<p><strong>ತಿರುವನಂತಪುರಂ :</strong> ಕೇರಳದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಹಾಗೂ ಉತ್ತರ ಭಾಗದ ಜಿಲ್ಲೆಗಳಲ್ಲಿನ ನದಿಗಳು ಮತ್ತು ಅಣೆಕಟ್ಟೆಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಪತ್ತನಂತಿಟ್ಟ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಇಡುಕ್ಕಿ, ತ್ರಿಶೂರ್, ವಯನಾಡ್ನ ಅಣೆಕಟ್ಟುಗಳು ಪೂರ್ಣ ಭರ್ತಿಯಾಗಿವೆ, ನೀರಿನ ಒಳ ಹರಿವು ಅಧಿಕವಾಗಿದ್ದು ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಪಾಲಕ್ಕಾಡ್ ಜಿಲ್ಲೆಯ ಮೀನಕಾರ, ವಲಯಾರ್ ಮತ್ತು ಸಿರುವಾನಿ ಅಣೆಕಟ್ಟುಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಮೂಲಥರ ಅಣೆಕಟ್ಟೆಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ಒಳಹರಿವನ್ನು ನಿಯಂತ್ರಿಸಲು ಎಲ್ಲಾ ಗೇಟುಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಪತ್ತನಂತಿಟ್ಟದ ಅಚನ್ಕೋವಿಲ್ ಮತ್ತು ತ್ರಿಶೂರ್ನ ಕರುವನ್ನೂರ್ ನದಿಗಳಲ್ಲಿ ಹೆಚ್ಚು ನೀರು ಹರಿದು ಬರುತ್ತಿದೆ. ನದಿಗಳ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ನೀರಾವರಿ ವಿನ್ಯಾಸ ಮತ್ತು ಸಂಶೋಧನಾ ಮಂಡಳಿ ಹಾಗೂ ಕೇಂದ್ರ ಜಲ ಆಯೋಗ ಹೇಳಿದೆ. </p><p>ಭಾರತೀಯ ಹವಮಾನ ಇಲಾಖೆಯು ಕೇರಳದ ಉತ್ತರ ಭಾಗದ ಜಿಲ್ಲೆಗಳಾದ ವಯನಾಡು, ಕಣ್ಣುದಿರ್ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಿದೆ. ಜೊತೆಗೆ ಇತರೆ ಆರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಿದೆ. </p><p>ಆರೆಂಜ್ ಆಲರ್ಟ್ 11 ಸೆಂ.ಮೀ ನಿಂದ 20 ಸೆಂ.ಮೀ </p><p>ಯೆಲ್ಲೋ ಆಲರ್ಟ್ 6 ಸೆಂ.ಮೀ ನಿಂದ 11 ಸೆಂ.ಮೀ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ :</strong> ಕೇರಳದ ವಿವಿಧ ಕಡೆಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಧ್ಯ ಹಾಗೂ ಉತ್ತರ ಭಾಗದ ಜಿಲ್ಲೆಗಳಲ್ಲಿನ ನದಿಗಳು ಮತ್ತು ಅಣೆಕಟ್ಟೆಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಪತ್ತನಂತಿಟ್ಟ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಇಡುಕ್ಕಿ, ತ್ರಿಶೂರ್, ವಯನಾಡ್ನ ಅಣೆಕಟ್ಟುಗಳು ಪೂರ್ಣ ಭರ್ತಿಯಾಗಿವೆ, ನೀರಿನ ಒಳ ಹರಿವು ಅಧಿಕವಾಗಿದ್ದು ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. </p><p>ಪಾಲಕ್ಕಾಡ್ ಜಿಲ್ಲೆಯ ಮೀನಕಾರ, ವಲಯಾರ್ ಮತ್ತು ಸಿರುವಾನಿ ಅಣೆಕಟ್ಟುಗಳಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಮೂಲಥರ ಅಣೆಕಟ್ಟೆಗೆ ಹರಿದು ಬರುತ್ತಿರುವ ಅಪಾರ ಪ್ರಮಾಣದ ಒಳಹರಿವನ್ನು ನಿಯಂತ್ರಿಸಲು ಎಲ್ಲಾ ಗೇಟುಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. </p><p>ಪತ್ತನಂತಿಟ್ಟದ ಅಚನ್ಕೋವಿಲ್ ಮತ್ತು ತ್ರಿಶೂರ್ನ ಕರುವನ್ನೂರ್ ನದಿಗಳಲ್ಲಿ ಹೆಚ್ಚು ನೀರು ಹರಿದು ಬರುತ್ತಿದೆ. ನದಿಗಳ ಅಕ್ಕ ಪಕ್ಕದ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ ಎಂದು ನೀರಾವರಿ ವಿನ್ಯಾಸ ಮತ್ತು ಸಂಶೋಧನಾ ಮಂಡಳಿ ಹಾಗೂ ಕೇಂದ್ರ ಜಲ ಆಯೋಗ ಹೇಳಿದೆ. </p><p>ಭಾರತೀಯ ಹವಮಾನ ಇಲಾಖೆಯು ಕೇರಳದ ಉತ್ತರ ಭಾಗದ ಜಿಲ್ಲೆಗಳಾದ ವಯನಾಡು, ಕಣ್ಣುದಿರ್ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಿದೆ. ಜೊತೆಗೆ ಇತರೆ ಆರು ಜಿಲ್ಲೆಗಳಿಗೆ ಯೆಲ್ಲೋ ಆಲರ್ಟ್ ನೀಡಿದೆ. </p><p>ಆರೆಂಜ್ ಆಲರ್ಟ್ 11 ಸೆಂ.ಮೀ ನಿಂದ 20 ಸೆಂ.ಮೀ </p><p>ಯೆಲ್ಲೋ ಆಲರ್ಟ್ 6 ಸೆಂ.ಮೀ ನಿಂದ 11 ಸೆಂ.ಮೀ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>