<p><strong>ತಿರುವನಂತಪುರ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಸಂಸ್ಥೆಗೂ ಮಿತಿಗಳಿರುತ್ತವೆ. ಆರೋಗ್ಯಪೂರ್ಣ ಪ್ರಜಾಪ್ರಭುತ್ವ ಕಾರ್ಯನಿರ್ವಹಣೆಯು ಆ ಮಿತಿಗಳನ್ನು ಅರಿಯುವುದು ಮತ್ತು ಗೌರವಿಸುವುದರ ಮೇಲೆ ಅವಲಂಬಿತವಾಗಿದೆ’ ಎಂದು ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಭಿಪ್ರಾಯಪಟ್ಟರು.</p>.<p>ಕಾನೂನು ಟ್ರಸ್ಟ್ (ಕಾನೂನು ನೆರವು ಮತ್ತು ಕಲ್ಯಾಣ ಟ್ರಸ್ಟ್) ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮತ್ತು ಕೇರಳದ ಮಾಜಿ ರಾಜ್ಯಪಾಲ ಪಿ.ಸದಾಶಿವಂ ಅವರಿಗೆ ‘ನ್ಯಾಯಮೂರ್ತಿ ವಿ.ಆರ್ ಕೃಷ್ಣಅಯ್ಯರ್ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ಕಾನೂನು ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ.</p>.<p>ಕೇರಳದ ಎರಡು ತಾಂತ್ರಿಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕಕ್ಕೆ ತಲಾ ಒಬ್ಬರ ಹೆಸರು ಶಿಫಾರಸು ಮಾಡಲು ನಿವೃತ್ತ ನ್ಯಾ. ಸುಧಾಂಶು ಧೂಲಿಯಾ ನೇತೃತ್ವದ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ, ಈ ಬಗ್ಗೆ ರಾಜ್ಯಪಾಲರು ಮತ್ತು ಕೇರಳ ಮುಖ್ಯಮಂತ್ರಿ ನಡುವಿನ ಬಿಕ್ಕಟ್ಟು ಪರಿಹರಿಸುವ ದಿಸೆಯಲ್ಲಿ ಅರ್ಲೇಕರ್ ಈ ರೀತಿ ಹೇಳಿದ್ದಾರೆ.</p>.<p>ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದಾಶಿವಂ, ‘ಸಮಾಜವು ಹೆಚ್ಚು ಹೆಚ್ಚು ಡಿಜಿಟಲ್ ಆಗುತ್ತಿದ್ದರೂ, ಕೋರ್ಟ್ಗಳು, ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಮಾನವತಾವಾದಿ ಆದರ್ಶಗಳಿಗೆ ಬದ್ಧವಾಗಿರಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೇರಳ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಎಚ್. ನಗರೇಶ್, ಕೆ. ಬಾಬು ಮತ್ತು ಎ.ಬದರುದ್ದೀನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿ ಸಂಸ್ಥೆಗೂ ಮಿತಿಗಳಿರುತ್ತವೆ. ಆರೋಗ್ಯಪೂರ್ಣ ಪ್ರಜಾಪ್ರಭುತ್ವ ಕಾರ್ಯನಿರ್ವಹಣೆಯು ಆ ಮಿತಿಗಳನ್ನು ಅರಿಯುವುದು ಮತ್ತು ಗೌರವಿಸುವುದರ ಮೇಲೆ ಅವಲಂಬಿತವಾಗಿದೆ’ ಎಂದು ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅಭಿಪ್ರಾಯಪಟ್ಟರು.</p>.<p>ಕಾನೂನು ಟ್ರಸ್ಟ್ (ಕಾನೂನು ನೆರವು ಮತ್ತು ಕಲ್ಯಾಣ ಟ್ರಸ್ಟ್) ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಮತ್ತು ಕೇರಳದ ಮಾಜಿ ರಾಜ್ಯಪಾಲ ಪಿ.ಸದಾಶಿವಂ ಅವರಿಗೆ ‘ನ್ಯಾಯಮೂರ್ತಿ ವಿ.ಆರ್ ಕೃಷ್ಣಅಯ್ಯರ್ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು. ಕಾನೂನು ಟ್ರಸ್ಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದೆ.</p>.<p>ಕೇರಳದ ಎರಡು ತಾಂತ್ರಿಕ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳ ನೇಮಕಕ್ಕೆ ತಲಾ ಒಬ್ಬರ ಹೆಸರು ಶಿಫಾರಸು ಮಾಡಲು ನಿವೃತ್ತ ನ್ಯಾ. ಸುಧಾಂಶು ಧೂಲಿಯಾ ನೇತೃತ್ವದ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ದೇಶನದ ನಂತರ, ಈ ಬಗ್ಗೆ ರಾಜ್ಯಪಾಲರು ಮತ್ತು ಕೇರಳ ಮುಖ್ಯಮಂತ್ರಿ ನಡುವಿನ ಬಿಕ್ಕಟ್ಟು ಪರಿಹರಿಸುವ ದಿಸೆಯಲ್ಲಿ ಅರ್ಲೇಕರ್ ಈ ರೀತಿ ಹೇಳಿದ್ದಾರೆ.</p>.<p>ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸದಾಶಿವಂ, ‘ಸಮಾಜವು ಹೆಚ್ಚು ಹೆಚ್ಚು ಡಿಜಿಟಲ್ ಆಗುತ್ತಿದ್ದರೂ, ಕೋರ್ಟ್ಗಳು, ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ ಮಾನವತಾವಾದಿ ಆದರ್ಶಗಳಿಗೆ ಬದ್ಧವಾಗಿರಬೇಕು’ ಎಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೇರಳ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಎಚ್. ನಗರೇಶ್, ಕೆ. ಬಾಬು ಮತ್ತು ಎ.ಬದರುದ್ದೀನ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>