<p><strong>ಮಲಪ್ಪುರ</strong>: ತವನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯು ಬೃಹತ್ ಅಂತರದಿಂದ ಗೆಲುವು ಸಾಧಿಸಿದರೆ, ಪಕ್ಷದ ಸ್ಥಳೀಯ ಕಾರ್ಯಕರ್ತರನ್ನು ಗಲ್ಫ್ ದೇಶಗಳಿಗೆ ಉಚಿತವಾಗಿ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಐಯುಎಂಎಲ್ನ ಹಿರಿಯ ಮುಖಂಡರು ಘೋಷಿಸಿರುವುದು, ಮಲಪ್ಪುರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ನ ಪ್ರಮುಖ ಮಿತ್ರಪಕ್ಷವಾಗಿದೆ.</p>.<p>ತವನೂರಿನಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಐಯುಎಂಎಲ್ ರಾಜ್ಯ ಉಪಾಧ್ಯಕ್ಷ ಸಿ.ಪಿ. ಬಾವಾ ಹಾಜಿ ಅವರು ಗಲ್ಫ್ ದೇಶಗಳ ಉಚಿತ ಪ್ರವಾಸವನ್ನು ಘೋಷಿಸಿದ್ದಾರೆ.</p>.<p>ಕ್ಷೇತ್ರದ ಯುಡಿಎಫ್ ಅಭ್ಯರ್ಥಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಜಾಯ್ ಅವರಿಗೆ ಹೆಚ್ಚಿನ ಮುನ್ನಡೆ ಖಚಿತಪಡಿಸಿಕೊಳ್ಳಲು ನೆರವಾಗುವ ಪಕ್ಷದ ಮಂಡಲ ಹಾಗೂ ಪಂಚಾಯಿತಿ ಸಮಿತಿ ಪದಾಧಿಕಾರಿಗಳಿಗೆ 15 ದಿನ ಗಲ್ಫ್ ದೇಶಗಳ ಪ್ರವಾಸಕ್ಕೆ ಕರೆದೊಯ್ಯುವ ಭರವಸೆಯನ್ನು ನೀಡಿದರು.</p>.<p>‘ಉಚಿತ ಪ್ರವಾಸ ಘೋಷಣೆಯ ವಿಷಯವು ನಮ್ಮ ಗಮನಕ್ಕೆ ಬಂದಿದೆ. ಹೆಚ್ಚಿನ ವಿವರ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಮಾಹಿತಿ ದೊರೆತ ನಂತರ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿನಯ್ ಗೋಯಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲಪ್ಪುರ</strong>: ತವನೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯು ಬೃಹತ್ ಅಂತರದಿಂದ ಗೆಲುವು ಸಾಧಿಸಿದರೆ, ಪಕ್ಷದ ಸ್ಥಳೀಯ ಕಾರ್ಯಕರ್ತರನ್ನು ಗಲ್ಫ್ ದೇಶಗಳಿಗೆ ಉಚಿತವಾಗಿ ಪ್ರವಾಸಕ್ಕೆ ಕರೆದೊಯ್ಯಲಾಗುವುದು ಎಂದು ಐಯುಎಂಎಲ್ನ ಹಿರಿಯ ಮುಖಂಡರು ಘೋಷಿಸಿರುವುದು, ಮಲಪ್ಪುರ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದೆ.</p>.<p>ಭಾರತೀಯ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್), ವಿರೋಧ ಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್ನ ಪ್ರಮುಖ ಮಿತ್ರಪಕ್ಷವಾಗಿದೆ.</p>.<p>ತವನೂರಿನಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಐಯುಎಂಎಲ್ ರಾಜ್ಯ ಉಪಾಧ್ಯಕ್ಷ ಸಿ.ಪಿ. ಬಾವಾ ಹಾಜಿ ಅವರು ಗಲ್ಫ್ ದೇಶಗಳ ಉಚಿತ ಪ್ರವಾಸವನ್ನು ಘೋಷಿಸಿದ್ದಾರೆ.</p>.<p>ಕ್ಷೇತ್ರದ ಯುಡಿಎಫ್ ಅಭ್ಯರ್ಥಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿ.ಎಸ್. ಜಾಯ್ ಅವರಿಗೆ ಹೆಚ್ಚಿನ ಮುನ್ನಡೆ ಖಚಿತಪಡಿಸಿಕೊಳ್ಳಲು ನೆರವಾಗುವ ಪಕ್ಷದ ಮಂಡಲ ಹಾಗೂ ಪಂಚಾಯಿತಿ ಸಮಿತಿ ಪದಾಧಿಕಾರಿಗಳಿಗೆ 15 ದಿನ ಗಲ್ಫ್ ದೇಶಗಳ ಪ್ರವಾಸಕ್ಕೆ ಕರೆದೊಯ್ಯುವ ಭರವಸೆಯನ್ನು ನೀಡಿದರು.</p>.<p>‘ಉಚಿತ ಪ್ರವಾಸ ಘೋಷಣೆಯ ವಿಷಯವು ನಮ್ಮ ಗಮನಕ್ಕೆ ಬಂದಿದೆ. ಹೆಚ್ಚಿನ ವಿವರ ಸಂಗ್ರಹಿಸಲಾಗುತ್ತಿದೆ. ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಮಾಹಿತಿ ದೊರೆತ ನಂತರ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ನಿರ್ಧರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿನಯ್ ಗೋಯಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>