<p><strong>ತಿರುವನಂತಪುರ:</strong> ಪರೀಕ್ಷೆ ಸಂದರ್ಭದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಮೂತ್ರ ವಿಸರ್ಜನೆಗೆ ತೆರಳಲು ಅನುಮತಿ ನಿರಾಕರಿಸಿದ್ದರಿಂದ ಶಿಕ್ಷಕಿಯೊಬ್ಬರ ವಿರುದ್ಧ ಕೇರಳದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಪದೇ ಪದೇ ಮನವಿ ಮಾಡಿದ್ದರೂ ವಿದ್ಯಾರ್ಥಿಗೆ ಅನುಮತಿ ನೀಡಲಿಲ್ಲ. ಇದರಿಂದ, ವಿದ್ಯಾರ್ಥಿ ನಿಯಂತ್ರಣ ಮಾಡಿಕೊಳ್ಳಲು ಸಾಧ್ಯವಾಗದೆ ಪರೀಕ್ಷಾ ಕೊಠಡಿಯಲ್ಲೇ ಮೂತ್ರ ವಿಸರ್ಜನೆ ಮಾಡಿದ್ದ. ಹೀಗಾಗಿ, ಮಾನಸಿಕವಾಗಿ ಕುಗ್ಗಿ, ಪರೀಕ್ಷೆಯನ್ನು ಸಮರ್ಪಕವಾಗಿ ಬರೆಯಲು ಸಾಧ್ಯವಾಗಿಲ್ಲ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ.</p>.<p>ಮೂತ್ರ ವಿಸರ್ಜನೆ ನೆಪದಲ್ಲಿ ನಕಲು ಮಾಡಲು ಸಾಧ್ಯತೆಗಳಿರುತ್ತವೆ. ಆದ್ದರಿಂದ, ವಿದ್ಯಾರ್ಥಿಗೆ ಅನುಮತಿ ನೀಡಲಿಲ್ಲ ಎಂದು ಶಿಕ್ಷಕಿ ಪ್ರತಿಪಾದಿಸಿದ್ದಾರೆ. ಕೊಲ್ಲಂ ನಗರದ ಸಮೀಪದ ಕಡಕ್ಕಲ್ ಪ್ರೌಢಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಆಯೋಗವು ಶಾಲೆಯ ಆಡಳಿತ ಮಂಡಳಿಗೆ ಸೂಚಿಸಿದೆ. ವಿದ್ಯಾರ್ಥಿಯ ಪೋಷಕರು ಸಹ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪರೀಕ್ಷೆ ಸಂದರ್ಭದಲ್ಲಿ ಶೌಚಾಲಯಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು ಎಂದು ಕೇರಳದ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಗೆ ಹೊಸದಾಗಿ ಸುತ್ತೋಲೆ ಕಳುಹಿಸಿದೆ. ಮಕ್ಕಳ ಹಕ್ಕುಗಳ ಆಯೋಗವು ಸಹ ಈ ಬಗ್ಗೆ ನಿರ್ದೇಶನ ನೀಡಿದೆ ಎಂದು ಅಧ್ಯಕ್ಷ ಪಿ. ಸುರೇಶ್ ತಿಳಿಸಿದ್ದಾರೆ.</p>.<p>ಶಿಕ್ಷಕಿ ಮತ್ತು ವಿದ್ಯಾರ್ಥಿಯ ಹೇಳಿಕೆಗಳನ್ನು ಪಡೆದ ಬಳಿಕ ಆಯೋಗ ಮತ್ತು ಪೊಲೀಸರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಪರೀಕ್ಷೆ ಸಂದರ್ಭದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಮೂತ್ರ ವಿಸರ್ಜನೆಗೆ ತೆರಳಲು ಅನುಮತಿ ನಿರಾಕರಿಸಿದ್ದರಿಂದ ಶಿಕ್ಷಕಿಯೊಬ್ಬರ ವಿರುದ್ಧ ಕೇರಳದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p>.<p>ಪದೇ ಪದೇ ಮನವಿ ಮಾಡಿದ್ದರೂ ವಿದ್ಯಾರ್ಥಿಗೆ ಅನುಮತಿ ನೀಡಲಿಲ್ಲ. ಇದರಿಂದ, ವಿದ್ಯಾರ್ಥಿ ನಿಯಂತ್ರಣ ಮಾಡಿಕೊಳ್ಳಲು ಸಾಧ್ಯವಾಗದೆ ಪರೀಕ್ಷಾ ಕೊಠಡಿಯಲ್ಲೇ ಮೂತ್ರ ವಿಸರ್ಜನೆ ಮಾಡಿದ್ದ. ಹೀಗಾಗಿ, ಮಾನಸಿಕವಾಗಿ ಕುಗ್ಗಿ, ಪರೀಕ್ಷೆಯನ್ನು ಸಮರ್ಪಕವಾಗಿ ಬರೆಯಲು ಸಾಧ್ಯವಾಗಿಲ್ಲ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ.</p>.<p>ಮೂತ್ರ ವಿಸರ್ಜನೆ ನೆಪದಲ್ಲಿ ನಕಲು ಮಾಡಲು ಸಾಧ್ಯತೆಗಳಿರುತ್ತವೆ. ಆದ್ದರಿಂದ, ವಿದ್ಯಾರ್ಥಿಗೆ ಅನುಮತಿ ನೀಡಲಿಲ್ಲ ಎಂದು ಶಿಕ್ಷಕಿ ಪ್ರತಿಪಾದಿಸಿದ್ದಾರೆ. ಕೊಲ್ಲಂ ನಗರದ ಸಮೀಪದ ಕಡಕ್ಕಲ್ ಪ್ರೌಢಶಾಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಈ ಬಗ್ಗೆ ಸಮಗ್ರ ವರದಿ ನೀಡುವಂತೆ ಆಯೋಗವು ಶಾಲೆಯ ಆಡಳಿತ ಮಂಡಳಿಗೆ ಸೂಚಿಸಿದೆ. ವಿದ್ಯಾರ್ಥಿಯ ಪೋಷಕರು ಸಹ ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಪರೀಕ್ಷೆ ಸಂದರ್ಭದಲ್ಲಿ ಶೌಚಾಲಯಕ್ಕೆ ತೆರಳಲು ವಿದ್ಯಾರ್ಥಿಗಳಿಗೆ ಅವಕಾಶ ನಿರಾಕರಿಸಬಾರದು ಎಂದು ಕೇರಳದ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಗೆ ಹೊಸದಾಗಿ ಸುತ್ತೋಲೆ ಕಳುಹಿಸಿದೆ. ಮಕ್ಕಳ ಹಕ್ಕುಗಳ ಆಯೋಗವು ಸಹ ಈ ಬಗ್ಗೆ ನಿರ್ದೇಶನ ನೀಡಿದೆ ಎಂದು ಅಧ್ಯಕ್ಷ ಪಿ. ಸುರೇಶ್ ತಿಳಿಸಿದ್ದಾರೆ.</p>.<p>ಶಿಕ್ಷಕಿ ಮತ್ತು ವಿದ್ಯಾರ್ಥಿಯ ಹೇಳಿಕೆಗಳನ್ನು ಪಡೆದ ಬಳಿಕ ಆಯೋಗ ಮತ್ತು ಪೊಲೀಸರು ಮುಂದಿನ ಕ್ರಮಕೈಗೊಳ್ಳಲಿದ್ದಾರೆ ಎಂದು ಸುರೇಶ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>