<p><strong>ತಿರುವನಂತಪುರಂ</strong>: ಕರೆ ಸ್ವೀಕರಿಸುತ್ತಿಲ್ಲ ಎಂದು ಪತ್ರಕರ್ತೆಯೊಬ್ಬರು ವಾಟ್ಸ್ಆ್ಯಪ್ನಲ್ಲಿ ಪ್ರಶ್ನೆಗಳನ್ನು ಕೇಳಿ ಸಂದೇಶ ಕಳಿಸಿದರೆ, ಅವರಿಗೆ ಅಶ್ಲೀಲ ಸ್ಟಿಕರ್ಸ್ ಕಳಿಸುವ ಮೂಲಕ ತರ್ಲೆ ಮಾಡಿದ್ದ ಕೇರಳದ ಐಎಎಸ್ ಅಧಿಕಾರಿ ಎನ್ ಪ್ರಶಾಂತ್ (ಪ್ರಶಾಂತ್ ನಾಯರ್) ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೇರಳದ ‘ಮಾತೃಭೂಮಿ‘ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತೆಯೊಬ್ಬರು ಐಎಎಸ್ ಅಧಿಕಾರಿ ಮಾಡಿದ ಅವಮಾನ ಖಂಡಿಸಿ ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರು ಸಲ್ಲಿಸಿದ್ದರು.</p>.<p>‘ಕೇರಳ ವಿಧಾನಸಭೆ ಚುನಾವಣೆ ನಡೆಯುವ ಸಂದರ್ಭದಲ್ಲಿ ಕೇರಳ ಬಂದರು ಮತ್ತು ಒಳನಾಡು ಸಾರಿಗೆ ನಿಗಮದ (KSINC) ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ಪತ್ರಕರ್ತೆ ಏಪ್ರಿಲ್ 6 ರಂದು ನಿಗಮದ ಎಂಡಿ ಎನ್ ಪ್ರಶಾಂತ್ ಅವರಿಗೆ ಕರೆ ಮಾಡಿದ್ದರು. ಆದರೆ, ಅವರು ಕರೆ ಸ್ವೀಕರಿಸಿರಲಿಲ್ಲ. ನಂತರ ಪ್ರತಿಕ್ರಿಯೆ ನೀಡುವಂತೆ ವಾಟ್ಸ್ಆ್ಯಪ್ನಲ್ಲಿ ಆ ಪತ್ರಕರ್ತೆ ಸಂದೇಶ ಕಳುಹಿಸಿದ್ದರು‘ ಎಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದೆ.</p>.<p>‘ಆದರೆ, ಇದಕ್ಕೆ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ವಾಪಸ್ ಪ್ರತಿಕ್ರಿಯೆ ನೀಡದೇ ಅಶ್ಲೀಲ ಸ್ಟಿಕರ್ಸ್ ಕಳಿಸಿ ಎನ್ ಪ್ರಶಾಂತ್ ಅವರು ತರ್ಲೆ ಮಾಡಿದ್ದಾರೆ. ಇದರಿಂದ ನನಗೆ ಅವಮಾನವಾಗಿದೆ ಎಂದು ನಮಗೆ ಪತ್ರಕರ್ತೆ ದೂರು ನೀಡಿದ್ದರು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡಿದ್ದರಿಂದ ಎನ್ ಪ್ರಶಾಂತ್ ವಿರುದ್ಧ ದೂರು ದಾಖಲಾಗಿದೆ‘ ಎಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ.</p>.<p>ಇದೀಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಎನ್ ಪ್ರಶಾಂತ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಕರೆ ಸ್ವೀಕರಿಸುತ್ತಿಲ್ಲ ಎಂದು ಪತ್ರಕರ್ತೆಯೊಬ್ಬರು ವಾಟ್ಸ್ಆ್ಯಪ್ನಲ್ಲಿ ಪ್ರಶ್ನೆಗಳನ್ನು ಕೇಳಿ ಸಂದೇಶ ಕಳಿಸಿದರೆ, ಅವರಿಗೆ ಅಶ್ಲೀಲ ಸ್ಟಿಕರ್ಸ್ ಕಳಿಸುವ ಮೂಲಕ ತರ್ಲೆ ಮಾಡಿದ್ದ ಕೇರಳದ ಐಎಎಸ್ ಅಧಿಕಾರಿ ಎನ್ ಪ್ರಶಾಂತ್ (ಪ್ರಶಾಂತ್ ನಾಯರ್) ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೇರಳದ ‘ಮಾತೃಭೂಮಿ‘ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತೆಯೊಬ್ಬರು ಐಎಎಸ್ ಅಧಿಕಾರಿ ಮಾಡಿದ ಅವಮಾನ ಖಂಡಿಸಿ ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ದೂರು ಸಲ್ಲಿಸಿದ್ದರು.</p>.<p>‘ಕೇರಳ ವಿಧಾನಸಭೆ ಚುನಾವಣೆ ನಡೆಯುವ ಸಂದರ್ಭದಲ್ಲಿ ಕೇರಳ ಬಂದರು ಮತ್ತು ಒಳನಾಡು ಸಾರಿಗೆ ನಿಗಮದ (KSINC) ಅವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ಪತ್ರಕರ್ತೆ ಏಪ್ರಿಲ್ 6 ರಂದು ನಿಗಮದ ಎಂಡಿ ಎನ್ ಪ್ರಶಾಂತ್ ಅವರಿಗೆ ಕರೆ ಮಾಡಿದ್ದರು. ಆದರೆ, ಅವರು ಕರೆ ಸ್ವೀಕರಿಸಿರಲಿಲ್ಲ. ನಂತರ ಪ್ರತಿಕ್ರಿಯೆ ನೀಡುವಂತೆ ವಾಟ್ಸ್ಆ್ಯಪ್ನಲ್ಲಿ ಆ ಪತ್ರಕರ್ತೆ ಸಂದೇಶ ಕಳುಹಿಸಿದ್ದರು‘ ಎಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದೆ.</p>.<p>‘ಆದರೆ, ಇದಕ್ಕೆ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ವಾಪಸ್ ಪ್ರತಿಕ್ರಿಯೆ ನೀಡದೇ ಅಶ್ಲೀಲ ಸ್ಟಿಕರ್ಸ್ ಕಳಿಸಿ ಎನ್ ಪ್ರಶಾಂತ್ ಅವರು ತರ್ಲೆ ಮಾಡಿದ್ದಾರೆ. ಇದರಿಂದ ನನಗೆ ಅವಮಾನವಾಗಿದೆ ಎಂದು ನಮಗೆ ಪತ್ರಕರ್ತೆ ದೂರು ನೀಡಿದ್ದರು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡಿದ್ದರಿಂದ ಎನ್ ಪ್ರಶಾಂತ್ ವಿರುದ್ಧ ದೂರು ದಾಖಲಾಗಿದೆ‘ ಎಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ.</p>.<p>ಇದೀಗ ದೂರು ದಾಖಲಿಸಿಕೊಂಡಿರುವ ಪೊಲೀಸರು ಎನ್ ಪ್ರಶಾಂತ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>