<p><strong>ನವದೆಹಲಿ:</strong> ಕೇರಳದ ಹೆಸರನ್ನು 'ಕೇರಳಂ' ಎಂದು ಬದಲಿಸುವ ನಿರ್ಣಯಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆದರೆ ಪಶ್ಚಿಮ ಬಂಗಾಳದ ಅಧಿಕೃತ ಹೆಸರನ್ನು 'ಬಂಗಾಳ' ಎಂದು ಬದಲಿಸುವಂತೆ ಕೇಂದ್ರವನ್ನು ಎಷ್ಟೇ ಮನವಿ ಮಾಡಿದರೂ ಪರಿಗಣಿಸುತ್ತಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. </p><p>ಪಶ್ಚಿಮ ಬಂಗಾಳವನ್ನು ಮರು ನಾಮಕರಣ ಮಾಡುವ ನಿರ್ಣಯವನ್ನು ಕೇಂದ್ರ ಸರ್ಕಾರವು ಎಂದಿಗೂ ಪರಿಗಣಿಸಿಲ್ಲ ಎಂದು ಅವರು ದೂರಿದ್ದಾರೆ. </p><p>ಕೇರಳದ ಹೆಸರನ್ನು ಅಧಿಕೃತವಾಗಿ 'ಕೇರಳಂ' ಎಂದು ಬದಲಾಯಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯು 2023ರ ಆಗಸ್ಟ್ 9ರಂದು ಅಂಗೀಕರಿಸಿತ್ತು. ಅದಕ್ಕೀಗ ಕೇಂದ್ರದ ಅನುಮೋದನೆ ಸಿಕ್ಕಿದೆ. </p><p>'ಬಿಜೆಪಿ ಹಾಗೂ ಸಿಪಿಐ(ಎಂ) ನಡುವಣ ಮೈತ್ರಿಯಿಂದಾಗಿ ಕೇರಳಕ್ಕೆ ಹೊಸ ಹೆಸರು ಪಡೆಯಲು ಸಹಾಯವಾಗಿದೆ' ಎಂದು ಮಮತಾ ಆರೋಪಿಸಿದ್ದಾರೆ. </p><p>'ಪಶ್ಚಿಮ ಬಂಗಾಳವನ್ನು ಯಾವತ್ತೂ ಕಡೆಗಣಿಸಲಾಗುತ್ತಿದೆ. ಆದರೆ ಮುಂದೊಂದು ದಿನ ಬಿಜೆಪಿ ಅಧಿಕಾರಿದಲ್ಲಿರುವುದಿಲ್ಲ. ಆಗ ನಾವು ಹೆಸರನ್ನು ಬದಲಾಯಿಸಿಕೊಳ್ಳುತ್ತೇವೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಕೇರಳಂ ಎಂಬ ಹೊಸ ಹೆಸರು ಪಡೆದಿರುವುದಕ್ಕೆ ಕೇರಳದ ಜನರಿಗೆ ಮಮತಾ ಬ್ಯಾನರ್ಜಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. </p><p>ಪಶ್ಚಿಮ ಬಂಗಾಳದ ಹೆಸರನ್ನು ಅಧಿಕೃತವಾಗಿ ಬಂಗಾಳ ಎಂದು ಬದಲಾಯಿಸುವಂತೆ ಕೇಂದ್ರವನ್ನು ಹಲವು ಬಾರಿ ಒತ್ತಾಯಿಸಲಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು. </p>.ಕೇರಳವನ್ನು 'ಕೇರಳಂ' ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ.ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಿಸಲು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇರಳದ ಹೆಸರನ್ನು 'ಕೇರಳಂ' ಎಂದು ಬದಲಿಸುವ ನಿರ್ಣಯಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಆದರೆ ಪಶ್ಚಿಮ ಬಂಗಾಳದ ಅಧಿಕೃತ ಹೆಸರನ್ನು 'ಬಂಗಾಳ' ಎಂದು ಬದಲಿಸುವಂತೆ ಕೇಂದ್ರವನ್ನು ಎಷ್ಟೇ ಮನವಿ ಮಾಡಿದರೂ ಪರಿಗಣಿಸುತ್ತಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. </p><p>ಪಶ್ಚಿಮ ಬಂಗಾಳವನ್ನು ಮರು ನಾಮಕರಣ ಮಾಡುವ ನಿರ್ಣಯವನ್ನು ಕೇಂದ್ರ ಸರ್ಕಾರವು ಎಂದಿಗೂ ಪರಿಗಣಿಸಿಲ್ಲ ಎಂದು ಅವರು ದೂರಿದ್ದಾರೆ. </p><p>ಕೇರಳದ ಹೆಸರನ್ನು ಅಧಿಕೃತವಾಗಿ 'ಕೇರಳಂ' ಎಂದು ಬದಲಾಯಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯು 2023ರ ಆಗಸ್ಟ್ 9ರಂದು ಅಂಗೀಕರಿಸಿತ್ತು. ಅದಕ್ಕೀಗ ಕೇಂದ್ರದ ಅನುಮೋದನೆ ಸಿಕ್ಕಿದೆ. </p><p>'ಬಿಜೆಪಿ ಹಾಗೂ ಸಿಪಿಐ(ಎಂ) ನಡುವಣ ಮೈತ್ರಿಯಿಂದಾಗಿ ಕೇರಳಕ್ಕೆ ಹೊಸ ಹೆಸರು ಪಡೆಯಲು ಸಹಾಯವಾಗಿದೆ' ಎಂದು ಮಮತಾ ಆರೋಪಿಸಿದ್ದಾರೆ. </p><p>'ಪಶ್ಚಿಮ ಬಂಗಾಳವನ್ನು ಯಾವತ್ತೂ ಕಡೆಗಣಿಸಲಾಗುತ್ತಿದೆ. ಆದರೆ ಮುಂದೊಂದು ದಿನ ಬಿಜೆಪಿ ಅಧಿಕಾರಿದಲ್ಲಿರುವುದಿಲ್ಲ. ಆಗ ನಾವು ಹೆಸರನ್ನು ಬದಲಾಯಿಸಿಕೊಳ್ಳುತ್ತೇವೆ' ಎಂದಿದ್ದಾರೆ. </p><p>ಈ ಸಂದರ್ಭದಲ್ಲಿ ಕೇರಳಂ ಎಂಬ ಹೊಸ ಹೆಸರು ಪಡೆದಿರುವುದಕ್ಕೆ ಕೇರಳದ ಜನರಿಗೆ ಮಮತಾ ಬ್ಯಾನರ್ಜಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. </p><p>ಪಶ್ಚಿಮ ಬಂಗಾಳದ ಹೆಸರನ್ನು ಅಧಿಕೃತವಾಗಿ ಬಂಗಾಳ ಎಂದು ಬದಲಾಯಿಸುವಂತೆ ಕೇಂದ್ರವನ್ನು ಹಲವು ಬಾರಿ ಒತ್ತಾಯಿಸಲಾಗಿದೆ. ಈ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು. </p>.ಕೇರಳವನ್ನು 'ಕೇರಳಂ' ಎಂದು ಬದಲಾಯಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ.ಕೇರಳದ ಹೆಸರನ್ನು ‘ಕೇರಳಂ’ ಎಂದು ಬದಲಿಸಲು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>