<p><strong>ತಿರುವನಂತಪುರಂ</strong>: ಗುರು ಪೂರ್ಣಿಮಾ ಅಂಗವಾಗಿ ಏರ್ಪಡಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದು, ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಶಿಕ್ಷಣ ಸಚಿವ ವಿ. ಶಿವಕುಟ್ಟಿ ಗರಂ ಆಗಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಶಿವಕುಟ್ಟಿ ಸೂಚಿಸಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಇದರಲ್ಲಿ ಮಧ್ಯಪ್ರವೇಶಿಸಿದೆ.</p><p>ಕಾಸರಗೋಡಿನ ಬಂದಡ್ಕದಲ್ಲಿನ ಸರಸ್ವತಿ ವಿದ್ಯಾಲಯ, ಮಾವೆಲಿಕರದ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ್ ಶಾಲೆ ಮತ್ತು ಶ್ರೀಕಂದಾಪುರಂನ ವಿವೇಕಾನಂದ ವಿದ್ಯಾಪೀಠಂ ಶಾಲೆಗಳಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳು ಶಿಕ್ಷಕರ ಪಾದ ತೊಳೆಯುತ್ತಿರುವುದು ವಿಡಿಯೊಗಳಲ್ಲಿದೆ.</p><p>ಕೇರಳದ ಪ್ರಗತಿಪರ ಸಮಾಜದಲ್ಲಿ ಮಕ್ಕಳು ಶಿಕ್ಷಕರ ಪಾದ ತೊಳೆಯುವಂತೆ ಮಾಡಿರುವುದನ್ನು ಒಪ್ಪಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿರುವ ಶಿವಕುಟ್ಟಿ, ಇಂತಹ ಆಚರಣೆಗಳನ್ನು ತೊಡೆದುಹಾಕಬೇಕು ಎಂದು ಕರೆ ನೀಡಿದ್ದಾರೆ.</p><p>ಏತನ್ಮಧ್ಯೆ, ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಾಗೂ ಶಿಕ್ಷಕರ ಪಾದ ತೊಳೆಯುವಂತೆ ಯಾವ ವಿದ್ಯಾರ್ಥಿಗಳನ್ನು ಒತ್ತಾಯಿಸಿಲ್ಲ ಎಂಬುದಾಗಿ ಸಂಬಂಧಪಟ್ಟ ಶಾಲಾಡಳಿತಗಳು ತಿಳಿಸಿರುವುದಾಗಿ ವರದಿಯಾಗಿದೆ.</p>.ಗೋಕರ್ಣದ ಗುಹೆಯಲ್ಲಿ ಎರಡು ಮಕ್ಕಳೊಂದಿಗೆ ರಷ್ಯಾದ ಮಹಿಳೆ ರಹಸ್ಯವಾಗಿ ವಾಸ!.ಅಮೆರಿಕ ವಿದೇಶಾಂಗ ಇಲಾಖೆಯ 1,300 ನೌಕರರ ವಜಾ: ಟ್ರಂಪ್ ಸರ್ಕಾರ ನಿರ್ಧಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಗುರು ಪೂರ್ಣಿಮಾ ಅಂಗವಾಗಿ ಏರ್ಪಡಿಸಿದ್ದ ಗುರುವಂದನಾ ಸಮಾರಂಭ ವೇಳೆ ಶಿಕ್ಷಕರ ಪಾದ ತೊಳೆಯುವಂತೆ ಕೇರಳದ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಒತ್ತಾಯಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದು, ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದು, ಶಿಕ್ಷಣ ಸಚಿವ ವಿ. ಶಿವಕುಟ್ಟಿ ಗರಂ ಆಗಿದ್ದಾರೆ.</p><p>ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆ ಶಿಕ್ಷಣ ಇಲಾಖೆ ಮಹಾ ನಿರ್ದೇಶಕರಿಗೆ ಶಿವಕುಟ್ಟಿ ಸೂಚಿಸಿದ್ದಾರೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಇದರಲ್ಲಿ ಮಧ್ಯಪ್ರವೇಶಿಸಿದೆ.</p><p>ಕಾಸರಗೋಡಿನ ಬಂದಡ್ಕದಲ್ಲಿನ ಸರಸ್ವತಿ ವಿದ್ಯಾಲಯ, ಮಾವೆಲಿಕರದ ವಿದ್ಯಾಧಿರಾಜ ವಿದ್ಯಾಪೀಠಂ ಸೈನಿಕ್ ಶಾಲೆ ಮತ್ತು ಶ್ರೀಕಂದಾಪುರಂನ ವಿವೇಕಾನಂದ ವಿದ್ಯಾಪೀಠಂ ಶಾಲೆಗಳಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿದ್ಯಾರ್ಥಿಗಳು ಶಿಕ್ಷಕರ ಪಾದ ತೊಳೆಯುತ್ತಿರುವುದು ವಿಡಿಯೊಗಳಲ್ಲಿದೆ.</p><p>ಕೇರಳದ ಪ್ರಗತಿಪರ ಸಮಾಜದಲ್ಲಿ ಮಕ್ಕಳು ಶಿಕ್ಷಕರ ಪಾದ ತೊಳೆಯುವಂತೆ ಮಾಡಿರುವುದನ್ನು ಒಪ್ಪಲಾಗದು ಎಂದು ಆಕ್ರೋಶ ವ್ಯಕ್ತಪಡಿಸಿರುವ ಶಿವಕುಟ್ಟಿ, ಇಂತಹ ಆಚರಣೆಗಳನ್ನು ತೊಡೆದುಹಾಕಬೇಕು ಎಂದು ಕರೆ ನೀಡಿದ್ದಾರೆ.</p><p>ಏತನ್ಮಧ್ಯೆ, ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಾಗೂ ಶಿಕ್ಷಕರ ಪಾದ ತೊಳೆಯುವಂತೆ ಯಾವ ವಿದ್ಯಾರ್ಥಿಗಳನ್ನು ಒತ್ತಾಯಿಸಿಲ್ಲ ಎಂಬುದಾಗಿ ಸಂಬಂಧಪಟ್ಟ ಶಾಲಾಡಳಿತಗಳು ತಿಳಿಸಿರುವುದಾಗಿ ವರದಿಯಾಗಿದೆ.</p>.ಗೋಕರ್ಣದ ಗುಹೆಯಲ್ಲಿ ಎರಡು ಮಕ್ಕಳೊಂದಿಗೆ ರಷ್ಯಾದ ಮಹಿಳೆ ರಹಸ್ಯವಾಗಿ ವಾಸ!.ಅಮೆರಿಕ ವಿದೇಶಾಂಗ ಇಲಾಖೆಯ 1,300 ನೌಕರರ ವಜಾ: ಟ್ರಂಪ್ ಸರ್ಕಾರ ನಿರ್ಧಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>