<p><strong>ತಿರುವನಂತಪುರ</strong>: ಕೇರಳದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ದೋಣಿ ಮಗುಚಿ ಮೀನುಗಾರರೊಬ್ಬರು ಮೃತಪಟ್ಟಿದ್ದು, ಸಿಡಿಲು ಬಡಿದು ಪಶ್ಚಿಮ ಬಂಗಳಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಆರ್ತುಂಗಳ್ ಕರಾವಳಿ ಪ್ರದೇಶದ ಪೌಲ್ ದೇವಸ್ಯ ಎಂಬುವರು ಸೋಮವಾರ ಬೆಳಿಗ್ಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ವೇಗವಾಗಿ ಗಾಳಿ ಬೀಸಿದ್ದರಿಂದ ಇವರಿದ್ದ ದೋಣಿಯು ಮುಗುಚಿದೆ. ಇತರೆ ಮೀನುಗಾರರು ಇವರನ್ನು ರಕ್ಷಿಸಿದರಾದರೂ ಬಳಿಕ ಮೃತಪಟ್ಟರು. ಅಂಗಮಾಲಿ ಬಳಿಯ ಪಶ್ಚಿಮ ಬಂಗಾಳದ ಕೊಕ್ಕನ್ ಮಿಸ್ತ್ರಿ ಎಂಬುವರು ತಮ್ಮ ಮನೆಯಲ್ಲಿ ಇರುವಾಗ ಬೆಳಿಗ್ಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಕೊಯಿಕ್ಕೋಡ್, ಕಣ್ಣೂರು, ಕಾಸರಗೋಡು, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 11.5 ಸೆಂ.ಮೀನಿಂದ 20.4 ಸೆಂ.ಮೀನಷ್ಟು ಮಳೆ ಸುರಿಯಲಿದೆ ಎಂದು ಇಲಾಖೆ ಅಂದಾಜಿಸಿದೆ.</p>.<p>ವಯನಾಡ್, ಮಲ್ಲಪ್ಪುರಂ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಇಡುಕ್ಕಿ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 6.4 ಸೆಂ.ಮೀನಿಂದ 11.5 ಸೆಂ.ಮೀನಷ್ಟು ಮಳೆಯಾಗಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೇಗವಾಗಿ ಗಾಳಿ ಬೀಸಲಿದ್ದು, ಮಂಗಳವಾರವೂ ಭಾರಿ ಮಳೆಯಾಗಬಹುದು ಎಂದೂ ಹೇಳಿದೆ.</p>.ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ದೋಣಿ ಮಗುಚಿ ಮೀನುಗಾರರೊಬ್ಬರು ಮೃತಪಟ್ಟಿದ್ದು, ಸಿಡಿಲು ಬಡಿದು ಪಶ್ಚಿಮ ಬಂಗಳಾದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.</p>.<p>ಆರ್ತುಂಗಳ್ ಕರಾವಳಿ ಪ್ರದೇಶದ ಪೌಲ್ ದೇವಸ್ಯ ಎಂಬುವರು ಸೋಮವಾರ ಬೆಳಿಗ್ಗೆ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿದಿದ್ದರು. ಈ ವೇಳೆ ವೇಗವಾಗಿ ಗಾಳಿ ಬೀಸಿದ್ದರಿಂದ ಇವರಿದ್ದ ದೋಣಿಯು ಮುಗುಚಿದೆ. ಇತರೆ ಮೀನುಗಾರರು ಇವರನ್ನು ರಕ್ಷಿಸಿದರಾದರೂ ಬಳಿಕ ಮೃತಪಟ್ಟರು. ಅಂಗಮಾಲಿ ಬಳಿಯ ಪಶ್ಚಿಮ ಬಂಗಾಳದ ಕೊಕ್ಕನ್ ಮಿಸ್ತ್ರಿ ಎಂಬುವರು ತಮ್ಮ ಮನೆಯಲ್ಲಿ ಇರುವಾಗ ಬೆಳಿಗ್ಗೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.</p>.<p>ಕೊಯಿಕ್ಕೋಡ್, ಕಣ್ಣೂರು, ಕಾಸರಗೋಡು, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 11.5 ಸೆಂ.ಮೀನಿಂದ 20.4 ಸೆಂ.ಮೀನಷ್ಟು ಮಳೆ ಸುರಿಯಲಿದೆ ಎಂದು ಇಲಾಖೆ ಅಂದಾಜಿಸಿದೆ.</p>.<p>ವಯನಾಡ್, ಮಲ್ಲಪ್ಪುರಂ, ಪಾಲಕ್ಕಾಡ್, ತ್ರಿಶ್ಶೂರ್, ಎರ್ನಾಕುಲಂ, ಇಡುಕ್ಕಿ ಮತ್ತು ಆಲಪ್ಪುಳ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ 6.4 ಸೆಂ.ಮೀನಿಂದ 11.5 ಸೆಂ.ಮೀನಷ್ಟು ಮಳೆಯಾಗಲಿದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವೇಗವಾಗಿ ಗಾಳಿ ಬೀಸಲಿದ್ದು, ಮಂಗಳವಾರವೂ ಭಾರಿ ಮಳೆಯಾಗಬಹುದು ಎಂದೂ ಹೇಳಿದೆ.</p>.ಬಂಗಾಳ ಕೊಲ್ಲಿಗೆ ಅಪ್ಪಳಿಸಲಿದೆ ಮೊಂಥಾ ಚಂಡಮಾರುತ: ಭಾರಿ ಮಳೆಯ ಮುನ್ಸೂಚನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>