<p><strong>ತಿರುವನಂತಪುರ:</strong> ಕೇರಳದ ಎಲ್ಲಾ ಸರ್ಕಾರಿ ನೌಕರರ ಮೊಬೈಲ್ ಸಂಖ್ಯೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ವೈಯಕ್ತಿಕ ಸಂದೇಶ ರವಾನೆಯಾಗಿದ್ದು, ಇದೀಗ ಸರ್ಕಾರಿ ನೌಕರರ ವೈಯಕ್ತಿಕ ದತ್ತಾಂಶ ಕಳವು ಆರೋಪಕ್ಕೆ ಕಾರಣವಾಗಿದೆ. ಜತೆಗೆ ವಿವಾದಕ್ಕೀಡಾಗಿದೆ. </p><p>ಎಲ್ಲಾ ಸರ್ಕಾರಿ ನೌಕರರ ಮೊಬೈಲ್ ಸಂಖ್ಯೆಗೆ ರವಾನೆಯಾಗಿರುವ ಸಂದೇಶದಲ್ಲಿ ಅವರವರ ಹೆಸರನ್ನು ಸಂಬೋಧಿಸುವ ಜತೆಗೆ ‘ ಬಾಕಿ ಉಳಿದಿದ್ದ ತುಟ್ಟಿ ಭತ್ಯೆಯನ್ನು ಸರ್ಕಾರಿ ನೌಕರರಿಗೆ ವಿತರಿಸಲಾಗಿದ್ದು, ಈ ಮೂಲಕ ಸರ್ಕಾರ ತಾನು ನೀಡಿದ್ದ ಭರವಸೆಯನ್ನು ಈಡೇರಿಸಿದೆ’ ಎಂದು ಉಲ್ಲೇಖಿಸಲಾಗಿದೆ.</p><p>ಸರ್ಕಾರವು ತನ್ನ ರಾಜಕೀಯ ಪ್ರಚಾರಕ್ಕಾಗಿ ನೌಕಕರ ವೈಯಕ್ತಿಕ ದತ್ತಾಂಶವನ್ನು ಅಕ್ರಮವಾಗಿ ಬಳಸಿಕೊಂಡಿದೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ನಲ್ಲಿ ಕೆಲವು ಮಂದಿ ಅರ್ಜಿಯನ್ನೂ ಸಲ್ಲಿಸಿದ್ದಾರೆ. ನ್ಯಾಯಾಲಯವು ಮಂಗಳವಾರ ಈ ಅರ್ಜಿಗಳನ್ನು ಪರಿಗಣಿಸುವ ಸಾಧ್ಯತೆ ಇದೆ.</p><p>ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವಾಗಲೇ ನಡೆದಿರುವ ಈ ಬೆಳವಣಿಗೆ ರಾಜಕೀಯ ಚರ್ಚೆಗೂ ಗ್ರಾಸವಾಗಿದೆ. ‘ಚುನಾವಣಾ ಉದ್ದೇಶಕ್ಕಾಗಿ ಸರ್ಕಾರಿ ನೌಕಕರ ದತ್ತಾಂಶವನ್ನು ಕಳವು ಮಾಡುವ ಮೂಲಕ ಮುಖ್ಯಮಂತ್ರಿಗಳು ನೇರವಾಗಿ ಸಿಕ್ಕಿಬಿದ್ದಿದ್ದಾರೆ. ಇದು ವಿಶ್ವಾಸ ಮತ್ತು ಖಾಸಗಿತನದ ಉಲ್ಲಂಘನೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಏತನ್ಮಧ್ಯೆ, ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನವನ್ನು ಪರಿಷ್ಕರಿಸಲು ನೂತನ ವೇತನ ಆಯೋಗವನ್ನು ರಾಜ್ಯ ಸರ್ಕಾರ ಸೋಮವಾರ ಘೋಷಿಸಿದೆ. ಮಾಜಿ ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಅವರು ಆಯೋಗದ ನೇತೃತ್ವ ವಹಿಸಲಿದ್ದು, ಅವರಿಗೆ ಈ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆಯೂ ಸರ್ಕಾರ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದ ಎಲ್ಲಾ ಸರ್ಕಾರಿ ನೌಕರರ ಮೊಬೈಲ್ ಸಂಖ್ಯೆಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ವೈಯಕ್ತಿಕ ಸಂದೇಶ ರವಾನೆಯಾಗಿದ್ದು, ಇದೀಗ ಸರ್ಕಾರಿ ನೌಕರರ ವೈಯಕ್ತಿಕ ದತ್ತಾಂಶ ಕಳವು ಆರೋಪಕ್ಕೆ ಕಾರಣವಾಗಿದೆ. ಜತೆಗೆ ವಿವಾದಕ್ಕೀಡಾಗಿದೆ. </p><p>ಎಲ್ಲಾ ಸರ್ಕಾರಿ ನೌಕರರ ಮೊಬೈಲ್ ಸಂಖ್ಯೆಗೆ ರವಾನೆಯಾಗಿರುವ ಸಂದೇಶದಲ್ಲಿ ಅವರವರ ಹೆಸರನ್ನು ಸಂಬೋಧಿಸುವ ಜತೆಗೆ ‘ ಬಾಕಿ ಉಳಿದಿದ್ದ ತುಟ್ಟಿ ಭತ್ಯೆಯನ್ನು ಸರ್ಕಾರಿ ನೌಕರರಿಗೆ ವಿತರಿಸಲಾಗಿದ್ದು, ಈ ಮೂಲಕ ಸರ್ಕಾರ ತಾನು ನೀಡಿದ್ದ ಭರವಸೆಯನ್ನು ಈಡೇರಿಸಿದೆ’ ಎಂದು ಉಲ್ಲೇಖಿಸಲಾಗಿದೆ.</p><p>ಸರ್ಕಾರವು ತನ್ನ ರಾಜಕೀಯ ಪ್ರಚಾರಕ್ಕಾಗಿ ನೌಕಕರ ವೈಯಕ್ತಿಕ ದತ್ತಾಂಶವನ್ನು ಅಕ್ರಮವಾಗಿ ಬಳಸಿಕೊಂಡಿದೆ ಎಂದು ಆರೋಪಿಸಿ ಕೇರಳ ಹೈಕೋರ್ಟ್ನಲ್ಲಿ ಕೆಲವು ಮಂದಿ ಅರ್ಜಿಯನ್ನೂ ಸಲ್ಲಿಸಿದ್ದಾರೆ. ನ್ಯಾಯಾಲಯವು ಮಂಗಳವಾರ ಈ ಅರ್ಜಿಗಳನ್ನು ಪರಿಗಣಿಸುವ ಸಾಧ್ಯತೆ ಇದೆ.</p><p>ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿರುವಾಗಲೇ ನಡೆದಿರುವ ಈ ಬೆಳವಣಿಗೆ ರಾಜಕೀಯ ಚರ್ಚೆಗೂ ಗ್ರಾಸವಾಗಿದೆ. ‘ಚುನಾವಣಾ ಉದ್ದೇಶಕ್ಕಾಗಿ ಸರ್ಕಾರಿ ನೌಕಕರ ದತ್ತಾಂಶವನ್ನು ಕಳವು ಮಾಡುವ ಮೂಲಕ ಮುಖ್ಯಮಂತ್ರಿಗಳು ನೇರವಾಗಿ ಸಿಕ್ಕಿಬಿದ್ದಿದ್ದಾರೆ. ಇದು ವಿಶ್ವಾಸ ಮತ್ತು ಖಾಸಗಿತನದ ಉಲ್ಲಂಘನೆ’ ಎಂದು ಕಾಂಗ್ರೆಸ್ ಆರೋಪಿಸಿದೆ.</p><p>ಏತನ್ಮಧ್ಯೆ, ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ವೇತನವನ್ನು ಪರಿಷ್ಕರಿಸಲು ನೂತನ ವೇತನ ಆಯೋಗವನ್ನು ರಾಜ್ಯ ಸರ್ಕಾರ ಸೋಮವಾರ ಘೋಷಿಸಿದೆ. ಮಾಜಿ ಮುಖ್ಯ ಕಾರ್ಯದರ್ಶಿ ವಿ.ಪಿ.ಜಾಯ್ ಅವರು ಆಯೋಗದ ನೇತೃತ್ವ ವಹಿಸಲಿದ್ದು, ಅವರಿಗೆ ಈ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆಯೂ ಸರ್ಕಾರ ಸೂಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>