<p><strong>ತಿರುವನಂತಪುರ:</strong> ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಬುಧವಾರ ‘ಆರೆಂಜ್ ಅಲರ್ಟ್’ ಘೋಷಿಸಿದೆ.</p><p>ಅಲಪ್ಪುಳ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿತ್ತು.</p><p>ಗಾಳಿಯ ಪ್ರಮಾಣ ಹೆಚ್ಚಿರುವ ಕಾರಣ, ಕೇರಳ–ಕರ್ನಾಟಕ– ಲಕ್ಷದ್ವೀಪ ಕರಾವಳಿಯಲ್ಲಿ ಬುಧವಾರ ಮತ್ತು ಗುರುವಾರ ಮೀನುಗಾರಿಕಾ ಚಟುವಟಿಕೆಯನ್ನು ನಡೆಸದಂತೆ ಮೀನುಗಾರರಿಕೆ ಐಎಂಡಿ ಎಚ್ಚರಿಕೆ ನೀಡಿದೆ. </p><p>ರಾಜ್ಯದಲ್ಲಿ ಕೆಲವು ವಾರಗಳಿಂದ ಭಾರಿ ಮಳೆಯಾಗುತ್ತಿರುವ ಪರಿಣಾಮ, ಕೆಲವು ಪ್ರದೇಶಗಳು ಮತ್ತು ಮನೆಗಳು ಜಲಾವೃತಗೊಂಡಿದ್ದು ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. </p><p>ಗರಿಷ್ಠ ತಾಪಮಾನ ಕುಸಿತ (ಚಂಡೀಗಢ ವರದಿ): ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹರಿಯಾಣ ಮತ್ತು ಪಂಜಾಬ್ನಲ್ಲಿ ಗರಿಷ್ಠ ತಾಪಮಾನವು ತೀವ್ರವಾಗಿ ಕುಸಿದಿದೆ ಎಂದು ಐಎಂಡಿ ಕಚೇರಿ ಬುಧವಾರ ತಿಳಿಸಿದೆ.</p><p>ಚಂಡೀಗಢದಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯ ಮಿತಿಗಿಂತ ಐದು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.</p><p>ಹರಿಯಾಣ ಮತ್ತು ಪಂಜಾಬ್ನಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನವು 31ರಿಂದ 34 ಡಿಗ್ರಿ ಸೆಲ್ಸಿಯಸ್ವರೆಗೆ ಇದ್ದು, ಇದು ಹಿಂದಿನ ವಾರಕ್ಕೆ ಹೋಲಿಸಿದರೆ ವ್ಯತಿರಿಕ್ತವಾಗಿದೆ. ಕಳೆದ ವಾರ ಕೆಲವು ಪ್ರದೇಶಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿತ್ತು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಬುಧವಾರ ‘ಆರೆಂಜ್ ಅಲರ್ಟ್’ ಘೋಷಿಸಿದೆ.</p><p>ಅಲಪ್ಪುಳ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿತ್ತು.</p><p>ಗಾಳಿಯ ಪ್ರಮಾಣ ಹೆಚ್ಚಿರುವ ಕಾರಣ, ಕೇರಳ–ಕರ್ನಾಟಕ– ಲಕ್ಷದ್ವೀಪ ಕರಾವಳಿಯಲ್ಲಿ ಬುಧವಾರ ಮತ್ತು ಗುರುವಾರ ಮೀನುಗಾರಿಕಾ ಚಟುವಟಿಕೆಯನ್ನು ನಡೆಸದಂತೆ ಮೀನುಗಾರರಿಕೆ ಐಎಂಡಿ ಎಚ್ಚರಿಕೆ ನೀಡಿದೆ. </p><p>ರಾಜ್ಯದಲ್ಲಿ ಕೆಲವು ವಾರಗಳಿಂದ ಭಾರಿ ಮಳೆಯಾಗುತ್ತಿರುವ ಪರಿಣಾಮ, ಕೆಲವು ಪ್ರದೇಶಗಳು ಮತ್ತು ಮನೆಗಳು ಜಲಾವೃತಗೊಂಡಿದ್ದು ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. </p><p>ಗರಿಷ್ಠ ತಾಪಮಾನ ಕುಸಿತ (ಚಂಡೀಗಢ ವರದಿ): ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹರಿಯಾಣ ಮತ್ತು ಪಂಜಾಬ್ನಲ್ಲಿ ಗರಿಷ್ಠ ತಾಪಮಾನವು ತೀವ್ರವಾಗಿ ಕುಸಿದಿದೆ ಎಂದು ಐಎಂಡಿ ಕಚೇರಿ ಬುಧವಾರ ತಿಳಿಸಿದೆ.</p><p>ಚಂಡೀಗಢದಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯ ಮಿತಿಗಿಂತ ಐದು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.</p><p>ಹರಿಯಾಣ ಮತ್ತು ಪಂಜಾಬ್ನಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನವು 31ರಿಂದ 34 ಡಿಗ್ರಿ ಸೆಲ್ಸಿಯಸ್ವರೆಗೆ ಇದ್ದು, ಇದು ಹಿಂದಿನ ವಾರಕ್ಕೆ ಹೋಲಿಸಿದರೆ ವ್ಯತಿರಿಕ್ತವಾಗಿದೆ. ಕಳೆದ ವಾರ ಕೆಲವು ಪ್ರದೇಶಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿತ್ತು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>