<p><strong>ಕಣ್ಣೂರು:</strong> ಭಾರಿ ಸಂಚಲನ ಮೂಡಿಸಿದ್ದ 2011ರ ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿ ಗೊವಿಂದಚಾಮಿ ಭಾರಿ ಭದ್ರತೆ ಇರುವ ಕಣ್ಣೂರು ಕೇಂದ್ರ ಜೈಲಿನಿಂದ ಶುಕ್ರವಾರ ಬೆಳಿಗ್ಗೆ ತಪ್ಪಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.</p>.ಪತ್ರಕರ್ತೆ ಸೌಮ್ಯ ಕೊಲೆ ಪ್ರಕರಣ: ನ.25ಕ್ಕೆ ಶಿಕ್ಷೆ ತೀರ್ಪು ಕಾಯ್ದಿರಿಸಿದ ಕೋರ್ಟ್.<p>ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ.</p><p>ವರದಿಗಳ ಪ್ರಕಾರ ಆತ ಕಟ್ಟಡದ ಸಮೀಪ ಇದ್ದ ಬಾವಿಯಲ್ಲಿ ಅಡಗಿ ಕುಳಿತಿದ್ದ.</p><p>2011ರ ಫೆಬ್ರುವರಿ 1 ರಂದು ಎರ್ನಾಕುಳಂನಿಂದ ಶೊರ್ನೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ, ಶೊರ್ನೂರು ಸಮೀಪದ ಮಂಜಕ್ಕಾಡ್ ನಿವಾಸಿ 23 ವರ್ಷದ ಸೌಮ್ಯ ಮೇಲೆ ಗೋವಿಂದಚಾಮಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.</p>.ಅತ್ಯಾಚಾರ ಪ್ರಕರಣ: ಎನ್ಎಸ್ಯುಐ ಉಚ್ಚಾಟಿತ ಅಧ್ಯಕ್ಷನ ಸಹಚರ ಸೆರೆ .<p>ಪ್ರಕರಣದಲ್ಲಿ ಗೋವಿಂದಚಾಮಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.</p><p>ದೇಶದಾದ್ಯಂತ ಸುದ್ದಿ ಮಾಡಿದ್ದ ಈ ಪ್ರಕರಣ, ಸಾರ್ವಜನಿಕ ಸಾರಿಗೆಗಳಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿತ್ತು.</p> .ಉಡುಪಿ | ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಣ್ಣೂರು:</strong> ಭಾರಿ ಸಂಚಲನ ಮೂಡಿಸಿದ್ದ 2011ರ ಕೇರಳದ ಸೌಮ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ದೋಷಿ ಗೊವಿಂದಚಾಮಿ ಭಾರಿ ಭದ್ರತೆ ಇರುವ ಕಣ್ಣೂರು ಕೇಂದ್ರ ಜೈಲಿನಿಂದ ಶುಕ್ರವಾರ ಬೆಳಿಗ್ಗೆ ತಪ್ಪಿಸಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.</p>.ಪತ್ರಕರ್ತೆ ಸೌಮ್ಯ ಕೊಲೆ ಪ್ರಕರಣ: ನ.25ಕ್ಕೆ ಶಿಕ್ಷೆ ತೀರ್ಪು ಕಾಯ್ದಿರಿಸಿದ ಕೋರ್ಟ್.<p>ಗೋವಿಂದಚಾಮಿಗೆ ಎಡಗೈ ತುಂಡಾಗಿದ್ದು, ಕಣ್ಣೂರು ನಗರ ವ್ಯಾಪ್ತಿಯ ಥಲಾಪ್ನಲ್ಲಿರುವ ಪಾಳುಬಿದ್ದ ಕಟ್ಟಡದ ಸಮೀಪ ಆತನನ್ನು ಸೆರೆಹಿಡಿಯಲಾಗಿದೆ.</p><p>ವರದಿಗಳ ಪ್ರಕಾರ ಆತ ಕಟ್ಟಡದ ಸಮೀಪ ಇದ್ದ ಬಾವಿಯಲ್ಲಿ ಅಡಗಿ ಕುಳಿತಿದ್ದ.</p><p>2011ರ ಫೆಬ್ರುವರಿ 1 ರಂದು ಎರ್ನಾಕುಳಂನಿಂದ ಶೊರ್ನೂರಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ, ಶೊರ್ನೂರು ಸಮೀಪದ ಮಂಜಕ್ಕಾಡ್ ನಿವಾಸಿ 23 ವರ್ಷದ ಸೌಮ್ಯ ಮೇಲೆ ಗೋವಿಂದಚಾಮಿ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ.</p>.ಅತ್ಯಾಚಾರ ಪ್ರಕರಣ: ಎನ್ಎಸ್ಯುಐ ಉಚ್ಚಾಟಿತ ಅಧ್ಯಕ್ಷನ ಸಹಚರ ಸೆರೆ .<p>ಪ್ರಕರಣದಲ್ಲಿ ಗೋವಿಂದಚಾಮಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.</p><p>ದೇಶದಾದ್ಯಂತ ಸುದ್ದಿ ಮಾಡಿದ್ದ ಈ ಪ್ರಕರಣ, ಸಾರ್ವಜನಿಕ ಸಾರಿಗೆಗಳಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಪ್ರಶ್ನೆ ಏಳುವಂತೆ ಮಾಡಿತ್ತು.</p> .ಉಡುಪಿ | ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>