<p><strong>ತಿರುವನಂತಪುರಂ</strong>: ಸಾಮಾಜಿಕ ಪಿಡುಗಾಗಿರುವ ವರದಕ್ಷಿಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಇಲ್ಲಿ ನಡೆಯುವ ’ವರದಕ್ಷಿಣೆ ವಿರೋಧಿ ಉಪವಾಸ ದಿನ’ದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘಟನೆಗಳ ಸಹಯೋಗದಲ್ಲಿ ಇಲ್ಲಿನ ಗಾಂಧಿ ಭವನದಲ್ಲಿ ಮುಂಜಾನೆಯಿಂದ ಸಂಜೆವರೆಗೆ ನಡೆಯಲಿರುವ ಒಂದು ದಿನದ ಉಪವಾಸ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಲಿದ್ದಾರೆ.</p>.<p>ಗಾಂಧಿ ವಿಚಾರಧಾರೆಗಳನ್ನು ಅನುಸರಿಸುವ ರಾಜ್ಯವ ವಿವಿಧ ಸಂಘಟನೆಗಳು ಕರೆ ನೀಡಿದ ’ವರದಕ್ಷಿಣೆ ವಿರೋಧಿ ಉಪವಾಸ ದಿನ’ದಲ್ಲಿ ಪಾಲ್ಗೊಳ್ಳುವ ರಾಜ್ಯಪಾಲರು, ಸಂಜೆ ನಡೆಯುವ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.</p>.<p>ವರದಕ್ಷಿಣೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೊನೆಗೊಳಿಸುವ ಹಾಗೂ ಕೇರಳ, ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂಬ ಭಾವನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.</p>.<p>ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಯಾವುದೇ ’ಸಂಘಟಿತ’ ಸ್ವಯಂಪ್ರೇರಿತ ಚಳವಳಿಯಲ್ಲಿ ಪಾಲ್ಗೊಳ್ಳುವುದಾಗಿ ಕಳೆದ ತಿಂಗಳು ರಾಜ್ಯಪಾಲರು ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಸಾಮಾಜಿಕ ಪಿಡುಗಾಗಿರುವ ವರದಕ್ಷಿಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಇಲ್ಲಿ ನಡೆಯುವ ’ವರದಕ್ಷಿಣೆ ವಿರೋಧಿ ಉಪವಾಸ ದಿನ’ದಲ್ಲಿ ಪಾಲ್ಗೊಳ್ಳಲಿದ್ದಾರೆ.</p>.<p>ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘಟನೆಗಳ ಸಹಯೋಗದಲ್ಲಿ ಇಲ್ಲಿನ ಗಾಂಧಿ ಭವನದಲ್ಲಿ ಮುಂಜಾನೆಯಿಂದ ಸಂಜೆವರೆಗೆ ನಡೆಯಲಿರುವ ಒಂದು ದಿನದ ಉಪವಾಸ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಭಾಗವಹಿಸಲಿದ್ದಾರೆ.</p>.<p>ಗಾಂಧಿ ವಿಚಾರಧಾರೆಗಳನ್ನು ಅನುಸರಿಸುವ ರಾಜ್ಯವ ವಿವಿಧ ಸಂಘಟನೆಗಳು ಕರೆ ನೀಡಿದ ’ವರದಕ್ಷಿಣೆ ವಿರೋಧಿ ಉಪವಾಸ ದಿನ’ದಲ್ಲಿ ಪಾಲ್ಗೊಳ್ಳುವ ರಾಜ್ಯಪಾಲರು, ಸಂಜೆ ನಡೆಯುವ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.</p>.<p>ವರದಕ್ಷಿಣೆಯಿಂದ ಸಮಾಜದಲ್ಲಿ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಕೊನೆಗೊಳಿಸುವ ಹಾಗೂ ಕೇರಳ, ಮಹಿಳೆಯರಿಗೆ ಸುರಕ್ಷಿತ ರಾಜ್ಯ ಎಂಬ ಭಾವನೆ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.</p>.<p>ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಯಾವುದೇ ’ಸಂಘಟಿತ’ ಸ್ವಯಂಪ್ರೇರಿತ ಚಳವಳಿಯಲ್ಲಿ ಪಾಲ್ಗೊಳ್ಳುವುದಾಗಿ ಕಳೆದ ತಿಂಗಳು ರಾಜ್ಯಪಾಲರು ಕಾರ್ಯಕ್ರಮವೊಂದರಲ್ಲಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>