<p><strong>ತಿರುವನಂತರಪುರ</strong>: ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ಶ್ರೀ ಶಂಕರಾಚಾರ್ಯ ಸಂಸ್ಕೃತಿ ವಿಶ್ವವಿದ್ಯಾಲದಯದ ಕುಲಪತಿಗಳು ತಮ್ಮ ಹುದ್ದೆ ತೊರೆಯುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೂಚಿಸಿದ್ದಾರೆ.</p>.<p>ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಉಲ್ಲಂಘಿಸಿ ಈ ಇಬ್ಬರು ಕುಲಪತಿಗಳ ನೇಮಕ ಆಗಿರುವ ಕಾರಣ, ಅವರಿಗೆ ಹುದ್ದೆ ತೊರೆಯುವಂತೆ ಸೂಚನೆ ನೀಡಲಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. </p>.<p>ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಈ ಇಬ್ಬರು ಕುಲಪತಿಗಳ ನೇಮಕಾತಿಗಳನ್ನು ಅನೂರ್ಜಿತ ಎಂದು ಪರಿಗಣಿಸಲಾಗಿದೆ. ಆದರೆ, ಕೇರಳ ಹೈಕೋರ್ಟ್ ನಿರ್ದೇಶನದಿಂದಾಗಿ ರಾಜ್ಯಪಾಲರ ಆದೇಶವನ್ನು ಇನ್ನೂ 10 ದಿನಗಳವರೆಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಯುಜಿಸಿ ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ನೇಮಕವನ್ನು ಸುಪ್ರೀಂ ಕೋರ್ಟ್ 2022ರ ಅಕ್ಟೋಬರ್ನಲ್ಲಿ ರದ್ದುಗೊಳಿಸಿತ್ತು. ಈ ತೀರ್ಪಿನ ಬಳಿಕ ರಾಜ್ಯಪಾಲರು ವಿವಿಧ ಕುಲಪತಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಈ ಕುರಿತು ಆರು ವಾರಗಳಲ್ಲಿ ಕುಲಪತಿಗಳ ವಿಚಾರಣೆ ನಡೆಸುವಂತೆ ಕುಲಾಧಿಪತಿಯಾದ ರಾಜ್ಯಪಾಲರಿಗೆ ಕೇರಳ ಹೈಕೋರ್ಟ್ ಈ ವರ್ಷದ ಜನವರಿಯಲ್ಲಿ ತಿಳಿಸಿತ್ತು. ಅಲ್ಲದೆ ಆ ನಂತರ ತೆಗೆದುಕೊಂಡ ಯಾವುದೇ ನಿರ್ಧಾರವನ್ನು 10 ದಿನಗಳವರೆಗೆ ಜಾರಿಗೊಳಿಸದಂತೆ ನಿರ್ದೇಶಿಸಿತ್ತು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತರಪುರ</strong>: ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ಶ್ರೀ ಶಂಕರಾಚಾರ್ಯ ಸಂಸ್ಕೃತಿ ವಿಶ್ವವಿದ್ಯಾಲದಯದ ಕುಲಪತಿಗಳು ತಮ್ಮ ಹುದ್ದೆ ತೊರೆಯುವಂತೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸೂಚಿಸಿದ್ದಾರೆ.</p>.<p>ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಉಲ್ಲಂಘಿಸಿ ಈ ಇಬ್ಬರು ಕುಲಪತಿಗಳ ನೇಮಕ ಆಗಿರುವ ಕಾರಣ, ಅವರಿಗೆ ಹುದ್ದೆ ತೊರೆಯುವಂತೆ ಸೂಚನೆ ನೀಡಲಾಗಿದೆ ಎಂದು ಗುರುವಾರ ಮೂಲಗಳು ತಿಳಿಸಿವೆ. </p>.<p>ಕುಲಪತಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಈ ಇಬ್ಬರು ಕುಲಪತಿಗಳ ನೇಮಕಾತಿಗಳನ್ನು ಅನೂರ್ಜಿತ ಎಂದು ಪರಿಗಣಿಸಲಾಗಿದೆ. ಆದರೆ, ಕೇರಳ ಹೈಕೋರ್ಟ್ ನಿರ್ದೇಶನದಿಂದಾಗಿ ರಾಜ್ಯಪಾಲರ ಆದೇಶವನ್ನು ಇನ್ನೂ 10 ದಿನಗಳವರೆಗೆ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಮೂಲಗಳು ತಿಳಿಸಿವೆ.</p>.<p>ಯುಜಿಸಿ ನಿಯಮಾವಳಿಗೆ ವಿರುದ್ಧವಾಗಿದೆ ಎಂದು ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ನೇಮಕವನ್ನು ಸುಪ್ರೀಂ ಕೋರ್ಟ್ 2022ರ ಅಕ್ಟೋಬರ್ನಲ್ಲಿ ರದ್ದುಗೊಳಿಸಿತ್ತು. ಈ ತೀರ್ಪಿನ ಬಳಿಕ ರಾಜ್ಯಪಾಲರು ವಿವಿಧ ಕುಲಪತಿಗಳಿಗೆ ಶೋಕಾಸ್ ನೋಟಿಸ್ ನೀಡಿದ್ದರು. ಅದನ್ನು ಪ್ರಶ್ನಿಸಿ ಕೆಲವರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಈ ಕುರಿತು ಆರು ವಾರಗಳಲ್ಲಿ ಕುಲಪತಿಗಳ ವಿಚಾರಣೆ ನಡೆಸುವಂತೆ ಕುಲಾಧಿಪತಿಯಾದ ರಾಜ್ಯಪಾಲರಿಗೆ ಕೇರಳ ಹೈಕೋರ್ಟ್ ಈ ವರ್ಷದ ಜನವರಿಯಲ್ಲಿ ತಿಳಿಸಿತ್ತು. ಅಲ್ಲದೆ ಆ ನಂತರ ತೆಗೆದುಕೊಂಡ ಯಾವುದೇ ನಿರ್ಧಾರವನ್ನು 10 ದಿನಗಳವರೆಗೆ ಜಾರಿಗೊಳಿಸದಂತೆ ನಿರ್ದೇಶಿಸಿತ್ತು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>