ಕಳೆದ ವರ್ಷ ಕೇರಳದಲ್ಲಿ ಸಂಭವಿಸಿದ್ದ ಪ್ರವಾಹದಿಂದಾಗಿ ಅನೇಕರು ಸಂಕಷ್ಟಕ್ಕೆ ಸಿಲುಕಿದ್ದರು. ಸಂತ್ರಸ್ತರಿಗೆ ವಿತರಿಸಲು ಜಲೀಲ್, ಅರಬ್ ಸಂಯುಕ್ತ ರಾಷ್ಟ್ರಗಳಿಂದ ಸುಮಾರು 300 ಪರಿಹಾರ ಕಿಟ್ ಹಾಗೂ ಕುರಾನ್ ಪ್ರತಿಗಳನ್ನು ತರಿಸಿದ್ದರು. ರಾಜತಾಂತ್ರಿಕ ಬ್ಯಾಗೇಜ್ ಮೂಲಕ ಇವುಗಳನ್ನು ಅಕ್ರಮವಾಗಿ ತರಿಸಲಾಗಿತ್ತು ಎಂಬ ಆರೋಪವಿದೆ. ಇದಕ್ಕೆ ಸಂಬಂಧಿಸಿದಂತೆ ಜಲೀಲ್ ಕಳೆದ ಶುಕ್ರವಾರ ಜಾರಿ ನಿರ್ದೇಶನಾಲಯದ (ಇಡಿ) ಎದುರು ವಿಚಾರಣೆಗೆ ಹಾಜರಾಗಿದ್ದರು.