<p><strong>ತಿರುವನಂತಪುರ:</strong> ಕೇರಳದಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಹೆಚ್ಚುವರಿ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಇಂದು (ಬುಧವಾರ) ತಿಳಿಸಿದ್ದಾರೆ. </p><p>ಪುಸಕ್ತಗಳು, ಪತ್ರಿಕೆಗಳನ್ನು ಓದುವುದು ಸೇರಿದಂತೆ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗಾಗಿ ತರಗತಿಯಲ್ಲಿ ಪಾಠದ ಅವಧಿಯನ್ನು ಮೀಸಲಿಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಓದುವಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಲು ಕೈಪಿಡಿಯನ್ನು ಸಿದ್ಧಪಡಿಸಲಾಗುವುದು. ಅಧ್ಯಾಪಕರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಫೇಸ್ಬುಕ್ ಪೋಸ್ಟ್ನಲ್ಲಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. </p><p>ವಾರ್ಷಿಕ ಶಾಲಾ ಕಲಾ ಉತ್ಸವವಾದ 'ಕಲೋತ್ಸವ'ದಲ್ಲೂ ಓದುವುದಕ್ಕೆ ಸಂಬಂಧಿಸಿದ ವಿಭಾಗವನ್ನು ಸ್ಪರ್ಧೆಯಾಗಿ ಏರ್ಪಡಿಸುವುದಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. </p>.ಆ.15ಕ್ಕೆ ಒಟಿಟಿಯಲ್ಲಿ ‘ಜಾನಕಿ vs ಸ್ಟೇಟ್ ಆಫ್ ಕೇರಳ’ .ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರ ಕಲ್ಪಿಸದಿದ್ದರೆ ಶುಲ್ಕ ಬೇಡ: ಕೇರಳ HC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದಲ್ಲಿ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳಿಗೆ ಹೆಚ್ಚುವರಿ ಅಂಕಗಳನ್ನು ನೀಡಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ಇಂದು (ಬುಧವಾರ) ತಿಳಿಸಿದ್ದಾರೆ. </p><p>ಪುಸಕ್ತಗಳು, ಪತ್ರಿಕೆಗಳನ್ನು ಓದುವುದು ಸೇರಿದಂತೆ ಅದಕ್ಕೆ ಸಂಬಂಧಿತ ಚಟುವಟಿಕೆಗಳಿಗಾಗಿ ತರಗತಿಯಲ್ಲಿ ಪಾಠದ ಅವಧಿಯನ್ನು ಮೀಸಲಿಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಓದುವಿಕೆಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಮಾರ್ಗದರ್ಶನ ನೀಡಲು ಕೈಪಿಡಿಯನ್ನು ಸಿದ್ಧಪಡಿಸಲಾಗುವುದು. ಅಧ್ಯಾಪಕರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಫೇಸ್ಬುಕ್ ಪೋಸ್ಟ್ನಲ್ಲಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. </p><p>ವಾರ್ಷಿಕ ಶಾಲಾ ಕಲಾ ಉತ್ಸವವಾದ 'ಕಲೋತ್ಸವ'ದಲ್ಲೂ ಓದುವುದಕ್ಕೆ ಸಂಬಂಧಿಸಿದ ವಿಭಾಗವನ್ನು ಸ್ಪರ್ಧೆಯಾಗಿ ಏರ್ಪಡಿಸುವುದಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. </p>.ಆ.15ಕ್ಕೆ ಒಟಿಟಿಯಲ್ಲಿ ‘ಜಾನಕಿ vs ಸ್ಟೇಟ್ ಆಫ್ ಕೇರಳ’ .ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಸಂಚಾರ ಕಲ್ಪಿಸದಿದ್ದರೆ ಶುಲ್ಕ ಬೇಡ: ಕೇರಳ HC.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>