<p><strong>ತಿರುವನಂತಪುರ</strong>: ಹೊಸ ಸರ್ಕಾರಿ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ಧರ್ಮ ಆಧಾರಿತ ಹೆಸರುಗಳನ್ನು ಇಡುವಂತಿಲ್ಲ ಎಂದು ಕೇರಳ ಸರ್ಕಾರ ಆದೇಶಿಸಿದೆ. </p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p>ಮುಂದಿನ ದಿನಗಳಲ್ಲಿ ಹೊಸದಾಗಿ ಸ್ಥಾಪಿಸುವಂತಹ ಯಾವುದೇ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯ, ಅನುದಾನಿತ ಶಿಕ್ಷಣ ಸಂಸ್ಥೆಗೆ ಧರ್ಮ ಆಧಾರಿತ ಹೆಸರನ್ನು ಇಡಬಾರದು ಎಂದು ಸರ್ಕಾರ ಆದೇಶಿಸಿದೆ.</p><p>‘ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯಲು, ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಮೂಲಗಳು ತಿಳಿಸಿವೆ. </p><p>ಸರ್ಕಾರದ ಈ ನಿರ್ಧಾರವು ಹೊಸದಾಗಿ ಸ್ಥಾಪಿಸುವಂತಹ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ನ್ಯಾಯಮೂರ್ತಿ ಜೆ.ಬಿ.ಕೋಶಿ ಆಯೋಗದ ವರದಿಯನ್ನು ಸಚಿವ ಸಂಪುಟವು ತಾತ್ವಿಕವಾಗಿ ಅಂಗೀಕರಿಸಿದ್ದು, ವರದಿಯನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ ಎಂದೂ ಮೂಲಗಳು ವಿವರಿಸಿವೆ. </p><p>ಕೇರಳದಲ್ಲಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಧ್ಯಯನ ಮಾಡಲು ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗವನ್ನು ಸರ್ಕಾರ ನೇಮಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಹೊಸ ಸರ್ಕಾರಿ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ಧರ್ಮ ಆಧಾರಿತ ಹೆಸರುಗಳನ್ನು ಇಡುವಂತಿಲ್ಲ ಎಂದು ಕೇರಳ ಸರ್ಕಾರ ಆದೇಶಿಸಿದೆ. </p><p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p><p>ಮುಂದಿನ ದಿನಗಳಲ್ಲಿ ಹೊಸದಾಗಿ ಸ್ಥಾಪಿಸುವಂತಹ ಯಾವುದೇ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯ, ಅನುದಾನಿತ ಶಿಕ್ಷಣ ಸಂಸ್ಥೆಗೆ ಧರ್ಮ ಆಧಾರಿತ ಹೆಸರನ್ನು ಇಡಬಾರದು ಎಂದು ಸರ್ಕಾರ ಆದೇಶಿಸಿದೆ.</p><p>‘ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯಲು, ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಮೂಲಗಳು ತಿಳಿಸಿವೆ. </p><p>ಸರ್ಕಾರದ ಈ ನಿರ್ಧಾರವು ಹೊಸದಾಗಿ ಸ್ಥಾಪಿಸುವಂತಹ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ನ್ಯಾಯಮೂರ್ತಿ ಜೆ.ಬಿ.ಕೋಶಿ ಆಯೋಗದ ವರದಿಯನ್ನು ಸಚಿವ ಸಂಪುಟವು ತಾತ್ವಿಕವಾಗಿ ಅಂಗೀಕರಿಸಿದ್ದು, ವರದಿಯನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ ಎಂದೂ ಮೂಲಗಳು ವಿವರಿಸಿವೆ. </p><p>ಕೇರಳದಲ್ಲಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಧ್ಯಯನ ಮಾಡಲು ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗವನ್ನು ಸರ್ಕಾರ ನೇಮಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>