<p><strong>ತಿರುವನಂತಪುರ:</strong> ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ಈ ದೌರ್ಜನ್ಯದಿಂದ ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ನೆರವು ನೀಡುವ ಸಲುವಾಗಿ ವಿಧಾನಸಭೆ ವಿರೋಧಪಕ್ಷದ ನಾಯಕ ವಿ.ಡಿ.ಸತೀಶನ್ ಅವರು, ತಮ್ಮ ಕಚೇರಿಯಲ್ಲಿ ‘ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ‘ವನ್ನು ಆರಂಭಿಸಿದ್ದಾರೆ.</p>.<p>ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕವಾಗಿ ನೊಂದ ಮಹಿಳೆಯರು ಕೇಂದ್ರವನ್ನು ಸಂಪರ್ಕಿಸಲು ಶುಲ್ಕ ರಹಿತ ದೂರವಾಣಿ ಸಂಖ್ಯೆ ನೀಡಲಾಗಿದೆ. ಈ ದೂರವಾಣಿ ಸಂಖ್ಯೆ ಮೂಲಕ ಕೇಂದ್ರವನ್ನು ಸಂಪರ್ಕಿಸಿ, ಉಚಿತವಾಗಿ ಕಾನೂನು ನೆರವು ಪಡೆಯಬಹುದು.</p>.<p>ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಅಪರ್ಣಾ ರಾಜೀವ್ ಅವರು ಜಂಟಿಯಾಗಿ ‘ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ‘ವನ್ನು ಉದ್ಘಾಟಿಸಿದರು.</p>.<p>ಉದ್ಘಾಟನೆ ನಂತರ ಮಾತನಾಡಿದ ಸತೀಶನ್, ‘ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು ನೀಡುವ ಸಲುವಾಗಿ 87 ವಕೀಲರನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ರೀತಿಯ ಸಹಾಯ ಕೇಂದ್ರಗಳನ್ನು ತೆರೆಯುವಂತೆ ಅವರು ವಿವಿಧ ಸಂಘ–ಸಂಸ್ಥೆಗಳಿಗೆ ಒತ್ತಾಯಿಸಿದರು.</p>.<p><a href="https://www.prajavani.net/district/kalaburagi/psi-recruitment-2021-physical-test-24-year-old-pregnant-participated-and-passed-857533.html" itemprop="url">ಪಿಎಸ್ಐ ನೇಮಕಾತಿ: ದೈಹಿಕ ಸಾಮರ್ಥ್ಯ ಪರೀಕ್ಷೆ, ಎರಡೂವರೆ ತಿಂಗಳ ಗರ್ಭಿಣಿ ಯಶಸ್ವಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ರಾಜ್ಯದಲ್ಲಿ ವರದಕ್ಷಿಣೆ ಕಿರುಕುಳದ ಪ್ರಕರಣಗಳು ಹೆಚ್ಚುತ್ತಿರುವ ಆತಂಕದ ನಡುವೆ, ಈ ದೌರ್ಜನ್ಯದಿಂದ ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ನೆರವು ನೀಡುವ ಸಲುವಾಗಿ ವಿಧಾನಸಭೆ ವಿರೋಧಪಕ್ಷದ ನಾಯಕ ವಿ.ಡಿ.ಸತೀಶನ್ ಅವರು, ತಮ್ಮ ಕಚೇರಿಯಲ್ಲಿ ‘ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ‘ವನ್ನು ಆರಂಭಿಸಿದ್ದಾರೆ.</p>.<p>ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕವಾಗಿ ನೊಂದ ಮಹಿಳೆಯರು ಕೇಂದ್ರವನ್ನು ಸಂಪರ್ಕಿಸಲು ಶುಲ್ಕ ರಹಿತ ದೂರವಾಣಿ ಸಂಖ್ಯೆ ನೀಡಲಾಗಿದೆ. ಈ ದೂರವಾಣಿ ಸಂಖ್ಯೆ ಮೂಲಕ ಕೇಂದ್ರವನ್ನು ಸಂಪರ್ಕಿಸಿ, ಉಚಿತವಾಗಿ ಕಾನೂನು ನೆರವು ಪಡೆಯಬಹುದು.</p>.<p>ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಖ್ಯಾತ ಹಿನ್ನೆಲೆ ಗಾಯಕಿ ಅಪರ್ಣಾ ರಾಜೀವ್ ಅವರು ಜಂಟಿಯಾಗಿ ‘ವರದಕ್ಷಿಣೆ ವಿರೋಧಿ ಸಹಾಯ ಕೇಂದ್ರ‘ವನ್ನು ಉದ್ಘಾಟಿಸಿದರು.</p>.<p>ಉದ್ಘಾಟನೆ ನಂತರ ಮಾತನಾಡಿದ ಸತೀಶನ್, ‘ಸಂತ್ರಸ್ತ ಮಹಿಳೆಯರಿಗೆ ಕಾನೂನು ನೆರವು ನೀಡುವ ಸಲುವಾಗಿ 87 ವಕೀಲರನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಇದೇ ರೀತಿಯ ಸಹಾಯ ಕೇಂದ್ರಗಳನ್ನು ತೆರೆಯುವಂತೆ ಅವರು ವಿವಿಧ ಸಂಘ–ಸಂಸ್ಥೆಗಳಿಗೆ ಒತ್ತಾಯಿಸಿದರು.</p>.<p><a href="https://www.prajavani.net/district/kalaburagi/psi-recruitment-2021-physical-test-24-year-old-pregnant-participated-and-passed-857533.html" itemprop="url">ಪಿಎಸ್ಐ ನೇಮಕಾತಿ: ದೈಹಿಕ ಸಾಮರ್ಥ್ಯ ಪರೀಕ್ಷೆ, ಎರಡೂವರೆ ತಿಂಗಳ ಗರ್ಭಿಣಿ ಯಶಸ್ವಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>