<p><strong>ತಿರುವನಂತಪುರ:</strong> ಹಿರಿಯ ಶಾಸಕ ಜಿ. ಸುಧಾಕರನ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲು ಸಂಪುಟ ಶಿಫಾರಸು ಮಾಡಿದೆ. ಶಾಸಕರ ಪ್ರಮಾಣವಚನ ಮತ್ತು ಸ್ಪೀಕರ್ ಆಯ್ಕೆಗಾಗಿ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆ ನಿರ್ಧರಿಸಿತು ಎಂದು ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿಳಿಸಿದರು. </p>.<p>ಇದೇ 21ರಂದು ಶಾಸಕರ ಪ್ರಮಾಣವಚನ ಮತ್ತು ಇದೇ 22ರಂದು ಸ್ಪೀಕರ್ ಆಯ್ಕೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. </p>.<p><strong>ಮರು ತನಿಖೆಗೆ ಎಸ್ಐಟಿ ರಚನೆ:</strong></p>.<p>ಆಲಪ್ಪುಳದಲ್ಲಿ 2023ರಲ್ಲಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸಂಪುಟ ಅನುಮೋದನೆ ನೀಡಿದೆ. </p>.<p>ಈ ಪ್ರಕರಣದ ಮರು ತನಿಖೆಗೆ ಆಲಪ್ಪುಳ ಜಿಲ್ಲಾ ನ್ಯಾಯಾಲಯ 2024ರ ನವೆಂಬರ್ 8ರಂದು ಆದೇಶಿಸಿತ್ತು. ಆದರೆ ಹಿಂದಿನ ಸರ್ಕಾರ ಈ ಕುರಿತು ನಿರ್ಲಕ್ಷ್ಯ ತೋರಿತ್ತು ಎಂದು ಸಿ.ಎಂ ದೂರಿದರು. </p>.<p>ರಾಜಕೀಯ ದ್ವೇಷದ ಆರೋಪಗಳನ್ನು ತಿರಸ್ಕರಿಸಿದ ಅವರು, ‘ಸರ್ಕಾರ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸುತ್ತಿದೆ. ಆದರೆ, ಹಿಂದೆ ನಡೆದದ್ದನ್ನು ನಾವು ಮರೆತಿಲ್ಲ’ ಎಂದು ಸೂಚ್ಯವಾಗಿ ಹೇಳಿದರು. ಸರ್ಕಾರದ ಖಜಾನೆಯ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲಾಗುವುದು ಎಂದೂ ಅವರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಹಿರಿಯ ಶಾಸಕ ಜಿ. ಸುಧಾಕರನ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲು ಸಂಪುಟ ಶಿಫಾರಸು ಮಾಡಿದೆ. ಶಾಸಕರ ಪ್ರಮಾಣವಚನ ಮತ್ತು ಸ್ಪೀಕರ್ ಆಯ್ಕೆಗಾಗಿ ವಿಧಾನಸಭೆ ಅಧಿವೇಶನ ಕರೆಯುವಂತೆ ರಾಜ್ಯಪಾಲರನ್ನು ಕೋರಲು ಸಂಪುಟ ಸಭೆ ನಿರ್ಧರಿಸಿತು ಎಂದು ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿಳಿಸಿದರು. </p>.<p>ಇದೇ 21ರಂದು ಶಾಸಕರ ಪ್ರಮಾಣವಚನ ಮತ್ತು ಇದೇ 22ರಂದು ಸ್ಪೀಕರ್ ಆಯ್ಕೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. </p>.<p><strong>ಮರು ತನಿಖೆಗೆ ಎಸ್ಐಟಿ ರಚನೆ:</strong></p>.<p>ಆಲಪ್ಪುಳದಲ್ಲಿ 2023ರಲ್ಲಿ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ನಡೆದ ಪ್ರತಿಭಟನೆ ವೇಳೆ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು. ಈ ಪ್ರಕರಣದ ಮರು ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲು ಸಂಪುಟ ಅನುಮೋದನೆ ನೀಡಿದೆ. </p>.<p>ಈ ಪ್ರಕರಣದ ಮರು ತನಿಖೆಗೆ ಆಲಪ್ಪುಳ ಜಿಲ್ಲಾ ನ್ಯಾಯಾಲಯ 2024ರ ನವೆಂಬರ್ 8ರಂದು ಆದೇಶಿಸಿತ್ತು. ಆದರೆ ಹಿಂದಿನ ಸರ್ಕಾರ ಈ ಕುರಿತು ನಿರ್ಲಕ್ಷ್ಯ ತೋರಿತ್ತು ಎಂದು ಸಿ.ಎಂ ದೂರಿದರು. </p>.<p>ರಾಜಕೀಯ ದ್ವೇಷದ ಆರೋಪಗಳನ್ನು ತಿರಸ್ಕರಿಸಿದ ಅವರು, ‘ಸರ್ಕಾರ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸುತ್ತಿದೆ. ಆದರೆ, ಹಿಂದೆ ನಡೆದದ್ದನ್ನು ನಾವು ಮರೆತಿಲ್ಲ’ ಎಂದು ಸೂಚ್ಯವಾಗಿ ಹೇಳಿದರು. ಸರ್ಕಾರದ ಖಜಾನೆಯ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಲಾಗುವುದು ಎಂದೂ ಅವರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>