<p><strong>ನವದೆಹಲಿ</strong>: ಕೇರಳ ವಿಧಾನಸಭೆಯು ಅಂಗೀಕಾರ ನೀಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುತ್ತಿಲ್ಲ ಎಂದು ದೂರಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ರಾಷ್ಟ್ರಪತಿ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಅಸಾಮಾನ್ಯ ನಡೆ ಎಂದು ವಿಶ್ಲೇಷಿಸಲಾಗಿದೆ.</p>.<p>ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 2) ಮಸೂದೆ –2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ – 2022, ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆ – 2022 ಹಾಗೂ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 3) ಮಸೂದೆ – 2022ಕ್ಕೆ ರಾಷ್ಟ್ರಪತಿ ಯಾವುದೇ ಕಾರಣ ಉಲ್ಲೇಖಿಸದೆ ಅಂಕಿತ ಹಾಕದೆ ಇರುವುದನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೇರಳ ಸರ್ಕಾರ ಕೋರಿದೆ.</p>.<p>ಕೇಂದ್ರ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ.</p>.<p>ರಾಜ್ಯಪಾಲರು ಈ ನಾಲ್ಕು ಮಸೂದೆಗಳು ಸೇರಿ ಒಟ್ಟು ಏಳು ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಗೆ ಇರಿಸಿಕೊಂಡ ಕ್ರಮವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂಬ ಕೋರಿಕೆಯನ್ನು ಕೂಡ ಸರ್ಕಾರವು ಕೋರ್ಟ್ ಮುಂದೆ ಇರಿಸಿದೆ. ರಾಜ್ಯದ ವ್ಯಾಪ್ತಿಯ ವಿಷಯಗಳಿಗೆ ಸಂಬಂಧಿಸಿದ ಈ ನಾಲ್ಕು ಮಸೂದೆಗಳಿಗೆ, ಯಾವ ನಿರ್ದಿಷ್ಟ ಕಾರಣವೂ ಇಲ್ಲದೆ, ಅಂಕಿತ ತಡೆಹಿಡಿಯುವಂತೆ ಕೇಂದ್ರ ಸರ್ಕಾರವು ರಾಷ್ಟ್ರಪತಿಯವರಿಗೆ ನೀಡಿರುವ ಸಲಹೆಯು ಸಂವಿಧಾನದ 14ನೆಯ ವಿಧಿಯ ಉಲ್ಲಂಘನೆ ಇದೆ ಎಂದು ಕೇರಳ ಸರ್ಕಾರವು ಅರ್ಜಿಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕೇರಳ ವಿಧಾನಸಭೆಯು ಅಂಗೀಕಾರ ನೀಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕುತ್ತಿಲ್ಲ ಎಂದು ದೂರಿ ಕೇರಳ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ರಾಷ್ಟ್ರಪತಿ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿರುವುದು ಅಸಾಮಾನ್ಯ ನಡೆ ಎಂದು ವಿಶ್ಲೇಷಿಸಲಾಗಿದೆ.</p>.<p>ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 2) ಮಸೂದೆ –2021, ಕೇರಳ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ – 2022, ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ಮಸೂದೆ – 2022 ಹಾಗೂ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) (ನಂ. 3) ಮಸೂದೆ – 2022ಕ್ಕೆ ರಾಷ್ಟ್ರಪತಿ ಯಾವುದೇ ಕಾರಣ ಉಲ್ಲೇಖಿಸದೆ ಅಂಕಿತ ಹಾಕದೆ ಇರುವುದನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೇರಳ ಸರ್ಕಾರ ಕೋರಿದೆ.</p>.<p>ಕೇಂದ್ರ ಸರ್ಕಾರ, ರಾಷ್ಟ್ರಪತಿಯವರ ಕಾರ್ಯದರ್ಶಿ, ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಮತ್ತು ಅವರ ಹೆಚ್ಚುವರಿ ಕಾರ್ಯದರ್ಶಿಯನ್ನು ಪ್ರತಿವಾದಿಗಳು ಎಂದು ಅರ್ಜಿಯಲ್ಲಿ ಹೆಸರಿಸಲಾಗಿದೆ.</p>.<p>ರಾಜ್ಯಪಾಲರು ಈ ನಾಲ್ಕು ಮಸೂದೆಗಳು ಸೇರಿ ಒಟ್ಟು ಏಳು ಮಸೂದೆಗಳನ್ನು ರಾಷ್ಟ್ರಪತಿಯವರ ಪರಿಶೀಲನೆಗೆ ಇರಿಸಿಕೊಂಡ ಕ್ರಮವನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂಬ ಕೋರಿಕೆಯನ್ನು ಕೂಡ ಸರ್ಕಾರವು ಕೋರ್ಟ್ ಮುಂದೆ ಇರಿಸಿದೆ. ರಾಜ್ಯದ ವ್ಯಾಪ್ತಿಯ ವಿಷಯಗಳಿಗೆ ಸಂಬಂಧಿಸಿದ ಈ ನಾಲ್ಕು ಮಸೂದೆಗಳಿಗೆ, ಯಾವ ನಿರ್ದಿಷ್ಟ ಕಾರಣವೂ ಇಲ್ಲದೆ, ಅಂಕಿತ ತಡೆಹಿಡಿಯುವಂತೆ ಕೇಂದ್ರ ಸರ್ಕಾರವು ರಾಷ್ಟ್ರಪತಿಯವರಿಗೆ ನೀಡಿರುವ ಸಲಹೆಯು ಸಂವಿಧಾನದ 14ನೆಯ ವಿಧಿಯ ಉಲ್ಲಂಘನೆ ಇದೆ ಎಂದು ಕೇರಳ ಸರ್ಕಾರವು ಅರ್ಜಿಯಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>