ ಮಧ್ಯೆ, ಭಾನುವಾರ ಬಂಧನಕ್ಕೊಳಗಾಗಿರುವ ಮಲಪ್ಪುರಂ ನಿವಾಸಿ ಕೆ.ಟಿ.ರಮೀಜ್ ಈ ಹಿಂದೆಯೂ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂಬುದು ತಿಳಿದುಬಂದಿದೆ. ರಮೀಜ್ ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಸೂತ್ರಧಾರ ಇರಬಹುದು ಎಂದು ಶಂಕಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/bjp-congress-question-how-kerala-gold-smuggling-accused-managed-to-cross-states-during-lockdown-744223.html" target="_blank">ಲಾಕ್ಡೌನ್ ವೇಳೆ ಸ್ವಪ್ನಾ ಕೇರಳದಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದು ಹೇಗೆ?</a></p>.<p>ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಯುಎಇ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಇತ್ತೀಚೆಗೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಪ್ರಕರಣವು ಕೇರಳದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/india-news/swapna-suresh-sandeep-nair-the-key-suspects-of-kerala-gold-scandal-case-taken-custody-by-nia-in-744156.html" itemprop="url" target="_blank">ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಬೆಂಗಳೂರಲ್ಲಿ ಸೆರೆ</a></p>.<p><a href="https://www.prajavani.net/stories/india-news/gold-smuggling-case-kerala-cm-pinarayi-vijayan-says-centre-can-decide-the-probe-sivasankar-removed-743124.html" target="_blank">ಚಿನ್ನ ಸ್ಮಗ್ಲಿಂಗ್: ತನಿಖಾ ಸಂಸ್ಥೆ ಆಯ್ಕೆಗೆ ಕೇಂದ್ರ ಸ್ವತಂತ್ರ, ಪಿಣರಾಯಿ ವಿಜಯನ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಕೇರಳದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣವು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ ಕೂಡಿದೆ. ಕಳ್ಳಸಾಗಾಣಿಕೆ ತಂಡವು ಕೃತ್ಯಕ್ಕಾಗಿ ಯುಎಇ ದೂತಾವಾಸದ ನಕಲಿ ದಾಖಲೆಗಳನ್ನು ಬಳಸಿತ್ತು’ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎಎನ್ಐ) ಹೇಳಿದೆ.</p>.<p>ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೊಳಗಾಗಿರುವ ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ನೀಡಿದ ಮಾಹಿತಿ ಆಧಾರದಲ್ಲಿ ಯುಎಇ ದೂತಾವಾಸ ಕಚೇರಿಯ ಮಾಜಿ ಉದ್ಯೋಗಿಯೊಬ್ಬರ ವಿಚಾರಣೆಗೆ ಅನುಮತಿ ಕೋರಿ ಕೊಚ್ಚಿಯಲ್ಲಿರುವ ಎನ್ಐಎ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಬಂಧಿತ ಆರೋಪಗಳನ್ನು ಸದ್ಯ ವಿಚಾರಣೆಗಾಗಿ ಎನ್ಐಎ ವಶಕ್ಕೊಪ್ಪಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಬಂಧಿತ ಆರೋಪಿಗಳು ಚಿನ್ನ ಕಳ್ಳಸಾಗಾಣಿಕೆ ನಡೆಸಲು ಯುಎಇ ದೂತಾವಾಸ ಕಚೇರಿಯ ನಕಲಿ ಲಾಂಛನ ಮತ್ತು ಸೀಲ್ಗಳನ್ನು ಬಳಸಿದ್ದರು. ಅವುಗಳನ್ನು ಬಳಸಿಕೊಂಡು ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ನಡೆಸಿದ್ದರು. ದೂತಾವಾಸ ಕಚೇರಿ ಅಧಿಕಾರಿಗಳಿಗೆ ಗೊತ್ತಾಗದಂತೆ ಆರೋಪಿಗಳು ಈ ಕೃತ್ಯ ನಡೆಸಿರಬಹುದು ಎಂದು ನ್ಯಾಯಾಲಯದ ಮುಂದೆ ತನಿಖಾ ಸಂಸ್ಥೆ ಹೇಳಿದೆ ಎನ್ನಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/kerala-cms-principal-secretary-removed-following-alleged-nexus-with-smuggling-racket-742871.html" target="_blank">ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ</a></p>.<p>ಪ್ರಕರಣದ ಮೂರನೇ ಆರೋಪಿ ಫೈಜಲ್ ಫರೀದ್ನನ್ನು ಬಂಧಿಸಲು ವಾರಂಟ್ಗಾಗಿಯೂ ಎನ್ಐಎ ಮನವಿ ಸಲ್ಲಿಸಿದೆ. ಫರೀದ್ ಯುಎಇಯಲ್ಲಿ ಇದ್ದಾನೆ ಎನ್ನಲಾಗಿದ್ದು, ಆತನ ಗಡಿಪಾರು ಪ್ರಕ್ರಿಯೆ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.</p>.<p>ಈ ಮಧ್ಯೆ, ಭಾನುವಾರ ಬಂಧನಕ್ಕೊಳಗಾಗಿರುವ ಮಲಪ್ಪುರಂ ನಿವಾಸಿ ಕೆ.ಟಿ.ರಮೀಜ್ ಈ ಹಿಂದೆಯೂ ಚಿನ್ನ ಕಳ್ಳಸಾಗಾಣಿಕೆ ಪ್ರಕರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂಬುದು ತಿಳಿದುಬಂದಿದೆ. ರಮೀಜ್ ರಾಜತಾಂತ್ರಿಕ ಮಾರ್ಗದ ಮೂಲಕ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದ ಪ್ರಮುಖ ಸೂತ್ರಧಾರ ಇರಬಹುದು ಎಂದು ಶಂಕಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/india-news/bjp-congress-question-how-kerala-gold-smuggling-accused-managed-to-cross-states-during-lockdown-744223.html" target="_blank">ಲಾಕ್ಡೌನ್ ವೇಳೆ ಸ್ವಪ್ನಾ ಕೇರಳದಿಂದ ತಪ್ಪಿಸಿಕೊಂಡು ಬೆಂಗಳೂರಿಗೆ ಬಂದಿದ್ದು ಹೇಗೆ?</a></p>.<p>ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಯುಎಇ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಇತ್ತೀಚೆಗೆ ವ್ಯಕ್ತವಾಗಿತ್ತು. ಅದರ ಬೆನ್ನಲ್ಲೇ, ಅವರನ್ನು ಹುದ್ದೆಯಿಂದ ತೆರವುಗೊಳಿಸಲಾಗಿತ್ತು. ಪ್ರಕರಣವು ಕೇರಳದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿದೆ.</p>.<p><strong>ಇನ್ನಷ್ಟು...</strong></p>.<p><a href="https://www.prajavani.net/stories/india-news/swapna-suresh-sandeep-nair-the-key-suspects-of-kerala-gold-scandal-case-taken-custody-by-nia-in-744156.html" itemprop="url" target="_blank">ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಬೆಂಗಳೂರಲ್ಲಿ ಸೆರೆ</a></p>.<p><a href="https://www.prajavani.net/stories/india-news/gold-smuggling-case-kerala-cm-pinarayi-vijayan-says-centre-can-decide-the-probe-sivasankar-removed-743124.html" target="_blank">ಚಿನ್ನ ಸ್ಮಗ್ಲಿಂಗ್: ತನಿಖಾ ಸಂಸ್ಥೆ ಆಯ್ಕೆಗೆ ಕೇಂದ್ರ ಸ್ವತಂತ್ರ, ಪಿಣರಾಯಿ ವಿಜಯನ್</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>