<p><strong>ಕೋಯಿಕೋಡ್:</strong> ಅತ್ಯಂತ ವಿರಳ ಮತ್ತು ಮಾರಣಾಂತಿಕ ಮಿದುಳು ಸೋಂಕಾದ ಅಮೋಬಿಕ್ ಮೆನಿಂಗೋ ಎನ್ಸೆಫಲಿಟಿಸ್ ಕಾಯಿಲೆಗೆ ತುತ್ತಾಗಿ ಕೇರಳದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಗಸ್ಟ್ನಿಂದ ಈ ಕಾಯಿಲೆಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.</p><p>ಮಲಪ್ಪುರಂ ಜಿಲ್ಲೆಯ 47 ವರ್ಷದ ಚೆಲಂಬ್ರಾದ ಶಾಜಿ ಎಂಬುವರು ಸೋಂಕಿನಿಂದಾಗಿ ಗುರುವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಿದುಳು ಸೋಂಕಿನಿಂದ ಬಳಲುತ್ತಿದ್ದ ಶಾಜಿ ಅವರನ್ನು ಆಗಸ್ಟ್ 9ರಂದು ಕೋಯಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಸೋಂಕಿನಿಂದ ಬಳಲುತ್ತಿರುವ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಸೋಮವಾರದಂದು (ಸೆಪ್ಟೆಂಬರ್ 8) ವಂದೂರು ಜಿಲ್ಲೆಯ 54 ವರ್ಷದ ಮಹಿಳೆ ಸೋಂಕಿನಿಂದಾಗಿ ಮೃತಪಟ್ಟಿದ್ದರು. ಶನಿವಾರ 45 ವರ್ಷ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಆಗಸ್ಟ್ನಲ್ಲಿ ಮೂವರು ಮೃತಪಟ್ಟಿದ್ದಾರೆ. ಸೋಂಕಿನ ಲಕ್ಷಣಗಳಿರುವ ಅನೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಂಕು ಹೆಚ್ಚುತ್ತಿರುವ ಕಾರಣ ಕೇರಳ ಆರೋಗ್ಯ ಇಲಾಖೆಯು ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಯಿಕೋಡ್:</strong> ಅತ್ಯಂತ ವಿರಳ ಮತ್ತು ಮಾರಣಾಂತಿಕ ಮಿದುಳು ಸೋಂಕಾದ ಅಮೋಬಿಕ್ ಮೆನಿಂಗೋ ಎನ್ಸೆಫಲಿಟಿಸ್ ಕಾಯಿಲೆಗೆ ತುತ್ತಾಗಿ ಕೇರಳದಲ್ಲಿ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆಗಸ್ಟ್ನಿಂದ ಈ ಕಾಯಿಲೆಗೆ ತುತ್ತಾಗಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.</p><p>ಮಲಪ್ಪುರಂ ಜಿಲ್ಲೆಯ 47 ವರ್ಷದ ಚೆಲಂಬ್ರಾದ ಶಾಜಿ ಎಂಬುವರು ಸೋಂಕಿನಿಂದಾಗಿ ಗುರುವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.</p><p>ಮಿದುಳು ಸೋಂಕಿನಿಂದ ಬಳಲುತ್ತಿದ್ದ ಶಾಜಿ ಅವರನ್ನು ಆಗಸ್ಟ್ 9ರಂದು ಕೋಯಿಕೋಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಸ್ತುತ ಆಸ್ಪತ್ರೆಯಲ್ಲಿ ಸೋಂಕಿನಿಂದ ಬಳಲುತ್ತಿರುವ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಸೋಮವಾರದಂದು (ಸೆಪ್ಟೆಂಬರ್ 8) ವಂದೂರು ಜಿಲ್ಲೆಯ 54 ವರ್ಷದ ಮಹಿಳೆ ಸೋಂಕಿನಿಂದಾಗಿ ಮೃತಪಟ್ಟಿದ್ದರು. ಶನಿವಾರ 45 ವರ್ಷ ವ್ಯಕ್ತಿ ಯೊಬ್ಬರು ಮೃತಪಟ್ಟಿದ್ದರು. ಇದಕ್ಕೂ ಮುನ್ನ ಆಗಸ್ಟ್ನಲ್ಲಿ ಮೂವರು ಮೃತಪಟ್ಟಿದ್ದಾರೆ. ಸೋಂಕಿನ ಲಕ್ಷಣಗಳಿರುವ ಅನೇಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋಂಕು ಹೆಚ್ಚುತ್ತಿರುವ ಕಾರಣ ಕೇರಳ ಆರೋಗ್ಯ ಇಲಾಖೆಯು ವಿಶೇಷ ಮಾರ್ಗಸೂಚಿ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>