<p><strong>ತಿರುವನಂತಪುರ:</strong> ಕೇರಳ ಸರ್ಕಾರವು ರಾಜ್ಯದ ನಗರ ಮತ್ತು ಗ್ರಾಮೀಣ ಭಾಗದ ಉದ್ಯೋಗ ಖಾತ್ರಿ ನೌಕರರಿಗೆ ಓಣಂ ಪ್ರಯುಕ್ತ ವಿಶೇಷ ಸೌಲಭ್ಯ ಒದಗಿಸಿದೆ. </p><p>‘ಓಣಂ ಪ್ರಯುಕ್ತ ರಾಜ್ಯದಲ್ಲಿರುವ ಉದ್ಯೋಗ ಖಾತ್ರಿ ನೌಕರರಿಗೆ ತಲಾ ₹ 1,200 ಮೊತ್ತವನ್ನು ಪಾವತಿಸಲಾಗುವುದು. ಕಳೆದ ಬಾರಿ ಪ್ರತಿಯೊಬ್ಬರಿಗೂ ₹ 1,000 ಕೊಡಲಾಗಿತ್ತು. ಈ ಬಾರಿ ₹ 200 ಜಾಸ್ತಿ ನೀಡಲಾಗುತ್ತಿದೆ. ಇದರಿಂದ ಸುಮಾರು 5,26,000 ಕಾರ್ಮಿಕರಿಗೆ ಸಹಾಯವಾಗಲಿದೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ. </p><p>ಕಳೆದ ಹಣಕಾಸು ವರ್ಷದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100ಕ್ಕೂ ಅಧಿಕ ದಿನ ಕಾರ್ಯನಿರ್ವಹಿಸಿರುವ 5,19,000 ಕಾರ್ಮಿಕರಿಗಾಗಿ ₹ 51.96 ಕೋಟಿ ಹಾಗೂ ಅಯ್ಯಂಕಳಿ ನಗರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿರುವ 6,368 ಕಾರ್ಮಿಕರಿಗಾಗಿ ₹ 63.68 ಲಕ್ಷ ಹಣವನ್ನು ಮೀಸಲಿಡಲಾಗಿದೆ. ಅವರ ದಿನಗೂಲಿಯನ್ನು ಹೊರತುಪಡಿಸಿ, ಈ ಮೊತ್ತವನ್ನು ಹಬ್ಬದ ಪ್ರಯುಕ್ತ ಅವರಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ಸರ್ಕಾರವು ರಾಜ್ಯದ ನಗರ ಮತ್ತು ಗ್ರಾಮೀಣ ಭಾಗದ ಉದ್ಯೋಗ ಖಾತ್ರಿ ನೌಕರರಿಗೆ ಓಣಂ ಪ್ರಯುಕ್ತ ವಿಶೇಷ ಸೌಲಭ್ಯ ಒದಗಿಸಿದೆ. </p><p>‘ಓಣಂ ಪ್ರಯುಕ್ತ ರಾಜ್ಯದಲ್ಲಿರುವ ಉದ್ಯೋಗ ಖಾತ್ರಿ ನೌಕರರಿಗೆ ತಲಾ ₹ 1,200 ಮೊತ್ತವನ್ನು ಪಾವತಿಸಲಾಗುವುದು. ಕಳೆದ ಬಾರಿ ಪ್ರತಿಯೊಬ್ಬರಿಗೂ ₹ 1,000 ಕೊಡಲಾಗಿತ್ತು. ಈ ಬಾರಿ ₹ 200 ಜಾಸ್ತಿ ನೀಡಲಾಗುತ್ತಿದೆ. ಇದರಿಂದ ಸುಮಾರು 5,26,000 ಕಾರ್ಮಿಕರಿಗೆ ಸಹಾಯವಾಗಲಿದೆ’ ಎಂದು ಕೇರಳ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲ್ ತಿಳಿಸಿದ್ದಾರೆ. </p><p>ಕಳೆದ ಹಣಕಾಸು ವರ್ಷದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ 100ಕ್ಕೂ ಅಧಿಕ ದಿನ ಕಾರ್ಯನಿರ್ವಹಿಸಿರುವ 5,19,000 ಕಾರ್ಮಿಕರಿಗಾಗಿ ₹ 51.96 ಕೋಟಿ ಹಾಗೂ ಅಯ್ಯಂಕಳಿ ನಗರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ಮಾಡಿರುವ 6,368 ಕಾರ್ಮಿಕರಿಗಾಗಿ ₹ 63.68 ಲಕ್ಷ ಹಣವನ್ನು ಮೀಸಲಿಡಲಾಗಿದೆ. ಅವರ ದಿನಗೂಲಿಯನ್ನು ಹೊರತುಪಡಿಸಿ, ಈ ಮೊತ್ತವನ್ನು ಹಬ್ಬದ ಪ್ರಯುಕ್ತ ಅವರಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>