<p><strong>ತಿರುವನಂತಪುರ</strong>: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಆತಂಕ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿದೆ.</p>.<p>ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ನಿರ್ವಹಿಸುತ್ತಿರುವ ವ್ಯಾಸ ವಿದ್ಯಾಪೀಠ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ಸ್ಫೋಟ ಸಂಭವಿಸಿದೆ. ಒಬ್ಬ ವಿದ್ಯಾರ್ಥಿ ಮತ್ತು ಮಹಿಳೆಗೆ ಗಾಯಗಳಾಗಿವೆ.</p>.<p>ಶಾಲಾ ಆವರಣದಲ್ಲಿ ಪತ್ತೆಯಾದ ವಸ್ತು ಬಾಂಬ್ ಎಂದು ತಿಳಿಯದೇ ವಿದ್ಯಾರ್ಥಿಯು ಅದನ್ನು ಎಸೆದಿದ್ದರು. ಈ ವೇಳೆ ಆ ವಸ್ತು ಸ್ಫೋಟಗೊಂಡಿದೆ. ಕಾಡುಹಂದಿಗಳನ್ನು ಹಿಡಿಯಲು ಈ ಬಾಂಬ್ ಅನ್ನು ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>‘ಚುನಾವಣೆಯ ಕಾರಣಕ್ಕೆ ರಾಜ್ಯದಲ್ಲಿ ಹಿಂಸಾಚಾರವನ್ನು ಸೃಷ್ಟಿಸಲು ಶಾಲೆಯಲ್ಲಿ ಬಾಂಬ್ ಇರಿಸಲಾಗಿತ್ತು. ಶಾಲೆಯನ್ನು ಆರ್ಎಸ್ಎಸ್ ತರಬೇತಿ ಕೇಂದ್ರಗಳಾಗಿ ಬಳಸಲಾಗುತ್ತಿದೆ. ಆರ್ಎಸ್ಎಸ್ನ ಎಲ್ಲ ಶಾಖೆಗಳಲ್ಲಿ ಶೋಧ ನಡೆಸಬೇಕು’ ಎಂದು ಸಿಪಿಎಂ, ಕಾಂಗ್ರೆಸ್ ಮತ್ತು ಡಿವೈಎಫ್ ಆಗ್ರಹಿಸಿವೆ.</p>.<p>‘ಸ್ಫೋಟದ ಹಿಂದೆ ಪಿತೂರಿ ನಡೆದಿದೆ’ ಎಂದು ಬಿಜೆಪಿ ಮತ್ತು ಆರ್ಎಸ್ಎಸ್ ಆರೋಪಿಸಿವೆ.</p>.<p>ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಿಕ್ಷಣ ಇಲಾಖೆಯು ತನಿಖೆ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಕೇರಳದ ಪಾಲಕ್ಕಾಡ್ ಜಿಲ್ಲೆಯ ಶಾಲೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡಿದ್ದು, ಆತಂಕ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿದೆ.</p>.<p>ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ನಿರ್ವಹಿಸುತ್ತಿರುವ ವ್ಯಾಸ ವಿದ್ಯಾಪೀಠ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸಂಜೆ ಸ್ಫೋಟ ಸಂಭವಿಸಿದೆ. ಒಬ್ಬ ವಿದ್ಯಾರ್ಥಿ ಮತ್ತು ಮಹಿಳೆಗೆ ಗಾಯಗಳಾಗಿವೆ.</p>.<p>ಶಾಲಾ ಆವರಣದಲ್ಲಿ ಪತ್ತೆಯಾದ ವಸ್ತು ಬಾಂಬ್ ಎಂದು ತಿಳಿಯದೇ ವಿದ್ಯಾರ್ಥಿಯು ಅದನ್ನು ಎಸೆದಿದ್ದರು. ಈ ವೇಳೆ ಆ ವಸ್ತು ಸ್ಫೋಟಗೊಂಡಿದೆ. ಕಾಡುಹಂದಿಗಳನ್ನು ಹಿಡಿಯಲು ಈ ಬಾಂಬ್ ಅನ್ನು ಇರಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.</p>.<p>‘ಚುನಾವಣೆಯ ಕಾರಣಕ್ಕೆ ರಾಜ್ಯದಲ್ಲಿ ಹಿಂಸಾಚಾರವನ್ನು ಸೃಷ್ಟಿಸಲು ಶಾಲೆಯಲ್ಲಿ ಬಾಂಬ್ ಇರಿಸಲಾಗಿತ್ತು. ಶಾಲೆಯನ್ನು ಆರ್ಎಸ್ಎಸ್ ತರಬೇತಿ ಕೇಂದ್ರಗಳಾಗಿ ಬಳಸಲಾಗುತ್ತಿದೆ. ಆರ್ಎಸ್ಎಸ್ನ ಎಲ್ಲ ಶಾಖೆಗಳಲ್ಲಿ ಶೋಧ ನಡೆಸಬೇಕು’ ಎಂದು ಸಿಪಿಎಂ, ಕಾಂಗ್ರೆಸ್ ಮತ್ತು ಡಿವೈಎಫ್ ಆಗ್ರಹಿಸಿವೆ.</p>.<p>‘ಸ್ಫೋಟದ ಹಿಂದೆ ಪಿತೂರಿ ನಡೆದಿದೆ’ ಎಂದು ಬಿಜೆಪಿ ಮತ್ತು ಆರ್ಎಸ್ಎಸ್ ಆರೋಪಿಸಿವೆ.</p>.<p>ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶಿಕ್ಷಣ ಇಲಾಖೆಯು ತನಿಖೆ ಆರಂಭಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>