‘ಆದರೆ, ಇದಕ್ಕೆ ಒಬ್ಬ ಜವಾಬ್ದಾರಿಯುತ ಅಧಿಕಾರಿಯಾಗಿ ವಾಪಸ್ ಪ್ರತಿಕ್ರಿಯೆ ನೀಡದೇ ಅಶ್ಲೀಲ ಸ್ಟಿಕರ್ಸ್ ಕಳಿಸಿ ಎನ್ ಪ್ರಶಾಂತ್ ಅವರು ತರ್ಲೆ ಮಾಡಿದ್ದಾರೆ. ಇದರಿಂದ ನನಗೆ ಅವಮಾನವಾಗಿದೆ ಎಂದು ನಮಗೆ ಪತ್ರಕರ್ತೆ ದೂರು ನೀಡಿದ್ದರು. ಈ ಪ್ರಕರಣವನ್ನು ನಾವು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡಿದ್ದರಿಂದ ಎನ್ ಪ್ರಶಾಂತ್ ವಿರುದ್ಧ ದೂರು ದಾಖಲಾಗಿದೆ‘ ಎಂದು ಕೇರಳ ಕಾರ್ಯನಿರತ ಪತ್ರಕರ್ತರ ಸಂಘ ತಿಳಿಸಿದೆ.