<p><strong>ಕಣ್ಣೂರು</strong>: ಮಂಗಳೂರು– ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರಿಗೆ ಅವಧಿ ಮೀರಿದ ತಂಪು ಪಾನೀಯಗಳನ್ನು ಪೂರೈಕೆ ಮಾಡಿದ ಆರೋಪದ ಕುರಿತು ತನಿಖೆ ನಡೆಸುವಂತೆ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಆದೇಶ ಹೊರಡಿಸಿದೆ.</p>.<p>ಅವಧಿ ಮೀರಿದ ತಂಪು ಪಾನೀಯ ಪೂರೈಕೆಯಾದ ಕುರಿತು ಅಲ್ಲಿನ ಸ್ಥಳೀಯ ಮಾಧ್ಯಮ ವರದಿ ಪ್ರಕಟಿಸಿತ್ತು. ಅದನ್ನು ಆಧರಿಸಿ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಈ ಕುರಿತು ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಪಾಲಕ್ಕಾಡಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಸೂಚನೆ ನೀಡಿದ ಆಯೋಗದ ಸದಸ್ಯ ಕೆ. ಬೈಜುನಾಥ್ ಅವರು, ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಿದರು.</p>.<p>ಪಾನೀಯದ ಬಾಟಲಿಗಳ ಮೇಲಿದ್ದ ಮಾಹಿತಿಯ ಪ್ರಕಾರ, ಅದರ ತಯಾರಿಕೆಯು 2024ರ ಸೆಪ್ಟೆಂಬರ್ 25ರಂದು ಆಗಿದ್ದರೆ, ಅದರ ಅವಧಿಯು 2025ರ ಸೆಪ್ಟೆಂಬರ್ 25ರಂದು ಮುಗಿಯಲಿದೆ. ಈ ಕುರಿತು ಪ್ರಯಾಣಿಕರೊಬ್ಬರು ನೀಡಿದ್ದ ದೂರನ್ನು, ಆಹಾರ ಪೂರೈಕೆ ಸಿಬ್ಬಂದಿ ಕಡೆಗಣಿಸಿದ್ದರು ಎಂದು ಮಾಧ್ಯಮ ವರದಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು</strong>: ಮಂಗಳೂರು– ತಿರುವನಂತಪುರ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರಿಗೆ ಅವಧಿ ಮೀರಿದ ತಂಪು ಪಾನೀಯಗಳನ್ನು ಪೂರೈಕೆ ಮಾಡಿದ ಆರೋಪದ ಕುರಿತು ತನಿಖೆ ನಡೆಸುವಂತೆ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಶುಕ್ರವಾರ ಆದೇಶ ಹೊರಡಿಸಿದೆ.</p>.<p>ಅವಧಿ ಮೀರಿದ ತಂಪು ಪಾನೀಯ ಪೂರೈಕೆಯಾದ ಕುರಿತು ಅಲ್ಲಿನ ಸ್ಥಳೀಯ ಮಾಧ್ಯಮ ವರದಿ ಪ್ರಕಟಿಸಿತ್ತು. ಅದನ್ನು ಆಧರಿಸಿ ಆಯೋಗ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಈ ಕುರಿತು ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಪಾಲಕ್ಕಾಡಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಿಗೆ ಸೂಚನೆ ನೀಡಿದ ಆಯೋಗದ ಸದಸ್ಯ ಕೆ. ಬೈಜುನಾಥ್ ಅವರು, ವಿಚಾರಣೆಯನ್ನು ಜೂನ್ 26ಕ್ಕೆ ಮುಂದೂಡಿದರು.</p>.<p>ಪಾನೀಯದ ಬಾಟಲಿಗಳ ಮೇಲಿದ್ದ ಮಾಹಿತಿಯ ಪ್ರಕಾರ, ಅದರ ತಯಾರಿಕೆಯು 2024ರ ಸೆಪ್ಟೆಂಬರ್ 25ರಂದು ಆಗಿದ್ದರೆ, ಅದರ ಅವಧಿಯು 2025ರ ಸೆಪ್ಟೆಂಬರ್ 25ರಂದು ಮುಗಿಯಲಿದೆ. ಈ ಕುರಿತು ಪ್ರಯಾಣಿಕರೊಬ್ಬರು ನೀಡಿದ್ದ ದೂರನ್ನು, ಆಹಾರ ಪೂರೈಕೆ ಸಿಬ್ಬಂದಿ ಕಡೆಗಣಿಸಿದ್ದರು ಎಂದು ಮಾಧ್ಯಮ ವರದಿ ಉಲ್ಲೇಖಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>