<p><strong>ತಿರುವನಂತಪುರಂ</strong>: ಕೇರಳದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣ ನದಿ ನೀರಿನ ಮಟ್ಟ ಏರಿಕೆಯಾಗಿ ತಗ್ಗು ಪ್ರದೇಶದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಭಾರತೀಯ ಹವಮಾನ ಇಲಾಖೆ ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ’ ಘೋಷಿಸಿದೆ. </p>.<p>ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು, ಮತ್ತು ಕಾಸರಗೋಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ’ ಘೋಷಿಸಲಾಗಿದ್ದು. ಇನ್ನುಳಿದ ಐದು ಜಿಲ್ಲೆಗಳಿಗೆ ’ಯೆಲ್ಲೋ ಅಲರ್ಟ’ ಘೋಷಿಸಿದೆ.</p>.<p class="title">ರಾಜ್ಯದಾದ್ಯಂತ ಸಾಧಾರಣವಾಗಿ ಮಳೆ ಆಗಲಿದೆ ಮತ್ತು ಗಂಟೆಗೆ 40 ಕಿ.ಮೀ.ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.</p>.<p class="title">ಜಿಲ್ಲೆಯಲ್ಲಿನ ಎಲ್ಲಾ ಅಣೆಕಟ್ಟುಗಳ ಗೇಟ್ಗಳನ್ನು ತೆರೆಯಲಾಗಿದೆ ಎಂದು ಪಾಲಕ್ಕಾಡ್ ಜಿಲ್ಲಾಡಳಿತ ತಿಳಿಸಿದೆ.</p>.<p class="title">ನೀರಾವರಿ ವಿನ್ಯಾಸ ಮತ್ತು ಸಂಶೋಧನಾ ಮಂಡಳಿಯು ಪತ್ತನಂತಿಟ್ಟ ಜಿಲ್ಲೆಯ ಮಣಿಮಾಲ ಮತ್ತು ಕಾಸರಗೋಡು ಜಿಲ್ಲೆ ಯ ಮೊಗ್ರಾಲ್ ನದಿಗಳ ಮಟ್ಟ ತೀವ್ರವಾಗುತ್ತಿರುವ ಕಾರಣ ಅಪಾಯದ ಎಚ್ಚರಿಕೆ ನೀಡಿದೆ.</p>.<p class="title">ನದಿ ಸಮೀಪದಲ್ಲಿ ವಾಸವಿರುವ ಜನರಿಗೆ ಸುರಕ್ಷಿತವಾಗಿರಲು ಜಿಲ್ಲಾ ಆಡಳಿತವು ಸೂಚಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧವಿರಬೇಕು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಕೇರಳದ ಹಲವು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುತ್ತಿರುವ ಕಾರಣ ನದಿ ನೀರಿನ ಮಟ್ಟ ಏರಿಕೆಯಾಗಿ ತಗ್ಗು ಪ್ರದೇಶದಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಭಾರತೀಯ ಹವಮಾನ ಇಲಾಖೆ ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ’ ಘೋಷಿಸಿದೆ. </p>.<p>ಎರ್ನಾಕುಲಂ, ಇಡುಕ್ಕಿ, ತ್ರಿಶ್ಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು, ಮತ್ತು ಕಾಸರಗೋಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ’ ಘೋಷಿಸಲಾಗಿದ್ದು. ಇನ್ನುಳಿದ ಐದು ಜಿಲ್ಲೆಗಳಿಗೆ ’ಯೆಲ್ಲೋ ಅಲರ್ಟ’ ಘೋಷಿಸಿದೆ.</p>.<p class="title">ರಾಜ್ಯದಾದ್ಯಂತ ಸಾಧಾರಣವಾಗಿ ಮಳೆ ಆಗಲಿದೆ ಮತ್ತು ಗಂಟೆಗೆ 40 ಕಿ.ಮೀ.ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.</p>.<p class="title">ಜಿಲ್ಲೆಯಲ್ಲಿನ ಎಲ್ಲಾ ಅಣೆಕಟ್ಟುಗಳ ಗೇಟ್ಗಳನ್ನು ತೆರೆಯಲಾಗಿದೆ ಎಂದು ಪಾಲಕ್ಕಾಡ್ ಜಿಲ್ಲಾಡಳಿತ ತಿಳಿಸಿದೆ.</p>.<p class="title">ನೀರಾವರಿ ವಿನ್ಯಾಸ ಮತ್ತು ಸಂಶೋಧನಾ ಮಂಡಳಿಯು ಪತ್ತನಂತಿಟ್ಟ ಜಿಲ್ಲೆಯ ಮಣಿಮಾಲ ಮತ್ತು ಕಾಸರಗೋಡು ಜಿಲ್ಲೆ ಯ ಮೊಗ್ರಾಲ್ ನದಿಗಳ ಮಟ್ಟ ತೀವ್ರವಾಗುತ್ತಿರುವ ಕಾರಣ ಅಪಾಯದ ಎಚ್ಚರಿಕೆ ನೀಡಿದೆ.</p>.<p class="title">ನದಿ ಸಮೀಪದಲ್ಲಿ ವಾಸವಿರುವ ಜನರಿಗೆ ಸುರಕ್ಷಿತವಾಗಿರಲು ಜಿಲ್ಲಾ ಆಡಳಿತವು ಸೂಚಿಸಿದ್ದು, ಪರಿಸ್ಥಿತಿ ಬಿಗಡಾಯಿಸಿದರೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸಿದ್ಧವಿರಬೇಕು ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>