<p><strong>ನವದೆಹಲಿ:</strong> ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p>.<p>ಕೇರಳಂನಲ್ಲಿ ವಾಡಿಕೆಯಂತೆ ಜೂನ್ 1ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಈ ಬಾರಿ ವಾಡಿಕೆಗಿಂತ ನಾಲ್ಕು ದಿನ ಮುನ್ನ ಅಥವಾ ನಾಲ್ಕು ದಿನ ನಂತರ ಮುಂಗಾರು ಪ್ರವೇಶಿಸಬಹುದು ಎಂದು ಐಎಂಡಿ ಅಂದಾಜಿಸಿದೆ.</p>.<p>‘ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಹಾಗೂ ಅಂಡಮಾನ್ ನಿಕೋಬಾರ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲು ಅನುಕೂಲಕರ ಪರಿಸ್ಥಿತಿಯಿದೆ’ ಎಂದು ಇಲಾಖೆ ತಿಳಿಸಿದೆ.</p>.<p>ಮುಂಗಾರು ಉತ್ತರದ ಕಡೆಗೆ ಸಾಗುತ್ತಿದ್ದಂತೆ, ಈ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲ ಝಳ ತಗ್ಗುತ್ತದೆ. ಕಳೆದ ವರ್ಷ ಮೇ 24ರಂದು ಮುಂಗಾರು ಪ್ರವೇಶಿಸಿತ್ತು ಎಂದು ಅದು ಹೇಳಿದೆ.</p>.<p>ದೇಶದಲ್ಲಿ ಬೀಳುವ ಒಟ್ಟು ಮಳೆಯ ಪ್ರಮಾಣದಲ್ಲಿ ಶೇ 70ರಷ್ಟು ಮಳೆಯು ಮುಂಗಾರಿನ ನಾಲ್ಕು ತಿಂಗಳಲ್ಲೇ ಬೀಳುತ್ತದೆ. ದೇಶದ ಕೃಷಿ ಚಟುವಟಿಕೆಗಳು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿವೆ. ಹೀಗಾಗಿ ದೇಶದ ಆರ್ಥಿಕತೆಯ ಮೇಲೆ ಮುಂಗಾರು ಮಳೆಯು ಗಾಢವಾದ ಪರಿಣಾಮವನ್ನು ಉಂಟುಮಾಡುತ್ತದೆ. </p>.<p>ಭಾರತದಲ್ಲಿ ಈ ವರ್ಷ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ದೇಶದಲ್ಲಿ 1971ರಿಂದ 2020ರವರೆಗೆ ಮುಂಗಾರು ಅವಧಿಯಲ್ಲಿ ಸರಾಸರಿ 87 ಸೆಂ.ಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ 80 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. </p>.<p>ಎಲ್ ನಿನೊ ಕಾರಣದಿಂದ ಈ ವರ್ಷ ದೇಶದಲ್ಲಿ ಕಡಿಮೆ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ನೈರುತ್ಯ ಮುಂಗಾರು ಮಾರುತಗಳು ಮೇ 26ರಂದು ಕೇರಳಂ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.</p>.<p>ಕೇರಳಂನಲ್ಲಿ ವಾಡಿಕೆಯಂತೆ ಜೂನ್ 1ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಈ ಬಾರಿ ವಾಡಿಕೆಗಿಂತ ನಾಲ್ಕು ದಿನ ಮುನ್ನ ಅಥವಾ ನಾಲ್ಕು ದಿನ ನಂತರ ಮುಂಗಾರು ಪ್ರವೇಶಿಸಬಹುದು ಎಂದು ಐಎಂಡಿ ಅಂದಾಜಿಸಿದೆ.</p>.<p>‘ಮುಂದಿನ 24 ಗಂಟೆಗಳಲ್ಲಿ ಬಂಗಾಳ ಕೊಲ್ಲಿಯ ದಕ್ಷಿಣ ಭಾಗ, ಅಂಡಮಾನ್ ಸಮುದ್ರ ಹಾಗೂ ಅಂಡಮಾನ್ ನಿಕೋಬಾರ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಮುಂಗಾರು ಪ್ರವೇಶಿಸಲು ಅನುಕೂಲಕರ ಪರಿಸ್ಥಿತಿಯಿದೆ’ ಎಂದು ಇಲಾಖೆ ತಿಳಿಸಿದೆ.</p>.<p>ಮುಂಗಾರು ಉತ್ತರದ ಕಡೆಗೆ ಸಾಗುತ್ತಿದ್ದಂತೆ, ಈ ಪ್ರದೇಶಗಳಲ್ಲಿ ಬೇಸಿಗೆಯ ಬಿಸಿಲ ಝಳ ತಗ್ಗುತ್ತದೆ. ಕಳೆದ ವರ್ಷ ಮೇ 24ರಂದು ಮುಂಗಾರು ಪ್ರವೇಶಿಸಿತ್ತು ಎಂದು ಅದು ಹೇಳಿದೆ.</p>.<p>ದೇಶದಲ್ಲಿ ಬೀಳುವ ಒಟ್ಟು ಮಳೆಯ ಪ್ರಮಾಣದಲ್ಲಿ ಶೇ 70ರಷ್ಟು ಮಳೆಯು ಮುಂಗಾರಿನ ನಾಲ್ಕು ತಿಂಗಳಲ್ಲೇ ಬೀಳುತ್ತದೆ. ದೇಶದ ಕೃಷಿ ಚಟುವಟಿಕೆಗಳು ಮುಂಗಾರು ಮಳೆಯನ್ನೇ ಹೆಚ್ಚು ಅವಲಂಬಿಸಿವೆ. ಹೀಗಾಗಿ ದೇಶದ ಆರ್ಥಿಕತೆಯ ಮೇಲೆ ಮುಂಗಾರು ಮಳೆಯು ಗಾಢವಾದ ಪರಿಣಾಮವನ್ನು ಉಂಟುಮಾಡುತ್ತದೆ. </p>.<p>ಭಾರತದಲ್ಲಿ ಈ ವರ್ಷ ಮುಂಗಾರು ಋತುವಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ದೇಶದಲ್ಲಿ 1971ರಿಂದ 2020ರವರೆಗೆ ಮುಂಗಾರು ಅವಧಿಯಲ್ಲಿ ಸರಾಸರಿ 87 ಸೆಂ.ಮೀ ಮಳೆಯಾಗುತ್ತಿತ್ತು. ಆದರೆ, ಈ ಬಾರಿ 80 ಸೆಂ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. </p>.<p>ಎಲ್ ನಿನೊ ಕಾರಣದಿಂದ ಈ ವರ್ಷ ದೇಶದಲ್ಲಿ ಕಡಿಮೆ ಮಳೆಯಾಗುವ ಸಂಭವವಿದೆ ಎಂದು ಐಎಂಡಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>