<p><strong>ತಿರುವನಂತಪುರ:</strong> ಮಹಿಳಾ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಚದುರಿಸಲು ಪೊಲೀಸರು ಹಾರಿಸಿದ್ದ ಜಲಫಿರಂಗಿಯಿಂದಾಗಿ ಗಾಯಗೊಂಡು ಕಾಂಗ್ರೆಸ್ನ ರಾಜ್ಯಸಭಾ ಸಂಸದೆ ಜೆಬಿ ಮಾಥರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಇಲ್ಲಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಘಟನೆ ನಡೆದಿದೆ. ಖಾಲಿ ಪಾತ್ರೆ ಹಿಡಿದುಕೊಂಡ ಮಹಿಳಾ ಕಾರ್ಯಕರ್ತರು ವಿಧಾನಸೌಧದೆಡೆಗೆ ನಡೆದುಕೊಂಡು ಬರುತ್ತಿದ್ದರು.</p>.ಪ್ರಜಾಸತ್ತಾತ್ಮಕ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ಕೇಂದ್ರ: ಕೇರಳ ಸಿ.ಎಂ .<p>ಮಹಿಳಾ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಜೆಬಿ ಮಾಥರ್ ಅವರು, ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರು.</p><p>ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಿಧಾನಸೌಧಕ್ಕೆ ಇರುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಭೇದಿಸಿ ಮುನ್ನುಗ್ಗಲು ಯತ್ನಿಸಿದರು. ಕೆಲ ಪ್ರತಿಭಟನಾಕರರು ಪಾತ್ರೆಗಳನ್ನು ಎಸೆಯಲು ಪ್ರಯತ್ನಿಸಿದ್ದರಿಂದ, ಪೊಲೀಸರು ಗುಂಪನ್ನು ಚದುರಿಸಲು ಜಲ ಫಿರಂಗಿ ಪ್ರಯೋಗಿಸಿದರು.</p>.ಪ್ರಧಾನಿ ಮೋದಿ ಅವಹೇಳನ: ಕೇರಳ ಹೈಕೋರ್ಟ್ನ ಇಬ್ಬರು ಅಧಿಕಾರಿಗಳು ಅಮಾನತು .<p>ಜಲ ಫಿರಂಗಿ ಪ್ರಯೋಗ ನಿಲ್ಲಿಸಿದ ಕೂಡಲೇ ಪ್ರತಿಭಟನೆ ಮುಂದುವರಿಯಿತು. ಮತ್ತೆ ಪೊಲೀಸರು ಜಲ ಫಿರಂಗಿ ಪ್ರಯೋಗಿಸಿದರು. ಈ ವೇಳೆ ಮಾಥರ್ ಅವರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದರು. ಶೀಘ್ರವೇ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.</p><p>ಎರಡು ಗಂಟೆಗಳ ಬಳಿಕ ಅವರಿಗೆ ಪ್ರಜ್ಞೆ ಮರಳಿ ಬಂತು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಮಹಿಳಾ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯನ್ನು ಚದುರಿಸಲು ಪೊಲೀಸರು ಹಾರಿಸಿದ್ದ ಜಲಫಿರಂಗಿಯಿಂದಾಗಿ ಗಾಯಗೊಂಡು ಕಾಂಗ್ರೆಸ್ನ ರಾಜ್ಯಸಭಾ ಸಂಸದೆ ಜೆಬಿ ಮಾಥರ್ ಅವರು ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಇಲ್ಲಿ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಘಟನೆ ನಡೆದಿದೆ. ಖಾಲಿ ಪಾತ್ರೆ ಹಿಡಿದುಕೊಂಡ ಮಹಿಳಾ ಕಾರ್ಯಕರ್ತರು ವಿಧಾನಸೌಧದೆಡೆಗೆ ನಡೆದುಕೊಂಡು ಬರುತ್ತಿದ್ದರು.</p>.ಪ್ರಜಾಸತ್ತಾತ್ಮಕ ವ್ಯವಸ್ಥೆ ದುರ್ಬಲಗೊಳಿಸುತ್ತಿರುವ ಕೇಂದ್ರ: ಕೇರಳ ಸಿ.ಎಂ .<p>ಮಹಿಳಾ ಕಾಂಗ್ರೆಸ್ನ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಜೆಬಿ ಮಾಥರ್ ಅವರು, ಪ್ರತಿಭಟನಾ ಮೆರವಣಿಗೆಯನ್ನು ಮುನ್ನಡೆಸುತ್ತಿದ್ದರು.</p><p>ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ವಿಧಾನಸೌಧಕ್ಕೆ ಇರುವ ರಸ್ತೆಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಭೇದಿಸಿ ಮುನ್ನುಗ್ಗಲು ಯತ್ನಿಸಿದರು. ಕೆಲ ಪ್ರತಿಭಟನಾಕರರು ಪಾತ್ರೆಗಳನ್ನು ಎಸೆಯಲು ಪ್ರಯತ್ನಿಸಿದ್ದರಿಂದ, ಪೊಲೀಸರು ಗುಂಪನ್ನು ಚದುರಿಸಲು ಜಲ ಫಿರಂಗಿ ಪ್ರಯೋಗಿಸಿದರು.</p>.ಪ್ರಧಾನಿ ಮೋದಿ ಅವಹೇಳನ: ಕೇರಳ ಹೈಕೋರ್ಟ್ನ ಇಬ್ಬರು ಅಧಿಕಾರಿಗಳು ಅಮಾನತು .<p>ಜಲ ಫಿರಂಗಿ ಪ್ರಯೋಗ ನಿಲ್ಲಿಸಿದ ಕೂಡಲೇ ಪ್ರತಿಭಟನೆ ಮುಂದುವರಿಯಿತು. ಮತ್ತೆ ಪೊಲೀಸರು ಜಲ ಫಿರಂಗಿ ಪ್ರಯೋಗಿಸಿದರು. ಈ ವೇಳೆ ಮಾಥರ್ ಅವರು ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದರು. ಶೀಘ್ರವೇ ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.</p><p>ಎರಡು ಗಂಟೆಗಳ ಬಳಿಕ ಅವರಿಗೆ ಪ್ರಜ್ಞೆ ಮರಳಿ ಬಂತು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>