ತಿರುವನಂತಪುರ: ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಎರಡು ವಿಶ್ವವಿದ್ಯಾಲಯಗಳಿಗೆ ಹಂಗಾಮಿ ಕುಲಪತಿಗಳನ್ನು ನೇಮಕ ಮಾಡಿದ್ದಾರೆ.
ಕೇರಳ ವೈದ್ಯಕೀಯ ಮತ್ತು ಪಶು ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಪ್ರಾಧ್ಯಾಪಕ ಕೆ.ಎಸ್. ಅನಿಲ್ ಅವರನ್ನು ಹಾಗೂ ಶ್ರೀನಾರಾಯಣಗುರು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಹಿರಿಯ ಪ್ರಾಧ್ಯಾಪಕರಾದ ಜಗತಿ ವಿ.ಪಿ ಅವರನ್ನು ನೇಮಿಸಲಾಗಿದೆ ಎಂದು ರಾಜಭವನ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.