<p><strong>ತಿರುವನಂತಪುರ</strong>: ಕಳೆದ ವರ್ಷ ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಲಾ ₹10 ಲಕ್ಷ ಶೈಕ್ಷಣಿಕ ನೆರವನ್ನು ರಾಜ್ಯ ಸರ್ಕಾರ ಘೋಷಿಸಿದೆ.</p><p>ಮೆಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡ 7 ಮಕ್ಕಳು ಹಾಗೂ ಪೋಷಕರೊಬ್ಬರನ್ನು ಕಳೆದುಕೊಂಡ 14 ಮಕ್ಕಳಿಗೆ ತಲಾ ₹10 ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.ಹವಾಮಾನ ಬದಲಾವಣೆಯಿಂದ ಶೇ10ರಷ್ಟು ಹೆಚ್ಚು ಮಳೆ ವಯನಾಡು ದುರಂತಕ್ಕೆ ಕಾರಣ: ಅಧ್ಯಯನ .ಟೀಮ್ ಇಂಡಿಯಾದ ಯಶಸ್ಸು ಐಪಿಎಲ್ನಲ್ಲೂ ಮುಂದುವರಿಸಲಿದ್ದೇನೆ: ಹಾರ್ದಿಕ್ ವಿಶ್ವಾಸ. <p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ತಿಳಿಸಿದೆ.</p><p>ಮಕ್ಕಳಿಗೆ 18 ವರ್ಷ ಪೂರ್ಣಗೊಳ್ಳುವವರೆಗೂ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ಷರತ್ತಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವನ್ನು ಒದಗಿಸಲಾಗಿದೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಲಾಗಿದ್ದ ಆರ್ಥಿಕ ನೆರವಿಗೆ ಇದು ಹೆಚ್ಚುವರಿಯಾಗಿ ಸೇರ್ಪಡೆಗೊಳ್ಳುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ. </p><p>ಜಿಲ್ಲಾಡಳಿತದ ಖಾತೆಗೆ ಹಣವನ್ನು ಜಮೆ ಮಾಡಿ, ಅದರ ಮಾಸಿಕ ಬಡ್ಡಿಯನ್ನು ಆಯಾ ಮಕ್ಕಳನ್ನು ನೋಡಿಕೊಳ್ಳುವವರಿಗೆ ಪಾವತಿಸುವ ಕೆಲಸವನ್ನು ವಯನಾಡು ಜಿಲ್ಲಾಧಿಕಾರಿಗೆ ವಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ</p><p>ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಬದುಕುಳಿದವರ ಪುನರ್ವಸತಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.</p>.ನಾಗ್ಪುರ ಹಿಂಸಾಚಾರ: ಮಹಿಳಾ ಕಾನ್ಸ್ಟೆಬಲ್ ಮೇಲೆ ಗಲಭೆಕೋರರಿಂದ ಲೈಂಗಿಕ ದೌರ್ಜನ್ಯ.ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ.ಪೊಲೀಸರಂತೆ ನಟಿಸಿ ಆಭರಣ ಲೂಟಿ: 24 ತಾಸಿನೊಳಗೆ ಮೂವರ ಬಂಧನ.ಮಹಾರಾಷ್ಟ್ರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ಸಮೀಪ ಡ್ರೋನ್ ಹಾರಾಟ ನಿಷೇಧ.ವಯನಾಡು ಭೂಕುಸಿತ | ಸೇನಾ ಕಾರ್ಯಕ್ಕೆ ಮೆಚ್ಚುಗೆ; ವಿದ್ಯಾರ್ಥಿಯ ಹೃದಯಸ್ಪರ್ಶಿ ಪತ್ರ.ವಯನಾಡು ಭೂಕುಸಿತ: ಮೃತರ ಸಂಖ್ಯೆ 221ಕ್ಕೆ ಏರಿಕೆ, ಇನ್ನೂ 180 ಮಂದಿ ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕಳೆದ ವರ್ಷ ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ತಲಾ ₹10 ಲಕ್ಷ ಶೈಕ್ಷಣಿಕ ನೆರವನ್ನು ರಾಜ್ಯ ಸರ್ಕಾರ ಘೋಷಿಸಿದೆ.</p><p>ಮೆಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಂದೆ–ತಾಯಿ ಇಬ್ಬರನ್ನೂ ಕಳೆದುಕೊಂಡ 7 ಮಕ್ಕಳು ಹಾಗೂ ಪೋಷಕರೊಬ್ಬರನ್ನು ಕಳೆದುಕೊಂಡ 14 ಮಕ್ಕಳಿಗೆ ತಲಾ ₹10 ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.ಹವಾಮಾನ ಬದಲಾವಣೆಯಿಂದ ಶೇ10ರಷ್ಟು ಹೆಚ್ಚು ಮಳೆ ವಯನಾಡು ದುರಂತಕ್ಕೆ ಕಾರಣ: ಅಧ್ಯಯನ .ಟೀಮ್ ಇಂಡಿಯಾದ ಯಶಸ್ಸು ಐಪಿಎಲ್ನಲ್ಲೂ ಮುಂದುವರಿಸಲಿದ್ದೇನೆ: ಹಾರ್ದಿಕ್ ವಿಶ್ವಾಸ. <p>ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದೂ ತಿಳಿಸಿದೆ.</p><p>ಮಕ್ಕಳಿಗೆ 18 ವರ್ಷ ಪೂರ್ಣಗೊಳ್ಳುವವರೆಗೂ ಹಣವನ್ನು ಹಿಂಪಡೆಯಲು ಸಾಧ್ಯವಿಲ್ಲ ಎಂಬ ಷರತ್ತಿನ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವನ್ನು ಒದಗಿಸಲಾಗಿದೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಲಾಗಿದ್ದ ಆರ್ಥಿಕ ನೆರವಿಗೆ ಇದು ಹೆಚ್ಚುವರಿಯಾಗಿ ಸೇರ್ಪಡೆಗೊಳ್ಳುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ. </p><p>ಜಿಲ್ಲಾಡಳಿತದ ಖಾತೆಗೆ ಹಣವನ್ನು ಜಮೆ ಮಾಡಿ, ಅದರ ಮಾಸಿಕ ಬಡ್ಡಿಯನ್ನು ಆಯಾ ಮಕ್ಕಳನ್ನು ನೋಡಿಕೊಳ್ಳುವವರಿಗೆ ಪಾವತಿಸುವ ಕೆಲಸವನ್ನು ವಯನಾಡು ಜಿಲ್ಲಾಧಿಕಾರಿಗೆ ವಹಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ</p><p>ವಯನಾಡಿನ ಮುಂಡಕ್ಕೈ ಮತ್ತು ಚೂರಲ್ಮಲದಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಬದುಕುಳಿದವರ ಪುನರ್ವಸತಿಗಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಪರಿಹಾರ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ.</p>.ನಾಗ್ಪುರ ಹಿಂಸಾಚಾರ: ಮಹಿಳಾ ಕಾನ್ಸ್ಟೆಬಲ್ ಮೇಲೆ ಗಲಭೆಕೋರರಿಂದ ಲೈಂಗಿಕ ದೌರ್ಜನ್ಯ.ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿ ಹಾಕಿ ಮಹಿಳೆಗೆ ಹಲ್ಲೆ.ಪೊಲೀಸರಂತೆ ನಟಿಸಿ ಆಭರಣ ಲೂಟಿ: 24 ತಾಸಿನೊಳಗೆ ಮೂವರ ಬಂಧನ.ಮಹಾರಾಷ್ಟ್ರ: ಮೊಘಲ್ ದೊರೆ ಔರಂಗಜೇಬ್ ಸಮಾಧಿ ಸಮೀಪ ಡ್ರೋನ್ ಹಾರಾಟ ನಿಷೇಧ.ವಯನಾಡು ಭೂಕುಸಿತ | ಸೇನಾ ಕಾರ್ಯಕ್ಕೆ ಮೆಚ್ಚುಗೆ; ವಿದ್ಯಾರ್ಥಿಯ ಹೃದಯಸ್ಪರ್ಶಿ ಪತ್ರ.ವಯನಾಡು ಭೂಕುಸಿತ: ಮೃತರ ಸಂಖ್ಯೆ 221ಕ್ಕೆ ಏರಿಕೆ, ಇನ್ನೂ 180 ಮಂದಿ ನಾಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>