<p><strong>ತಿರುವನಂತಪುರ:</strong> ಮಲಯಾಳಕ್ಕೆ ಕೇರಳದ ಏಕೈಕ ಅಧಿಕೃತ ಭಾಷೆ ಸ್ಥಾನಮಾನ ಕಲ್ಪಿಸುವ ಮಸೂದೆಗೆ ಅಲ್ಲಿನ ರಾಜ್ಯಪಾಲ ರಾಜೇಂದ್ರ ವಿ.ಅರ್ಲೇಕರ್ ಬುಧವಾರ ಅಂಕಿತ ಹಾಕಿದ್ದಾರೆ.</p>.<p>‘ಮಲಯಾಳಂ ಭಾಷಾ ಮಸೂದೆ 2025’ಅನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ವಿಧಾನಸಭೆ ಅಂಗೀಕರಿಸಿತ್ತು. ಇದಕ್ಕೆ ಈಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ’ ಎಂದು ಲೋಕಭವನ ಮೂಲಗಳು ಹೇಳಿವೆ.</p>.<p>ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ, 10ನೇ ತರಗತಿವರೆಗೆ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಲಿಸುವುದು ಕಡ್ಡಾಯ ಎಂಬ ಅಂಶವನ್ನು ಈ ಮಸೂದೆ ಒಳಗೊಂಡಿದೆ.</p>.<p>ಈ ಮಸೂದೆಗೆ ಕರ್ನಾಟಕ ಸರ್ಕಾರದಿಂದ ವಿರೋಧ ವ್ಯಕ್ತವಾಗಿತ್ತು. ಈ ಮಸೂದೆ ಕಾಯ್ದೆಯಾಗಿ ಜಾರಿಗೊಂಡ ಬಳಿಕ ಗಡಿಭಾಗದ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಲಯಾಳ ಕಲಿಯಬೇಕಾಗುತ್ತದೆ ಎಂದು ಕಳಕಳ ವ್ಯಕ್ತಪಡಿಸಿತ್ತು.</p>.<p>‘ಕನ್ನಡ ಮತ್ತು ತಮಿಳು ಮಾತನಾಡುವವರ ಹಕ್ಕುಗಳನ್ನು ರಕ್ಷಿಸುವುದಕ್ಕೆ ಸಂಬಂಧಿಸಿದ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಮಲಯಾಳಕ್ಕೆ ಕೇರಳದ ಏಕೈಕ ಅಧಿಕೃತ ಭಾಷೆ ಸ್ಥಾನಮಾನ ಕಲ್ಪಿಸುವ ಮಸೂದೆಗೆ ಅಲ್ಲಿನ ರಾಜ್ಯಪಾಲ ರಾಜೇಂದ್ರ ವಿ.ಅರ್ಲೇಕರ್ ಬುಧವಾರ ಅಂಕಿತ ಹಾಕಿದ್ದಾರೆ.</p>.<p>‘ಮಲಯಾಳಂ ಭಾಷಾ ಮಸೂದೆ 2025’ಅನ್ನು ಕಳೆದ ವರ್ಷ ಅಕ್ಟೋಬರ್ನಲ್ಲಿ ವಿಧಾನಸಭೆ ಅಂಗೀಕರಿಸಿತ್ತು. ಇದಕ್ಕೆ ಈಗ ರಾಜ್ಯಪಾಲರು ಅಂಕಿತ ಹಾಕಿದ್ದಾರೆ’ ಎಂದು ಲೋಕಭವನ ಮೂಲಗಳು ಹೇಳಿವೆ.</p>.<p>ರಾಜ್ಯದ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ, 10ನೇ ತರಗತಿವರೆಗೆ ಮಲಯಾಳವನ್ನು ಪ್ರಥಮ ಭಾಷೆಯಾಗಿ ಕಲಿಸುವುದು ಕಡ್ಡಾಯ ಎಂಬ ಅಂಶವನ್ನು ಈ ಮಸೂದೆ ಒಳಗೊಂಡಿದೆ.</p>.<p>ಈ ಮಸೂದೆಗೆ ಕರ್ನಾಟಕ ಸರ್ಕಾರದಿಂದ ವಿರೋಧ ವ್ಯಕ್ತವಾಗಿತ್ತು. ಈ ಮಸೂದೆ ಕಾಯ್ದೆಯಾಗಿ ಜಾರಿಗೊಂಡ ಬಳಿಕ ಗಡಿಭಾಗದ ಭಾಷಾ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಕಡ್ಡಾಯವಾಗಿ ಮಲಯಾಳ ಕಲಿಯಬೇಕಾಗುತ್ತದೆ ಎಂದು ಕಳಕಳ ವ್ಯಕ್ತಪಡಿಸಿತ್ತು.</p>.<p>‘ಕನ್ನಡ ಮತ್ತು ತಮಿಳು ಮಾತನಾಡುವವರ ಹಕ್ಕುಗಳನ್ನು ರಕ್ಷಿಸುವುದಕ್ಕೆ ಸಂಬಂಧಿಸಿದ ಅವಕಾಶಗಳನ್ನು ಈ ಮಸೂದೆ ಒಳಗೊಂಡಿದೆ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಗ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>