ವಯನಾಡ್ನ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಜೆ.ಎಸ್. ಸಿದ್ಧಾರ್ಥನ್ ಫೆ. 18ರಂದು ವಿಶ್ವವಿದ್ಯಾಲಯದ ಹಾಸ್ಟೆಲ್ನ ಶೌಚಾಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಅವರು ಮೂರು ದಿನ ಅನುಭವಿಸಿದ ಕ್ರೂರ ಚಿತ್ರಹಿಂಸೆ ಬಹಿರಂಗವಾಗಿದೆ. ಈ ಪ್ರಕರಣದ ಆರೋಪಿಗಳಲ್ಲಿ ಆಡಳಿತಾರೂಢ ಸಿಪಿಎಂನ ವಿದ್ಯಾರ್ಥಿ ಸಂಘಟನೆಯಾದ ಎಸ್ಎಫ್ಐ ಕಾರ್ಯಕರ್ತರಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆರೋಪಿಗಳನ್ನು ರಕ್ಷಿಸುತ್ತಿದೆ ಎಂಬ ಆರೋಪ ಕೇಳಿಬಂದಿತ್ತು.