<p><strong>ತಿರುವನಂತಪುರಂ:</strong> ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ಕೈಬಿಟ್ಟಿರುವ ವಿಷಯಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸಿರುವುದಾಗಿ ಕೇರಳ ಸರ್ಕಾರ ಸೋಮವಾರ ಹೇಳಿದೆ.</p><p>ರಾಜ್ಯಕ್ಕೆ ಅನುಕರಣೀಯ ಶೈಕ್ಷಣಿಕ ಹಿನ್ನೆಲೆ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಹೇಳಿದ್ದಾರೆ.</p><p>ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ–2023ರನ್ನು ಅಳವಡಿಸುವುದರ ಬಗ್ಗೆ ವಿರೋಧ ಪಕ್ಷ ಯುಡಿಎಫ್ ಎತ್ತಿದ ಪ್ರಶ್ನೆಗೆ ಅವರು ವಿಧಾನಸಭೆಯಲ್ಲಿ ಉತ್ತರಿಸಿದರು.</p><p>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಸಂಪೂರ್ಣವಾಗಿ ಅಳವಡಿಸಿಲ್ಲ. ತಮಿಳುನಾಡು ತಿರಸ್ಕರಿಸಿದೆ. ಕರ್ನಾಟಕ ಕೆಲ ಭಾಗವನ್ನಷ್ಟೇ ಒಪ್ಪಿಕೊಂಡಿದೆ’ ಎಂದು ಅವರು ಹೇಳಿದರು.</p><p>‘ಹೆಚ್ಚಾಗಿ, ಎನ್ಸಿಇಆರ್ಟಿ ಮಹಾತ್ಮಾ ಗಾಂಧಿ ಅವರ ಕೊಲೆಯಲ್ಲಿ ಆರ್ಎಸ್ಎಸ್ ಪಾತ್ರದ ಆರೋಪ ಇರುವುದರಿಂದ ಆ ವಿಷಯ ಸೇರಿ, ಭಾರತದಲ್ಲಿ ಮೊಘಲ್ ಆಳ್ವಿಕೆ, ಭಾರತದ ಸ್ವಾತಂತ್ರ್ಯ ಹೋರಾಟದ ಮತ್ತು ಕೆಲವು ಕೋಮುಗಲಭೆಗಳನ್ನು 11 ಹಾಗೂ 12ನೇ ತರಗತಿಗಳ ಪಠ್ಯದಿಂದ ಕೈ ಬಿಟ್ಟಿತ್ತು’ ಎಂದು ಅವರು ಹೇಳಿದ್ದಾರೆ.</p><p>‘ಹೀಗಾಗಿ ಎನ್ಸಿಇಆರ್ಟಿ ಕೈಬಿಟ್ಟಿರುವ ಭಾಗಗಳನ್ನು ನಾವು ಹೊಸ ಪಠ್ಯದಲ್ಲಿ ಸೇರಿಸಿದ್ದೇವೆ. ಇದು ಕೇವಲ ಪಠ್ಯಪುಸ್ತಕವಲ್ಲ. ವಿದ್ಯಾರ್ಥಿಗಳು ಅಧ್ಯಯನ ಮಾಡಲು ಮತ್ತು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾದ ಪಠ್ಯಕ್ರಮವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ಇದೇ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೇರಳ ಮುಖ್ಯಮಂತ್ರಿ ಪೂರಕ ಪಠ್ಯಪುಸ್ತಕ ಬಿಡುಗಡೆ ಮಾಡಿದ್ದರು. ಆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ:</strong> ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ಕೈಬಿಟ್ಟಿರುವ ವಿಷಯಗಳನ್ನು ಶಾಲಾ ಪಠ್ಯದಲ್ಲಿ ಅಳವಡಿಸಿರುವುದಾಗಿ ಕೇರಳ ಸರ್ಕಾರ ಸೋಮವಾರ ಹೇಳಿದೆ.</p><p>ರಾಜ್ಯಕ್ಕೆ ಅನುಕರಣೀಯ ಶೈಕ್ಷಣಿಕ ಹಿನ್ನೆಲೆ ಇರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಹೇಳಿದ್ದಾರೆ.</p><p>ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ–2023ರನ್ನು ಅಳವಡಿಸುವುದರ ಬಗ್ಗೆ ವಿರೋಧ ಪಕ್ಷ ಯುಡಿಎಫ್ ಎತ್ತಿದ ಪ್ರಶ್ನೆಗೆ ಅವರು ವಿಧಾನಸಭೆಯಲ್ಲಿ ಉತ್ತರಿಸಿದರು.</p><p>‘ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಸಂಪೂರ್ಣವಾಗಿ ಅಳವಡಿಸಿಲ್ಲ. ತಮಿಳುನಾಡು ತಿರಸ್ಕರಿಸಿದೆ. ಕರ್ನಾಟಕ ಕೆಲ ಭಾಗವನ್ನಷ್ಟೇ ಒಪ್ಪಿಕೊಂಡಿದೆ’ ಎಂದು ಅವರು ಹೇಳಿದರು.</p><p>‘ಹೆಚ್ಚಾಗಿ, ಎನ್ಸಿಇಆರ್ಟಿ ಮಹಾತ್ಮಾ ಗಾಂಧಿ ಅವರ ಕೊಲೆಯಲ್ಲಿ ಆರ್ಎಸ್ಎಸ್ ಪಾತ್ರದ ಆರೋಪ ಇರುವುದರಿಂದ ಆ ವಿಷಯ ಸೇರಿ, ಭಾರತದಲ್ಲಿ ಮೊಘಲ್ ಆಳ್ವಿಕೆ, ಭಾರತದ ಸ್ವಾತಂತ್ರ್ಯ ಹೋರಾಟದ ಮತ್ತು ಕೆಲವು ಕೋಮುಗಲಭೆಗಳನ್ನು 11 ಹಾಗೂ 12ನೇ ತರಗತಿಗಳ ಪಠ್ಯದಿಂದ ಕೈ ಬಿಟ್ಟಿತ್ತು’ ಎಂದು ಅವರು ಹೇಳಿದ್ದಾರೆ.</p><p>‘ಹೀಗಾಗಿ ಎನ್ಸಿಇಆರ್ಟಿ ಕೈಬಿಟ್ಟಿರುವ ಭಾಗಗಳನ್ನು ನಾವು ಹೊಸ ಪಠ್ಯದಲ್ಲಿ ಸೇರಿಸಿದ್ದೇವೆ. ಇದು ಕೇವಲ ಪಠ್ಯಪುಸ್ತಕವಲ್ಲ. ವಿದ್ಯಾರ್ಥಿಗಳು ಅಧ್ಯಯನ ಮಾಡಲು ಮತ್ತು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದಾದ ಪಠ್ಯಕ್ರಮವಾಗಿದೆ’ ಎಂದು ಅವರು ತಿಳಿಸಿದ್ದಾರೆ.</p><p>ಇದೇ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೇರಳ ಮುಖ್ಯಮಂತ್ರಿ ಪೂರಕ ಪಠ್ಯಪುಸ್ತಕ ಬಿಡುಗಡೆ ಮಾಡಿದ್ದರು. ಆ ವೇಳೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>