<p><strong>ನವದೆಹಲಿ:</strong> ಕೊರೊನಾ ಪೀಡಿತರು ರಾಜ್ಯ ಪ್ರವೇಶಿಸದಂತೆ ತಡೆಯಲು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ಕರ್ನಾಟಕದ ಗಡಿಯನ್ನು ಬಂದ್ ಮಾಡಿರುವ ಪ್ರಕರಣವನ್ನು ಇತ್ಯರ್ಥಪಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕೇರಳ ಆರೋಪಿಸಿದೆ.</p>.<p>ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಹೇಳಿಕೆ (ಅಫಿಡವಿಟ್)ಯಲ್ಲಿ ಈ ಆರೋಪ ಮಾಡಿರುವ ಕೇರಳ ಸರ್ಕಾರ, ನ್ಯಾಯಪೀಠ ಆದೇಶ ನೀಡಿದ್ದರೂ ಸಮಸ್ಯೆ ಇತ್ಯರ್ಥಪಡಿಸುವಲ್ಲಿ ಕೇಂದ್ರ ವಿಫಲವಾವಾಗಿದೆ. ಹಾಗಾಗಿ, ಹೆದ್ದಾರಿ ಸಂಚಾರ ಮುಕ್ತಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ವಜಾಗೊಳಿಸಬೇಕು ಎಂದು ಕೋರಿದೆ.</p>.<p>ಹೆದ್ದಾರಿ ಬಂದ್ ಮಾಡಿ ದಿಗ್ಬಂಧನ ಹೇರಿರುವ ಏಕಪಕ್ಷೀಯ ಕ್ರಮವು ಸಮಂಜಸವಲ್ಲ. ಈ ಮೂಲಕ ಜನರ ಆರೋಗ್ಯ ರಕ್ಷಣೆಯ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಕೇರಳ ದೂರಿದೆ.</p>.<p>ಉಭಯ ರಾಜ್ಯಗಳ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳೊಂದಿಗೆಸಮಾಲೋಚನೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ಕಳೆದ ಶುಕ್ರವಾರ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ಪೀಠ ಕೇಂದ್ರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ಪೀಡಿತರು ರಾಜ್ಯ ಪ್ರವೇಶಿಸದಂತೆ ತಡೆಯಲು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಅಳವಡಿಸಿ ಕರ್ನಾಟಕದ ಗಡಿಯನ್ನು ಬಂದ್ ಮಾಡಿರುವ ಪ್ರಕರಣವನ್ನು ಇತ್ಯರ್ಥಪಡಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಕೇರಳ ಆರೋಪಿಸಿದೆ.</p>.<p>ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಹೇಳಿಕೆ (ಅಫಿಡವಿಟ್)ಯಲ್ಲಿ ಈ ಆರೋಪ ಮಾಡಿರುವ ಕೇರಳ ಸರ್ಕಾರ, ನ್ಯಾಯಪೀಠ ಆದೇಶ ನೀಡಿದ್ದರೂ ಸಮಸ್ಯೆ ಇತ್ಯರ್ಥಪಡಿಸುವಲ್ಲಿ ಕೇಂದ್ರ ವಿಫಲವಾವಾಗಿದೆ. ಹಾಗಾಗಿ, ಹೆದ್ದಾರಿ ಸಂಚಾರ ಮುಕ್ತಗೊಳಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ವಜಾಗೊಳಿಸಬೇಕು ಎಂದು ಕೋರಿದೆ.</p>.<p>ಹೆದ್ದಾರಿ ಬಂದ್ ಮಾಡಿ ದಿಗ್ಬಂಧನ ಹೇರಿರುವ ಏಕಪಕ್ಷೀಯ ಕ್ರಮವು ಸಮಂಜಸವಲ್ಲ. ಈ ಮೂಲಕ ಜನರ ಆರೋಗ್ಯ ರಕ್ಷಣೆಯ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಕೇರಳ ದೂರಿದೆ.</p>.<p>ಉಭಯ ರಾಜ್ಯಗಳ ಆರೋಗ್ಯ ಇಲಾಖೆಯ ಕಾರ್ಯದರ್ಶಿಗಳೊಂದಿಗೆಸಮಾಲೋಚನೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸುವಂತೆ ಕಳೆದ ಶುಕ್ರವಾರ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ಪೀಠ ಕೇಂದ್ರಕ್ಕೆ ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>