<p><strong>ತಿರುವನಂತಪುರ</strong>: ರಾಜ್ಯದಲ್ಲಿ ‘ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ’ (ಪಿಎಂ–ಶ್ರೀ) ಯೋಜನೆ ಅನುಷ್ಠಾನಗೊಳಿಸುವ ನಿರ್ಧಾರವನ್ನು ತಡೆಹಿಡಿಯಲು ಕೇರಳ ಸರ್ಕಾರ ನಿರ್ಧರಿಸಿದೆ. ಯೋಜನೆಗೆ ಸಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ.<br></p>.<div dir="ltr"><span style="font-size:16px;">‘ಏಳು ಮಂದಿ ಸದಸ್ಯರನ್ನು ಒಳಗೊಂಡ ಸಂಪುಟ ಉಪ ಸಮಿತಿಯು ಯೋಜನೆಯನ್ನು ಪರಿಶೀಲಿಸಲಿದೆ. ಸಮಿತಿಯ ವರದಿ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದರು.</span></div>.<div dir="ltr"><span style="font-size:16px;">ಪಿಣರಾಯಿ ಅವರು, ‘ಯೋಜನೆಯನ್ನು ಪರಿಶೀಲನೆಗೆ ಕಳುಹಿಸಿರುವುದರಿಂದ ಈ ಕುರಿತ ಪ್ರಶ್ನೆಗಳು ಅನಗತ್ಯ’ ಎಂದು ಹೇಳುವ ಮೂಲಕ ಸುದ್ದಿಗಾರರ ಪ್ರಶ್ನೆಗಳನ್ನು ನಿರಾಕರಿಸಿದರು.</span></div>.<div dir="ltr"> <p>ಇದೇ ಸಂದರ್ಭದಲ್ಲಿ, ರಾಷ್ಟ್ರೀಯ ಶಿಕ್ಷಣ ನೀತಿಯು ಆರ್ಎಸ್ಎಸ್ ಸಿದ್ದಾಂತವನ್ನು ಶಿಕ್ಷಣ ಕ್ಷೇತ್ರದ ಮೇಲೆ ಹೇರುವ ಹುನ್ನಾರ ಎಂದು ಅವರು ಪುನರುಚ್ಚರಿಸಿದರು. </p> <p>ಉಪ ಸಮಿತಿ ಪರಿಶೀಲನೆ ನಂತರವೇ ಪಿಎಂ–ಶ್ರೀ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆಗೆ ಪತ್ರದ ಮೂಲಕ ತಿಳಿಸಲಾಗಿದೆ.</p> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ರಾಜ್ಯದಲ್ಲಿ ‘ಪ್ರಧಾನಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ’ (ಪಿಎಂ–ಶ್ರೀ) ಯೋಜನೆ ಅನುಷ್ಠಾನಗೊಳಿಸುವ ನಿರ್ಧಾರವನ್ನು ತಡೆಹಿಡಿಯಲು ಕೇರಳ ಸರ್ಕಾರ ನಿರ್ಧರಿಸಿದೆ. ಯೋಜನೆಗೆ ಸಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಕಾರಣ ಈ ನಿರ್ಧಾರಕ್ಕೆ ಬಂದಿದೆ.<br></p>.<div dir="ltr"><span style="font-size:16px;">‘ಏಳು ಮಂದಿ ಸದಸ್ಯರನ್ನು ಒಳಗೊಂಡ ಸಂಪುಟ ಉಪ ಸಮಿತಿಯು ಯೋಜನೆಯನ್ನು ಪರಿಶೀಲಿಸಲಿದೆ. ಸಮಿತಿಯ ವರದಿ ಆಧಾರದಲ್ಲಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬುಧವಾರ ತಿಳಿಸಿದರು.</span></div>.<div dir="ltr"><span style="font-size:16px;">ಪಿಣರಾಯಿ ಅವರು, ‘ಯೋಜನೆಯನ್ನು ಪರಿಶೀಲನೆಗೆ ಕಳುಹಿಸಿರುವುದರಿಂದ ಈ ಕುರಿತ ಪ್ರಶ್ನೆಗಳು ಅನಗತ್ಯ’ ಎಂದು ಹೇಳುವ ಮೂಲಕ ಸುದ್ದಿಗಾರರ ಪ್ರಶ್ನೆಗಳನ್ನು ನಿರಾಕರಿಸಿದರು.</span></div>.<div dir="ltr"> <p>ಇದೇ ಸಂದರ್ಭದಲ್ಲಿ, ರಾಷ್ಟ್ರೀಯ ಶಿಕ್ಷಣ ನೀತಿಯು ಆರ್ಎಸ್ಎಸ್ ಸಿದ್ದಾಂತವನ್ನು ಶಿಕ್ಷಣ ಕ್ಷೇತ್ರದ ಮೇಲೆ ಹೇರುವ ಹುನ್ನಾರ ಎಂದು ಅವರು ಪುನರುಚ್ಚರಿಸಿದರು. </p> <p>ಉಪ ಸಮಿತಿ ಪರಿಶೀಲನೆ ನಂತರವೇ ಪಿಎಂ–ಶ್ರೀ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಣ ಇಲಾಖೆಗೆ ಪತ್ರದ ಮೂಲಕ ತಿಳಿಸಲಾಗಿದೆ.</p> </div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>