<p><strong>ತಿರುವನಂತಪುರ</strong>: ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ವಿಶಿಷ್ಟವಾದ ‘ಅಂತರ್ಗತ ಕ್ರೀಡಾ ಕೈಪಿಡಿ’ ಮತ್ತು ಪೋಷಕರಿಗೆ ವಿಶೇಷ ಪುಸ್ತಕ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕಾರ್ಯಕ್ರಮಗಳನ್ನು ಕೇರಳ ಸರ್ಕಾರವು ಬುಧವಾರ ಘೋಷಿಸಿದೆ.</p>.<p>ಶೈಕ್ಷಣಿಕ ಕ್ಷೇತ್ರದಲ್ಲಿ ಸಂಕಷ್ಟ ಎದುರಿಸುವ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹ ನೀಡುವ ‘ಹೆಲ್ಪಿಂಗ್ ಹ್ಯಾಂಡ್’ ಹಾಗೂ ಕರಾವಳಿ ತೀರದ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಅನುವು ಮಾಡಿಕೊಡುವ ‘ಬೀಚ್ ಟು ಬೆಂಚ್’ ಕಾರ್ಯಕ್ರಮವು ಶಿಕ್ಷಣ ಇಲಾಖೆಯು ಜಾರಿಗೊಳಿಸುತ್ತಿರುವ ಮಹತ್ವದ ಕಾರ್ಯಕ್ರಮಗಳಾಗಿವೆ.</p>.<p>2024–25ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿನೂತನ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರವಾದ ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆಯ ಭಾಗವಾಗಿ ಪೋಷಕರಿಗೆ ಪುಸ್ತಕಗಳನ್ನು ನೀಡಲು ನಿರ್ಧರಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಇಂತಹ ಪುಸ್ತಕವನ್ನು ಪೋಷಕರಿಗಾಗಿ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ಸೇರಿದಂತೆ ನಾಲ್ಕು ಹಂತಗಳಲ್ಲಿ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.</p>.<p>ಈ ಪುಸ್ತಕವು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ವಿವರಿಸುತ್ತದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ನಡುವಿನ ಸಂಬಂಧ ಬೆಳೆಸುವ ಅಗತ್ಯವನ್ನು ವಿವರಿಸುತ್ತದೆ. ಇದರ ಭಾಗವಾಗಿ ಸಮಗ್ರಶಿಕ್ಷಾ ಕೇರಳದ ಆಶ್ರಯದಲ್ಲಿ ಪೋಷಕರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅವರು ಹೇಳಿದರು.</p>.<p>ಕ್ರೀಡಾ ಕೈಪಿಡಿ: ಅಂಗವಿಕಲ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಹಾಗೂ ಅವರ ಭಾಗವಹಿಸುವಿಕೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೇರಳದ ಶಿಕ್ಷಣ ಇಲಾಖೆಯು ವಿಶಿಷ್ಟವಾದ ‘ಕ್ರೀಡಾ ಕೈಪಿಡಿ’ಯನ್ನು ವಿನ್ಯಾಸಗೊಳಿಸಿದೆ.</p>.<p>ದೇಶದಲ್ಲಿ ಮೊದಲ ಬಾರಿಗೆ ಇಂತಹ ದಾಖಲೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ವರ್ಷದಿಂದಲೇ ಕೈಪಿಡಿಯಲ್ಲಿರುವಂತೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತಿಳಿಸಿದರು.</p>.<p>‘ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ‘ಆರೋಗ್ಯಕರ ಮಕ್ಕಳು’ ಎಂಬ ಮತ್ತೊಂದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿರುವುದಾಗಿ’ ಸಚಿವರು ಪ್ರಕಟಿಸಿದರು.</p>.<p>ಸ್ಟೇಟ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ (ಎಸ್ಸಿಇಆರ್ಟಿ) ವಿನ್ಯಾಸಗೊಳಿಸಿರುವ ಈ ಕಾರ್ಯಕ್ರಮವನ್ನು ಈಗಾಗಲೇ ಪಠ್ಯಕ್ರಮ ಸಮಿತಿಯು ಅನುಮೋದಿಸಿದ್ದು, ಎರಡು ಪುಸ್ತಕಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.</p>.<p>ಆಟಿಸಂ (ಸ್ವಲೀನ) ಹೊಂದಿದ ಮಕ್ಕಳನ್ನು ಬೆಂಬಲಿಸಲಿಕ್ಕಾಗಿ, ರಾಜ್ಯದ ಎಲ್ಲ 14 ಜಿಲ್ಲೆಗಳಲ್ಲಿ ₹37.80 ಕೋಟಿ ವೆಚ್ಚದಲ್ಲಿ ಮಾದರಿ ಆಟಿಸಂ ಸಂಕೀರ್ಣಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಅಂಗವಿಕಲ ಮಕ್ಕಳಿಗಾಗಿ ಸಿದ್ಧಪಡಿಸಲಾಗಿರುವ ‘ಅಂತರ್ಗತ ಶಿಕ್ಷಣ’ ಕಾರ್ಯಕ್ರಮದ ಭಾಗವಾಗಿ ₹121.21 ಕೋಟಿ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಎರ್ನಾಕುಲಂ ಜಿಲ್ಲೆಯಲ್ಲಿ ಅ.18ರಿಂದ 22ರವರೆಗೆ ವಾರ್ಷಿಕ ಶಾಲಾ ಕ್ರೀಡಾಕೂಟವನ್ನು ನಡೆಸಲಾಗುವುದು ಎಂದು ಶಿವನ್ಕುಟ್ಟಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ವಿಶಿಷ್ಟವಾದ ‘ಅಂತರ್ಗತ ಕ್ರೀಡಾ ಕೈಪಿಡಿ’ ಮತ್ತು ಪೋಷಕರಿಗೆ ವಿಶೇಷ ಪುಸ್ತಕ ಸೇರಿದಂತೆ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಕಾರ್ಯಕ್ರಮಗಳನ್ನು ಕೇರಳ ಸರ್ಕಾರವು ಬುಧವಾರ ಘೋಷಿಸಿದೆ.</p>.<p>ಶೈಕ್ಷಣಿಕ ಕ್ಷೇತ್ರದಲ್ಲಿ ಸಂಕಷ್ಟ ಎದುರಿಸುವ ಮಕ್ಕಳನ್ನು ಗುರುತಿಸಿ, ಪ್ರೋತ್ಸಾಹ ನೀಡುವ ‘ಹೆಲ್ಪಿಂಗ್ ಹ್ಯಾಂಡ್’ ಹಾಗೂ ಕರಾವಳಿ ತೀರದ ಮಕ್ಕಳ ಶೈಕ್ಷಣಿಕ, ಸಾಮಾಜಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಅನುವು ಮಾಡಿಕೊಡುವ ‘ಬೀಚ್ ಟು ಬೆಂಚ್’ ಕಾರ್ಯಕ್ರಮವು ಶಿಕ್ಷಣ ಇಲಾಖೆಯು ಜಾರಿಗೊಳಿಸುತ್ತಿರುವ ಮಹತ್ವದ ಕಾರ್ಯಕ್ರಮಗಳಾಗಿವೆ.</p>.<p>2024–25ನೇ ಶೈಕ್ಷಣಿಕ ಸಾಲಿನಲ್ಲಿ ಶಿಕ್ಷಣ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿನೂತನ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಬಗ್ಗೆ ಶಿಕ್ಷಣ ಸಚಿವ ವಿ.ಶಿವನ್ಕುಟ್ಟಿ ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರವಾದ ಮಾಹಿತಿ ನೀಡಿದರು.</p>.<p>ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆಯ ಭಾಗವಾಗಿ ಪೋಷಕರಿಗೆ ಪುಸ್ತಕಗಳನ್ನು ನೀಡಲು ನಿರ್ಧರಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ ಇಂತಹ ಪುಸ್ತಕವನ್ನು ಪೋಷಕರಿಗಾಗಿ ಪೂರ್ವ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ಸೇರಿದಂತೆ ನಾಲ್ಕು ಹಂತಗಳಲ್ಲಿ ಸಿದ್ಧಪಡಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.</p>.<p>ಈ ಪುಸ್ತಕವು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ವಿವರಿಸುತ್ತದೆ. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರ ನಡುವಿನ ಸಂಬಂಧ ಬೆಳೆಸುವ ಅಗತ್ಯವನ್ನು ವಿವರಿಸುತ್ತದೆ. ಇದರ ಭಾಗವಾಗಿ ಸಮಗ್ರಶಿಕ್ಷಾ ಕೇರಳದ ಆಶ್ರಯದಲ್ಲಿ ಪೋಷಕರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಅವರು ಹೇಳಿದರು.</p>.<p>ಕ್ರೀಡಾ ಕೈಪಿಡಿ: ಅಂಗವಿಕಲ ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಹಾಗೂ ಅವರ ಭಾಗವಹಿಸುವಿಕೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಕೇರಳದ ಶಿಕ್ಷಣ ಇಲಾಖೆಯು ವಿಶಿಷ್ಟವಾದ ‘ಕ್ರೀಡಾ ಕೈಪಿಡಿ’ಯನ್ನು ವಿನ್ಯಾಸಗೊಳಿಸಿದೆ.</p>.<p>ದೇಶದಲ್ಲಿ ಮೊದಲ ಬಾರಿಗೆ ಇಂತಹ ದಾಖಲೆಯನ್ನು ವಿನ್ಯಾಸಗೊಳಿಸಲಾಗಿದೆ. ಈ ವರ್ಷದಿಂದಲೇ ಕೈಪಿಡಿಯಲ್ಲಿರುವಂತೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತಿಳಿಸಿದರು.</p>.<p>‘ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ‘ಆರೋಗ್ಯಕರ ಮಕ್ಕಳು’ ಎಂಬ ಮತ್ತೊಂದು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿರುವುದಾಗಿ’ ಸಚಿವರು ಪ್ರಕಟಿಸಿದರು.</p>.<p>ಸ್ಟೇಟ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಆ್ಯಂಡ್ ಟ್ರೈನಿಂಗ್ (ಎಸ್ಸಿಇಆರ್ಟಿ) ವಿನ್ಯಾಸಗೊಳಿಸಿರುವ ಈ ಕಾರ್ಯಕ್ರಮವನ್ನು ಈಗಾಗಲೇ ಪಠ್ಯಕ್ರಮ ಸಮಿತಿಯು ಅನುಮೋದಿಸಿದ್ದು, ಎರಡು ಪುಸ್ತಕಗಳನ್ನು ಸಿದ್ಧಪಡಿಸಲಾಗಿದೆ ಎಂದು ಅವರು ಹೇಳಿದರು.</p>.<p>ಆಟಿಸಂ (ಸ್ವಲೀನ) ಹೊಂದಿದ ಮಕ್ಕಳನ್ನು ಬೆಂಬಲಿಸಲಿಕ್ಕಾಗಿ, ರಾಜ್ಯದ ಎಲ್ಲ 14 ಜಿಲ್ಲೆಗಳಲ್ಲಿ ₹37.80 ಕೋಟಿ ವೆಚ್ಚದಲ್ಲಿ ಮಾದರಿ ಆಟಿಸಂ ಸಂಕೀರ್ಣಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.</p>.<p>ಅಂಗವಿಕಲ ಮಕ್ಕಳಿಗಾಗಿ ಸಿದ್ಧಪಡಿಸಲಾಗಿರುವ ‘ಅಂತರ್ಗತ ಶಿಕ್ಷಣ’ ಕಾರ್ಯಕ್ರಮದ ಭಾಗವಾಗಿ ₹121.21 ಕೋಟಿ ಮೊತ್ತದ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು. ಎರ್ನಾಕುಲಂ ಜಿಲ್ಲೆಯಲ್ಲಿ ಅ.18ರಿಂದ 22ರವರೆಗೆ ವಾರ್ಷಿಕ ಶಾಲಾ ಕ್ರೀಡಾಕೂಟವನ್ನು ನಡೆಸಲಾಗುವುದು ಎಂದು ಶಿವನ್ಕುಟ್ಟಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>