<p><strong>ನವದೆಹಲಿ</strong>: ಕಳೆದ ವರ್ಷ ಭೀಕರ ಭೂಕುಸಿತ ಸಂಭವಿಸಿ 400 ಜನರು ಸಾವಿಗೀಡಾದ ಕೇರಳದ ವಯನಾಡು ಜಿಲ್ಲೆಯಲ್ಲಿ ಎಕ್ಸ್–ಬ್ಯಾಂಡ್ ರಾಡಾರ್ ಸ್ಥಾಪಿಸಲು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನಿರ್ಧರಿಸಿದೆ.</p><p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮುಖದಲ್ಲಿ ವಯನಾಡಿನ ಪುಲ್ಪಳ್ಳಿಯಲ್ಲಿರುವ ಪಳಸ್ಸಿರಾಜ ಕಾಲೇಜಿನಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಅಳವಡಿಸಲು ಐಎಂಡಿ ಒಪ್ಪಂದಕ್ಕೆ ಸಹಿ ಹಾಕಿದೆ.</p><p>100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಎಕ್ಸ್-ಬ್ಯಾಂಡ್ ರಾಡಾರ್, ವಿಪತ್ತು ಪೀಡಿತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹವಾಮಾನ ವೀಕ್ಷಣಾ ಮೂಲಸೌಕರ್ಯಕ್ಕೆ ನಿರ್ಣಾಯಕ ಸೇರ್ಪಡೆಯಾಗಿದೆ ಎಂದು ಐಎಂಡಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಈ ಅತ್ಯಾಧುನಿಕ ವ್ಯವಸ್ಥೆಯು ಹವಾಮಾನ ಮುನ್ಸೂಚನೆಯ ನಿಖರತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಹವಾಮಾನ ವೈಪರೀತ್ಯಗಳ ಕುರಿತಂತೆ ಹೆಚ್ಚು ಸಮಯೋಚಿತ ಮತ್ತು ನಿಖರವಾದ ಮುನ್ಸೂಚನೆ ನೀಡುತ್ತದೆ. ಈ ಪ್ರದೇಶದಲ್ಲಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆ ಪ್ರಯತ್ನಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ ಎಂದು ಪೋಸ್ಟ್ನಲ್ಲಿ ಐಎಂಡಿ ಹೇಳಿದೆ.</p><p>ಕಳೆದ ವರ್ಷ ಜುಲೈ 30ರಂದು ವಯನಾಡಿನಲ್ಲಿ ಭೂಕುಸಿತಕ್ಕೆ ಕಾರಣವಾದ ಭಾರಿ ಮಳೆ ಬಗ್ಗೆ ಮುನ್ಸೂಚನೆ ನೀಡುವಲ್ಲಿ ಐಎಂಡಿ ವಿಫಲವಾಗಿತ್ತು ಎಂದು ಕೇರಳ ಸರ್ಕಾರ ಈ ಹಿಂದೆ ಆರೋಪಿಸಿತ್ತು.</p><p>ಕಳೆದ ವರ್ಷ ಆಗಸ್ಟ್ನಲ್ಲಿ, ವಯನಾಡಿನಲ್ಲಿ ತೀವ್ರ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಹವಾಮಾನ ಬದಲಾವಣೆಯಿಂದ ಶೇ 10ರಷ್ಟು ಮಳೆ ಹೆಚ್ಚಾಗಿದೆ ಎಂದು ಜಾಗತಿಕ ವಿಜ್ಞಾನಿಗಳ ತಂಡ ಹೇಳಿತ್ತು.</p><p>ಎರಡು ತಿಂಗಳ ಮಾನ್ಸೂನ್ ಮಳೆಯಿಂದ ತೋಯ್ದಿದ್ದ ಮಣ್ಣಿನ ಮೇಲೆ ಒಂದೇ ದಿನದಲ್ಲಿ 140 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದ್ದು, ಭೀಕರ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದೆ ಎಂದು ಭಾರತ, ಸ್ವೀಡನ್, ಅಮೆರಿಕ ಮತ್ತು ಬ್ರಿಟನ್ನ 24 ಸಂಶೋಧಕರ ತಂಡವು ಹೇಳಿತ್ತು.</p><p>2021ರಲ್ಲಿ ಸ್ಪ್ರಿಂಗರ್ ಪ್ರಕಟಿಸಿದ್ದ ಅಧ್ಯಯನ ಪ್ರಕಾರ, ಕೇರಳದ ಎಲ್ಲ ಭೂಕುಸಿತ ತಾಣಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿವೆ. ಇಡುಕ್ಕಿ, ಎರ್ನಾಕುಲಂ, ಕೊಟ್ಟಾಯಂ, ವಯನಾಡ್, ಕೋಯಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಳೆದ ವರ್ಷ ಭೀಕರ ಭೂಕುಸಿತ ಸಂಭವಿಸಿ 400 ಜನರು ಸಾವಿಗೀಡಾದ ಕೇರಳದ ವಯನಾಡು ಜಿಲ್ಲೆಯಲ್ಲಿ ಎಕ್ಸ್–ಬ್ಯಾಂಡ್ ರಾಡಾರ್ ಸ್ಥಾಪಿಸಲು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ನಿರ್ಧರಿಸಿದೆ.</p><p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸಮ್ಮುಖದಲ್ಲಿ ವಯನಾಡಿನ ಪುಲ್ಪಳ್ಳಿಯಲ್ಲಿರುವ ಪಳಸ್ಸಿರಾಜ ಕಾಲೇಜಿನಲ್ಲಿ ಎಕ್ಸ್-ಬ್ಯಾಂಡ್ ರಾಡಾರ್ ಅಳವಡಿಸಲು ಐಎಂಡಿ ಒಪ್ಪಂದಕ್ಕೆ ಸಹಿ ಹಾಕಿದೆ.</p><p>100 ಕಿ.ಮೀ ವ್ಯಾಪ್ತಿಯನ್ನು ಹೊಂದಿರುವ ಎಕ್ಸ್-ಬ್ಯಾಂಡ್ ರಾಡಾರ್, ವಿಪತ್ತು ಪೀಡಿತ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಹವಾಮಾನ ವೀಕ್ಷಣಾ ಮೂಲಸೌಕರ್ಯಕ್ಕೆ ನಿರ್ಣಾಯಕ ಸೇರ್ಪಡೆಯಾಗಿದೆ ಎಂದು ಐಎಂಡಿ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.</p><p>ಈ ಅತ್ಯಾಧುನಿಕ ವ್ಯವಸ್ಥೆಯು ಹವಾಮಾನ ಮುನ್ಸೂಚನೆಯ ನಿಖರತೆಯನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಹವಾಮಾನ ವೈಪರೀತ್ಯಗಳ ಕುರಿತಂತೆ ಹೆಚ್ಚು ಸಮಯೋಚಿತ ಮತ್ತು ನಿಖರವಾದ ಮುನ್ಸೂಚನೆ ನೀಡುತ್ತದೆ. ಈ ಪ್ರದೇಶದಲ್ಲಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆ ಪ್ರಯತ್ನಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ ಎಂದು ಪೋಸ್ಟ್ನಲ್ಲಿ ಐಎಂಡಿ ಹೇಳಿದೆ.</p><p>ಕಳೆದ ವರ್ಷ ಜುಲೈ 30ರಂದು ವಯನಾಡಿನಲ್ಲಿ ಭೂಕುಸಿತಕ್ಕೆ ಕಾರಣವಾದ ಭಾರಿ ಮಳೆ ಬಗ್ಗೆ ಮುನ್ಸೂಚನೆ ನೀಡುವಲ್ಲಿ ಐಎಂಡಿ ವಿಫಲವಾಗಿತ್ತು ಎಂದು ಕೇರಳ ಸರ್ಕಾರ ಈ ಹಿಂದೆ ಆರೋಪಿಸಿತ್ತು.</p><p>ಕಳೆದ ವರ್ಷ ಆಗಸ್ಟ್ನಲ್ಲಿ, ವಯನಾಡಿನಲ್ಲಿ ತೀವ್ರ ಮಳೆಯಿಂದ ಭೂಕುಸಿತ ಉಂಟಾಗಿದ್ದು, ಹವಾಮಾನ ಬದಲಾವಣೆಯಿಂದ ಶೇ 10ರಷ್ಟು ಮಳೆ ಹೆಚ್ಚಾಗಿದೆ ಎಂದು ಜಾಗತಿಕ ವಿಜ್ಞಾನಿಗಳ ತಂಡ ಹೇಳಿತ್ತು.</p><p>ಎರಡು ತಿಂಗಳ ಮಾನ್ಸೂನ್ ಮಳೆಯಿಂದ ತೋಯ್ದಿದ್ದ ಮಣ್ಣಿನ ಮೇಲೆ ಒಂದೇ ದಿನದಲ್ಲಿ 140 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದ್ದು, ಭೀಕರ ಭೂಕುಸಿತ ಮತ್ತು ಪ್ರವಾಹಕ್ಕೆ ಕಾರಣವಾಗಿದೆ ಎಂದು ಭಾರತ, ಸ್ವೀಡನ್, ಅಮೆರಿಕ ಮತ್ತು ಬ್ರಿಟನ್ನ 24 ಸಂಶೋಧಕರ ತಂಡವು ಹೇಳಿತ್ತು.</p><p>2021ರಲ್ಲಿ ಸ್ಪ್ರಿಂಗರ್ ಪ್ರಕಟಿಸಿದ್ದ ಅಧ್ಯಯನ ಪ್ರಕಾರ, ಕೇರಳದ ಎಲ್ಲ ಭೂಕುಸಿತ ತಾಣಗಳು ಪಶ್ಚಿಮ ಘಟ್ಟ ಪ್ರದೇಶದಲ್ಲಿವೆ. ಇಡುಕ್ಕಿ, ಎರ್ನಾಕುಲಂ, ಕೊಟ್ಟಾಯಂ, ವಯನಾಡ್, ಕೋಯಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಹೇಳಿತ್ತು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>