<p><strong>ತಿರುವನಂತಪುರ:</strong> ಓಣಂ ಹಬ್ಬದ ಪ್ರಯುಕ್ತ ಹೆಚ್ಚುವರಿ ಅಕ್ಕಿ ಹಂಚಿಕೆ ಮಾಡಬೇಕೆಂಬ ರಾಜ್ಯದ ಬೇಡಿಕೆಯನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ಕೇರಳ ವಿರೋಧಿ ನಿಲುವನ್ನು ಮುಂದುವರಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಕೇಂದ್ರದ ಕೇರಳ ವಿರೋಧಿ ನಿಲುವಿನ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಪ್ರತಿಭಟಿಸಬೇಕೆಂದು ಅವರು ಕರೆ ನೀಡಿದ್ದಾರೆ.</p>.<p>ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ‘ಆದ್ಯತೆಯೇತರ ಕುಟುಂಬಗಳ ಪ್ರತಿ ಪಡಿತರ ಚೀಟಿಗೆ ಹೆಚ್ಚುವರಿಯಾಗಿ ತಲಾ ಐದು ಕೆ.ಜಿ. ಅಕ್ಕಿಯನ್ನು ಪ್ರಸ್ತುತ ರಾಜ್ಯಕ್ಕೆ ನೀಡಲಾಗುತ್ತಿರುವ ₹8.30 ದರದಲ್ಲೇ ನೀಡಬೇಕು ಮತ್ತು ಎರಡು ವರ್ಷಗಳ ಹಿಂದಿನವರೆಗೂ ನೀಡಲಾಗುತ್ತಿದ್ದ ಗೋಧಿ ಹಂಚಿಕೆಯನ್ನು ಪುನರಾರಂಭಿಸಬೇಕು ಎಂಬುದಾಗಿ ರಾಜ್ಯ ಒತ್ತಾಯಿಸಿದೆ’ ಎಂದು ಅವರು ಹೇಳಿದ್ದಾರೆ.</p>.<p>ಓಣಂನಂತಹ ವಿಶೇಷ ಸಂದರ್ಭಗಳಲ್ಲಿ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಗಗನಕ್ಕೇರುವುದನ್ನು ತಡೆಯಲು, ಸಾಧ್ಯವಾದಷ್ಟೂ ಆದ್ಯತೆಯೇತರ ವಿಭಾಗಗಳಿಗೆ ಆಹಾರ ಧಾನ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ.</p>.<p>‘ಹಾಗಾಗಿ ರಾಜ್ಯವು ಆದ್ಯತೆಯೇತರ ಕುಟುಂಬಗಳಿಗೆ ಹೆಚ್ಚುವರಿ ಅಕ್ಕಿ ಹಂಚಿಕೆಯನ್ನು ನೀಡುವಂತೆ ಒತ್ತಾಯಿಸಿತು’ ಎಂದು ಪಿಣರಾಯಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಓಣಂ ಹಬ್ಬದ ಪ್ರಯುಕ್ತ ಹೆಚ್ಚುವರಿ ಅಕ್ಕಿ ಹಂಚಿಕೆ ಮಾಡಬೇಕೆಂಬ ರಾಜ್ಯದ ಬೇಡಿಕೆಯನ್ನು ತಿರಸ್ಕರಿಸುವ ಮೂಲಕ ಕೇಂದ್ರ ಸರ್ಕಾರ ಕೇರಳ ವಿರೋಧಿ ನಿಲುವನ್ನು ಮುಂದುವರಿಸಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.</p>.<p>ಕೇಂದ್ರದ ಕೇರಳ ವಿರೋಧಿ ನಿಲುವಿನ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಪ್ರತಿಭಟಿಸಬೇಕೆಂದು ಅವರು ಕರೆ ನೀಡಿದ್ದಾರೆ.</p>.<p>ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ‘ಆದ್ಯತೆಯೇತರ ಕುಟುಂಬಗಳ ಪ್ರತಿ ಪಡಿತರ ಚೀಟಿಗೆ ಹೆಚ್ಚುವರಿಯಾಗಿ ತಲಾ ಐದು ಕೆ.ಜಿ. ಅಕ್ಕಿಯನ್ನು ಪ್ರಸ್ತುತ ರಾಜ್ಯಕ್ಕೆ ನೀಡಲಾಗುತ್ತಿರುವ ₹8.30 ದರದಲ್ಲೇ ನೀಡಬೇಕು ಮತ್ತು ಎರಡು ವರ್ಷಗಳ ಹಿಂದಿನವರೆಗೂ ನೀಡಲಾಗುತ್ತಿದ್ದ ಗೋಧಿ ಹಂಚಿಕೆಯನ್ನು ಪುನರಾರಂಭಿಸಬೇಕು ಎಂಬುದಾಗಿ ರಾಜ್ಯ ಒತ್ತಾಯಿಸಿದೆ’ ಎಂದು ಅವರು ಹೇಳಿದ್ದಾರೆ.</p>.<p>ಓಣಂನಂತಹ ವಿಶೇಷ ಸಂದರ್ಭಗಳಲ್ಲಿ ಮಾರುಕಟ್ಟೆಯಲ್ಲಿ ಅಕ್ಕಿಯ ಬೆಲೆ ಗಗನಕ್ಕೇರುವುದನ್ನು ತಡೆಯಲು, ಸಾಧ್ಯವಾದಷ್ಟೂ ಆದ್ಯತೆಯೇತರ ವಿಭಾಗಗಳಿಗೆ ಆಹಾರ ಧಾನ್ಯಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು ಅವಶ್ಯಕ ಎಂದು ಅವರು ಹೇಳಿದ್ದಾರೆ.</p>.<p>‘ಹಾಗಾಗಿ ರಾಜ್ಯವು ಆದ್ಯತೆಯೇತರ ಕುಟುಂಬಗಳಿಗೆ ಹೆಚ್ಚುವರಿ ಅಕ್ಕಿ ಹಂಚಿಕೆಯನ್ನು ನೀಡುವಂತೆ ಒತ್ತಾಯಿಸಿತು’ ಎಂದು ಪಿಣರಾಯಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>