<p><strong>ತಿರುವನಂತಪುರ:</strong> ಆದಾಯ ತೆರಿಗೆ ವಿನಾಯ್ತಿ ಮನವಿಗೆ ಸಂಬಂಧಿಸಿದಂತೆನಿರ್ಧಾರ ತೆಗೆದುಕೊಳ್ಳಲು ಸುಮಾರು 20 ವರ್ಷತಡಮಾಡಿದ ಕೈಗಾರಿಕೆ ಇಲಾಖೆಯಲೋಪವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್ ಐಎಎಸ್ ಅಧಿಕಾರಿಯೊಬ್ಬರಿಗೆ100 ಗಿಡಗಳನ್ನು ನೆಡುವಂತೆ ಆದೇಶ ಮಾಡಿದೆ.</p>.<p>‘ಈ ಅವಧಿಯಲ್ಲಿ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿದ್ದ ಎಲ್ಲರೂ ತಪ್ಪು ಮಾಡಿದ್ದಾರೆ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಅಮಿತ್ ರಾವಲ್,‘ಪ್ರಸ್ತುತ ಈ ಹುದ್ದೆಯಲ್ಲಿರುವಕೆ.ಬಿಜು ಅರಣ್ಯ ಇಲಾಖೆ ಸೂಚಿಸುವ ಸ್ಥಳದಲ್ಲಿ 100 ಗಿಡ ನೆಡಬೇಕು’ ಎಂದು ಆದೇಶಿಸಿದರು.</p>.<p>ರಾಸಾಯನಿಕಗಳ ವಹಿವಾಟು ನಡೆಸುವ ಖಾಸಗಿ ಸಂಸ್ಥೆಯೊಂದು 2001ರಲ್ಲಿ ಆದಾಯ ತೆರಿಗೆ ವಿನಾಯ್ತಿ ಕೋರಿ ಕೈಗಾರಿಕಾಇಲಾಖೆಗೆ ಮನವಿ ಸಲ್ಲಿಸಿತ್ತು. ಇಲಾಖೆ ಈ ಮನವಿಯನ್ನು ತಿರಸ್ಕರಿಸಿತ್ತು. 2003ರಲ್ಲಿ ಈ ಸಂಬಂಧ ಹೈಕೋರ್ಟ್ನಲ್ಲಿ ಕಂಪನಿಯು ಅರ್ಜಿ ಸಲ್ಲಿಸಿತ್ತು. ಕಂಪನಿಯ ಅಹವಾಲು ಆಲಿಸುವಂತೆ ಹೈಕೋರ್ಟ್ ಕೈಗಾರಿಕಾ ಇಲಾಖೆಗೆ ಸೂಚಿಸಿತ್ತು.</p>.<p>ಹಲವು ವಿಚಾರಣೆಗಳ ನಂತರವೂ ಕೈಗಾರಿಕಾ ಇಲಾಖೆ ಈ ಸಂಬಂಧ ನಿರ್ಧಾರ ತೆಗೆದುಕೊಂಡಿರಲಿಲ್ಲ. ಖಾಸಗಿ ಕಂಪನಿಯು ಮತ್ತೊಮ್ಮೆ ಹೈಕೋರ್ಟ್ಗೆ ಮನವಿ ಸಲ್ಲಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯವು, ಕರ್ತವ್ಯಲೋಪಕ್ಕಾಗಿ ಅಧಿಕಾರಿಗೆಅಪರೂಪದ ಶಿಕ್ಷೆ ವಿಧಿಸಿತು.</p>.<p>ಐಎಎಸ್ ಅಧಿಕಾರಿ ಬಿಜು,ಕೇರಳ ಸರ್ಕಾರದಲ್ಲಿ ನೀರಾವರಿ ಸಚಿವರಾಗಿರುವ ಕೆ.ಕೃಷ್ಣಮೂರ್ತಿ ಅವರ ಮಗನೂ ಹೌದು.ಮಧ್ಯ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಕೃಷ್ಣಮೂರ್ತಿ ಜನಪ್ರಿಯ ರೈತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಆದಾಯ ತೆರಿಗೆ ವಿನಾಯ್ತಿ ಮನವಿಗೆ ಸಂಬಂಧಿಸಿದಂತೆನಿರ್ಧಾರ ತೆಗೆದುಕೊಳ್ಳಲು ಸುಮಾರು 20 ವರ್ಷತಡಮಾಡಿದ ಕೈಗಾರಿಕೆ ಇಲಾಖೆಯಲೋಪವನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್ ಐಎಎಸ್ ಅಧಿಕಾರಿಯೊಬ್ಬರಿಗೆ100 ಗಿಡಗಳನ್ನು ನೆಡುವಂತೆ ಆದೇಶ ಮಾಡಿದೆ.</p>.<p>‘ಈ ಅವಧಿಯಲ್ಲಿ ಇಲಾಖೆಯ ನಿರ್ದೇಶಕ ಹುದ್ದೆಯಲ್ಲಿದ್ದ ಎಲ್ಲರೂ ತಪ್ಪು ಮಾಡಿದ್ದಾರೆ’ ಎಂದು ಅಭಿಪ್ರಾಯಪಟ್ಟ ನ್ಯಾಯಮೂರ್ತಿ ಅಮಿತ್ ರಾವಲ್,‘ಪ್ರಸ್ತುತ ಈ ಹುದ್ದೆಯಲ್ಲಿರುವಕೆ.ಬಿಜು ಅರಣ್ಯ ಇಲಾಖೆ ಸೂಚಿಸುವ ಸ್ಥಳದಲ್ಲಿ 100 ಗಿಡ ನೆಡಬೇಕು’ ಎಂದು ಆದೇಶಿಸಿದರು.</p>.<p>ರಾಸಾಯನಿಕಗಳ ವಹಿವಾಟು ನಡೆಸುವ ಖಾಸಗಿ ಸಂಸ್ಥೆಯೊಂದು 2001ರಲ್ಲಿ ಆದಾಯ ತೆರಿಗೆ ವಿನಾಯ್ತಿ ಕೋರಿ ಕೈಗಾರಿಕಾಇಲಾಖೆಗೆ ಮನವಿ ಸಲ್ಲಿಸಿತ್ತು. ಇಲಾಖೆ ಈ ಮನವಿಯನ್ನು ತಿರಸ್ಕರಿಸಿತ್ತು. 2003ರಲ್ಲಿ ಈ ಸಂಬಂಧ ಹೈಕೋರ್ಟ್ನಲ್ಲಿ ಕಂಪನಿಯು ಅರ್ಜಿ ಸಲ್ಲಿಸಿತ್ತು. ಕಂಪನಿಯ ಅಹವಾಲು ಆಲಿಸುವಂತೆ ಹೈಕೋರ್ಟ್ ಕೈಗಾರಿಕಾ ಇಲಾಖೆಗೆ ಸೂಚಿಸಿತ್ತು.</p>.<p>ಹಲವು ವಿಚಾರಣೆಗಳ ನಂತರವೂ ಕೈಗಾರಿಕಾ ಇಲಾಖೆ ಈ ಸಂಬಂಧ ನಿರ್ಧಾರ ತೆಗೆದುಕೊಂಡಿರಲಿಲ್ಲ. ಖಾಸಗಿ ಕಂಪನಿಯು ಮತ್ತೊಮ್ಮೆ ಹೈಕೋರ್ಟ್ಗೆ ಮನವಿ ಸಲ್ಲಿಸಿತು. ವಿಚಾರಣೆ ನಡೆಸಿದ ನ್ಯಾಯಾಲಯವು, ಕರ್ತವ್ಯಲೋಪಕ್ಕಾಗಿ ಅಧಿಕಾರಿಗೆಅಪರೂಪದ ಶಿಕ್ಷೆ ವಿಧಿಸಿತು.</p>.<p>ಐಎಎಸ್ ಅಧಿಕಾರಿ ಬಿಜು,ಕೇರಳ ಸರ್ಕಾರದಲ್ಲಿ ನೀರಾವರಿ ಸಚಿವರಾಗಿರುವ ಕೆ.ಕೃಷ್ಣಮೂರ್ತಿ ಅವರ ಮಗನೂ ಹೌದು.ಮಧ್ಯ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಕೃಷ್ಣಮೂರ್ತಿ ಜನಪ್ರಿಯ ರೈತರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>