<p>ತಿರುವನಂತಪುರ: ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಭಾರಿ ನಾಶ–ನಷ್ಟ ಉಂಟಾಗಿದ್ದು, ನದಿ ಹಾಗೂ ಅಣೆಕಟ್ಟು ತುಂಬಿವೆ. ಏಳು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.</p>.ಕೇರಳ | ಒಂದು ತಿಂಗಳ ಬಳಿಕ ಕೊನೆಗೂ ಟೇಕ್ ಆಫ್ ಆದ ಬ್ರಿಟನ್ ಯುದ್ಧ ವಿಮಾನ.<p>ಆಳಪ್ಪುಳ, ಕೊಟ್ಟಯಂ,ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. 11 ಸೆಂ.ಮೀ ನಿಂದ 20 ಸೆಂ.ಮೀ ಮಳೆಯಾಗಬಹುದು ಎಂದು ಅಂದಾಜಿಸಿದೆ.</p><p>ಕೋಯಿಕ್ಕೋಡ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಾತ್ರಿ ಇಡೀ ವರ್ಷಧಾರೆಯಾಗಿದ್ದು, ಭಾರಿ ಗಾಳಿಯಿಂದಾಗಿ ಮರಗಳು ನೆಲಕ್ಕುರುಳಿವೆ. ಮನೆಗಳು,ಕಟ್ಟಡಗಳು, ವಾಹನಗಳಿಗೆ ಹಾನಿಯಾಗಿವೆ. ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸರಬರಾಜಿಗೆ ಅಡಚಣೆ ಉಂಟಾಗಿದೆ. ಕೊಟ್ಟಾಯಂ, ಕಣ್ಣೂರು ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ.</p>.ಜಿಲ್ಲಾ ನ್ಯಾಯಾಲಯಗಳಲ್ಲಿ AI ಬಳಕೆ: ಮಾರ್ಗಸೂಚಿ ಹೊರತಂದ ಕೇರಳ ಹೈಕೋರ್ಟ್ .<p>ವಯನಾಡ್ನ ಬಾನ್ಸುರ ಸಾಗರ್ ಹಾಗೂ ಪಾಲಕ್ಕಾಡ್ನ ಅಲಿಯೂರ್ ಅಣೆಕಟ್ಟೆಯ ಗೇಟುಗಳನ್ನು ತೆರೆಯಲಾಗಿದ್ದು, ಸ್ಥಳೀಯರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ.</p> .ಕೇರಳ: ಪ್ರೇಯಸಿಯ ಕತ್ತು ಹಿಸುಕಿ ಕೊಂದು ಸ್ನೇಹಿತರಿಗೆ ವಿಡಿಯೊ ಕರೆ ಮಾಡಿದ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿರುವನಂತಪುರ: ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದಾಗಿ ಭಾರಿ ನಾಶ–ನಷ್ಟ ಉಂಟಾಗಿದ್ದು, ನದಿ ಹಾಗೂ ಅಣೆಕಟ್ಟು ತುಂಬಿವೆ. ಏಳು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.</p>.ಕೇರಳ | ಒಂದು ತಿಂಗಳ ಬಳಿಕ ಕೊನೆಗೂ ಟೇಕ್ ಆಫ್ ಆದ ಬ್ರಿಟನ್ ಯುದ್ಧ ವಿಮಾನ.<p>ಆಳಪ್ಪುಳ, ಕೊಟ್ಟಯಂ,ಇಡುಕ್ಕಿ, ಎರ್ನಾಕುಳಂ, ತ್ರಿಶೂರ್, ಮಲಪ್ಪುರಂ ಹಾಗೂ ಕೋಯಿಕ್ಕೋಡ್ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ. 11 ಸೆಂ.ಮೀ ನಿಂದ 20 ಸೆಂ.ಮೀ ಮಳೆಯಾಗಬಹುದು ಎಂದು ಅಂದಾಜಿಸಿದೆ.</p><p>ಕೋಯಿಕ್ಕೋಡ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ರಾತ್ರಿ ಇಡೀ ವರ್ಷಧಾರೆಯಾಗಿದ್ದು, ಭಾರಿ ಗಾಳಿಯಿಂದಾಗಿ ಮರಗಳು ನೆಲಕ್ಕುರುಳಿವೆ. ಮನೆಗಳು,ಕಟ್ಟಡಗಳು, ವಾಹನಗಳಿಗೆ ಹಾನಿಯಾಗಿವೆ. ವಿದ್ಯುತ್ ಕಂಬಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸರಬರಾಜಿಗೆ ಅಡಚಣೆ ಉಂಟಾಗಿದೆ. ಕೊಟ್ಟಾಯಂ, ಕಣ್ಣೂರು ಜಿಲ್ಲೆಗಳ ಪರಿಸ್ಥಿತಿಯೂ ಭಿನ್ನವಾಗಿಲ್ಲ.</p>.ಜಿಲ್ಲಾ ನ್ಯಾಯಾಲಯಗಳಲ್ಲಿ AI ಬಳಕೆ: ಮಾರ್ಗಸೂಚಿ ಹೊರತಂದ ಕೇರಳ ಹೈಕೋರ್ಟ್ .<p>ವಯನಾಡ್ನ ಬಾನ್ಸುರ ಸಾಗರ್ ಹಾಗೂ ಪಾಲಕ್ಕಾಡ್ನ ಅಲಿಯೂರ್ ಅಣೆಕಟ್ಟೆಯ ಗೇಟುಗಳನ್ನು ತೆರೆಯಲಾಗಿದ್ದು, ಸ್ಥಳೀಯರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಲಾಗಿದೆ.</p> .ಕೇರಳ: ಪ್ರೇಯಸಿಯ ಕತ್ತು ಹಿಸುಕಿ ಕೊಂದು ಸ್ನೇಹಿತರಿಗೆ ವಿಡಿಯೊ ಕರೆ ಮಾಡಿದ!.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>