<p><strong>ಕೊಚ್ಚಿ:</strong> ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳದಲ್ಲಿ ಶಾಲೆಗಳು ನಡೆಸುತ್ತಿರುವ ಆನ್ಲೈನ್ ತರಗತಿಗಳಿಗೆ ತಡೆ ನೀಡಲು ಕೇರಳ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ತಾಂತ್ರಿಕ ಸೌಲಭ್ಯ ಒದಗಿಸುವವರೆಗೆ ಆನ್ಲೈನ್ ತರಗತಿಗಳನ್ನು ನಡೆಸಬಾರದು ಎಂದು ರಾಜ್ಯ ಸರ್ಕಾರ ಮತ್ತು ಕೇರಳ ಮೂಲಸೌಕರ್ಯ ಮತ್ತು ಶಿಕ್ಷಣ ತಂತ್ರಜ್ಞಾನ (ಕೆಐಟಿಇ)ಗೆ ನಿರ್ದೇಶನ ನೀಡುವಂತೆ ಕೋರಿ ಪೋಷಕರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಆದರೆ, ಈ ಹಂತದಲ್ಲಿ ಆನ್ಲೈನ್ ತರಗತಿಗಳಿಗೆ ತಡೆ ನೀಡುವ ತುರ್ತು ಕಾಣುತ್ತಿಲ್ಲ. ಹೀಗಾಗಿ ತಡೆ ನೀಡಲು ಸಾಧ್ಯವಿಲ್ಲ ಎಂದು ಸಿ.ಎಸ್. ಡಯಾಸ್ ಅವರ ನೇತೃತ್ವದ ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠ ತಿಳಿಸಿತು.</p>.<p>ತಾಂತ್ರಿಕ ಸೌಲಭ್ಯವಿಲ್ಲದೇ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕುಗ್ರಾಮಗಳ, ಪರಿಶಿಷ್ಟ ಜಾತಿ/ ಪಂಗಡಗಳ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ತಾರತಮ್ಯದಿಂದ ಕಾಣಲು ಇದು ಕಾರಣವಾಗುತ್ತದೆ ಎಂದು ಸಿಸಿ ಗಿರಿಜಾ ಎಂಬುವವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. </p>.<p>ಮತ್ತೊಂದೆಡೆ, ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸುವ ಮೊದಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕೇರಳ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>2020ರ ಜೂನ್ 14 ರೊಳಗೆ ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಇಚ್ಛಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಕೇರಳದಲ್ಲಿ ಶಾಲೆಗಳು ನಡೆಸುತ್ತಿರುವ ಆನ್ಲೈನ್ ತರಗತಿಗಳಿಗೆ ತಡೆ ನೀಡಲು ಕೇರಳ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.</p>.<p>ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ತಾಂತ್ರಿಕ ಸೌಲಭ್ಯ ಒದಗಿಸುವವರೆಗೆ ಆನ್ಲೈನ್ ತರಗತಿಗಳನ್ನು ನಡೆಸಬಾರದು ಎಂದು ರಾಜ್ಯ ಸರ್ಕಾರ ಮತ್ತು ಕೇರಳ ಮೂಲಸೌಕರ್ಯ ಮತ್ತು ಶಿಕ್ಷಣ ತಂತ್ರಜ್ಞಾನ (ಕೆಐಟಿಇ)ಗೆ ನಿರ್ದೇಶನ ನೀಡುವಂತೆ ಕೋರಿ ಪೋಷಕರೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.</p>.<p>ಆದರೆ, ಈ ಹಂತದಲ್ಲಿ ಆನ್ಲೈನ್ ತರಗತಿಗಳಿಗೆ ತಡೆ ನೀಡುವ ತುರ್ತು ಕಾಣುತ್ತಿಲ್ಲ. ಹೀಗಾಗಿ ತಡೆ ನೀಡಲು ಸಾಧ್ಯವಿಲ್ಲ ಎಂದು ಸಿ.ಎಸ್. ಡಯಾಸ್ ಅವರ ನೇತೃತ್ವದ ಕೇರಳ ಹೈಕೋರ್ಟ್ ಏಕ ಸದಸ್ಯ ಪೀಠ ತಿಳಿಸಿತು.</p>.<p>ತಾಂತ್ರಿಕ ಸೌಲಭ್ಯವಿಲ್ಲದೇ ಆನ್ಲೈನ್ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದ ಕುಗ್ರಾಮಗಳ, ಪರಿಶಿಷ್ಟ ಜಾತಿ/ ಪಂಗಡಗಳ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ತಾರತಮ್ಯದಿಂದ ಕಾಣಲು ಇದು ಕಾರಣವಾಗುತ್ತದೆ ಎಂದು ಸಿಸಿ ಗಿರಿಜಾ ಎಂಬುವವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. </p>.<p>ಮತ್ತೊಂದೆಡೆ, ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸುವ ಮೊದಲು ವಿದ್ಯಾರ್ಥಿಗಳಿಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಕೇರಳ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.</p>.<p>2020ರ ಜೂನ್ 14 ರೊಳಗೆ ನಿಯಮಿತ ಆನ್ಲೈನ್ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ಇಚ್ಛಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>