ಕಳೆದ ವರ್ಷ ಅ.28ರಂದು ಜಾರಿ ನಿರ್ದೇಶನಾಲಯವು(ಇ.ಡಿ) ಇವರನ್ನು ಬಂಧಿಸಿತ್ತು. ಕೇರಳ ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಶಿವಶಂಕರ್ ಅವರ ವಿರುದ್ಧ ಚಿನ್ನ ಕಳ್ಳ ಸಾಗಣೆಗೆ ಸಂಬಂಧಿಸಿದಂತೆ ಕಸ್ಟಮ್ಸ್ ದಾಖಲಿಸಿದ್ದ ಪ್ರಕರಣದಲ್ಲೂ, ಎರ್ನಾಕುಳಂ ಹೆಚ್ಚುವರಿ ನ್ಯಾಯಾಂಗ ನ್ಯಾಯಾಲಯವು ಜಾಮೀನು ನೀಡಿದೆ. ನಿಗದಿತ ಅವಧಿಯಲ್ಲಿ ಆರೋಪಪಟ್ಟಿ ದಾಖಲಾಗದೇ ಹೋದರೆ ಜಾಮೀನು ಪಡೆಯುವ ಅವಕಾಶವನ್ನು ನ್ಯಾಯಾಲಯವು ನೀಡಿದೆ.