<p><strong>ತಿರುವನಂತಪುರ:</strong> ‘ಈಗ ಕೇರಳದ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂಬಂತೆ ಕಾಣಿಸುತ್ತಿರಬಹುದು. ಆದರೆ, ಭವಿಷ್ಯದಲ್ಲಿ ಅಪಾಯಕಾರಿ ಆಗುವಂತಹ ಹಲವು ಬೆದರಿಕೆಗಳು ನಿಧಾನವಾಗಿ ಹೊರಹೊಮ್ಮುತ್ತಿವೆ. ಅಂತಹವುಗಳನ್ನು ಗುರುತಿಸಿ, ತೊಡೆದ ಹಾಕಬೇಕಾದದು ಸರ್ಕಾರದ ಜವಾಬ್ದಾರಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದರು.</p>.<p>ಇಲ್ಲಿ ಆಯೋಜಿಸಿದ್ದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಪಿಎಫ್ಐ, ಜಮಾತ್–ಎ–ಇಸ್ಲಾಮಿಯಂತಹ ಸಂಘಟನೆಗಳು, ಎಸ್ಡಿಪಿಐನಂತಹ ರಾಜಕೀಯ ಪಕ್ಷಗಳ ಪಾತ್ರವನ್ನು ಪ್ರಶ್ನಿಸುವ ಜೊತೆಗೆ, ಅವುಗಳು ಜನರನ್ನು ನಿಜವಾಗಿಯೂ ಸುರಕ್ಷಿತವಾಗಿ ಇಡಬಹುದೇ?’ ಎಂದರು. ‘ಇಂಥ ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ಕೇರಳ ಸುರಕ್ಷಿತವಾಗಿರಲು ಸಾಧ್ಯವೇ’ ಎಂದೂ ಪ್ರಶ್ನಿಸಿದರು.</p>.<p>‘ಸಹಬಾಳ್ವೆಯಲ್ಲಿ ನಂಬಿಕೆಯಿಲ್ಲದವರಿಂದ ಏಕತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲು ಸಾಧ್ಯ’ ಎಂದು ಕೇಳಿದ ಶಾ, ‘ತೆರೆಯ ಹಿಂದೆ ಕಾರ್ಯನಿರ್ವಹಿಸುತ್ತಿರುವ ಕಾಣದ ಅಪಾಯಗಳನ್ನು ಗುರುತಿಸುವ ಮೂಲಕ ಕೇರಳವನ್ನು ಸುರಕ್ಷಿತವಾಗಿಡಬಹುದು’ ಎಂದು ಪ್ರತಿಪಾದಿಸಿದರು. ‘ಕೇರಳದಲ್ಲಿ ಅಭಿವೃದ್ಧಿ ಜೊತೆಗೆ ಸುರಕ್ಷತೆಯೂ ಬಹಳ ಮುಖ್ಯ’ ಎಂದು ವಿವರಿಸಿದರು.</p>.<p>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೇಲಿನ ನಿಷೇಧವನ್ನು ಉಲ್ಲೇಖಿಸಿದ ಅವರು, ಸ್ಥಳೀಯ ಪಕ್ಷಗಳಾದ ಎಲ್ಡಿಎಫ್ ಮತ್ತು ಯುಡಿಎಫ್ ಎರಡೂ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿಲ್ಲ ಅಥವಾ ಬೆಂಬಲಿಸಿಲ್ಲ’ ಎಂದರು.</p>.<p>‘ನಾವು ಪಿಎಫ್ಐ ನಿಷೇಧಿಸುವ ಮೂಲಕ, ಆ ಸಂಘಟನೆಯ ಕಾರ್ಯಕರ್ತರನ್ನು ಕಂಬಿಗಳ ಹಿಂದೆ ಹಾಕಿದ್ದೇವೆ. ಪರಿಣಾಮವಾಗಿ ಇಡೀ ದೇಶ ಸುರಕ್ಷಿತವಾಗಿದೆ. ಇದನ್ನು ನಾನು ಹೋದಕಡೆಯಲ್ಲೆಲ್ಲ ಸ್ಪಷ್ಟವಾಗಿ ಹೇಳುತ್ತೇನೆ’ ಎಂದರು.</p>.<p>ಕೇರಳ ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಅವರು ಕೆಲವು ದಿನಗಳ ಹಿಂದೆ ‘ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ, ಐಯುಎಂಎಲ್ ಮತ್ತು ಇಸ್ಲಾಮಿಕ್ ಸಂಘಟನೆ ಜಮಾತೆ-ಎ-ಇಸ್ಲಾಮಿ ಸಂಘಟನೆಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಧರ್ಮವನ್ನು ಬಳಸಿಕೊಳ್ಳುವ ಮೂಲಕ ಅಪಾಯಕಾರಿ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದ್ದರು. ಇದರ ಹಿನ್ನೆಲೆಯಲ್ಲಿ ಅಮಿತ್ ಶಾ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ‘ಈಗ ಕೇರಳದ ಕಾನೂನು ಸುವ್ಯವಸ್ಥೆ ಸಮರ್ಪಕವಾಗಿದ್ದು, ಪರಿಸ್ಥಿತಿ ಶಾಂತವಾಗಿದೆ ಎಂಬಂತೆ ಕಾಣಿಸುತ್ತಿರಬಹುದು. ಆದರೆ, ಭವಿಷ್ಯದಲ್ಲಿ ಅಪಾಯಕಾರಿ ಆಗುವಂತಹ ಹಲವು ಬೆದರಿಕೆಗಳು ನಿಧಾನವಾಗಿ ಹೊರಹೊಮ್ಮುತ್ತಿವೆ. ಅಂತಹವುಗಳನ್ನು ಗುರುತಿಸಿ, ತೊಡೆದ ಹಾಕಬೇಕಾದದು ಸರ್ಕಾರದ ಜವಾಬ್ದಾರಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಸಿದರು.</p>.<p>ಇಲ್ಲಿ ಆಯೋಜಿಸಿದ್ದ ಸಮಾವೇಶವೊಂದರಲ್ಲಿ ಮಾತನಾಡಿದ ಅವರು, ಪಿಎಫ್ಐ, ಜಮಾತ್–ಎ–ಇಸ್ಲಾಮಿಯಂತಹ ಸಂಘಟನೆಗಳು, ಎಸ್ಡಿಪಿಐನಂತಹ ರಾಜಕೀಯ ಪಕ್ಷಗಳ ಪಾತ್ರವನ್ನು ಪ್ರಶ್ನಿಸುವ ಜೊತೆಗೆ, ಅವುಗಳು ಜನರನ್ನು ನಿಜವಾಗಿಯೂ ಸುರಕ್ಷಿತವಾಗಿ ಇಡಬಹುದೇ?’ ಎಂದರು. ‘ಇಂಥ ಸಂಘಟನೆಗಳು, ರಾಜಕೀಯ ಪಕ್ಷಗಳಿಂದ ಕೇರಳ ಸುರಕ್ಷಿತವಾಗಿರಲು ಸಾಧ್ಯವೇ’ ಎಂದೂ ಪ್ರಶ್ನಿಸಿದರು.</p>.<p>‘ಸಹಬಾಳ್ವೆಯಲ್ಲಿ ನಂಬಿಕೆಯಿಲ್ಲದವರಿಂದ ಏಕತೆಯನ್ನು ಹೇಗೆ ಖಚಿತಪಡಿಸಿಕೊಳ್ಳಲು ಸಾಧ್ಯ’ ಎಂದು ಕೇಳಿದ ಶಾ, ‘ತೆರೆಯ ಹಿಂದೆ ಕಾರ್ಯನಿರ್ವಹಿಸುತ್ತಿರುವ ಕಾಣದ ಅಪಾಯಗಳನ್ನು ಗುರುತಿಸುವ ಮೂಲಕ ಕೇರಳವನ್ನು ಸುರಕ್ಷಿತವಾಗಿಡಬಹುದು’ ಎಂದು ಪ್ರತಿಪಾದಿಸಿದರು. ‘ಕೇರಳದಲ್ಲಿ ಅಭಿವೃದ್ಧಿ ಜೊತೆಗೆ ಸುರಕ್ಷತೆಯೂ ಬಹಳ ಮುಖ್ಯ’ ಎಂದು ವಿವರಿಸಿದರು.</p>.<p>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮೇಲಿನ ನಿಷೇಧವನ್ನು ಉಲ್ಲೇಖಿಸಿದ ಅವರು, ಸ್ಥಳೀಯ ಪಕ್ಷಗಳಾದ ಎಲ್ಡಿಎಫ್ ಮತ್ತು ಯುಡಿಎಫ್ ಎರಡೂ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿಲ್ಲ ಅಥವಾ ಬೆಂಬಲಿಸಿಲ್ಲ’ ಎಂದರು.</p>.<p>‘ನಾವು ಪಿಎಫ್ಐ ನಿಷೇಧಿಸುವ ಮೂಲಕ, ಆ ಸಂಘಟನೆಯ ಕಾರ್ಯಕರ್ತರನ್ನು ಕಂಬಿಗಳ ಹಿಂದೆ ಹಾಕಿದ್ದೇವೆ. ಪರಿಣಾಮವಾಗಿ ಇಡೀ ದೇಶ ಸುರಕ್ಷಿತವಾಗಿದೆ. ಇದನ್ನು ನಾನು ಹೋದಕಡೆಯಲ್ಲೆಲ್ಲ ಸ್ಪಷ್ಟವಾಗಿ ಹೇಳುತ್ತೇನೆ’ ಎಂದರು.</p>.<p>ಕೇರಳ ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ಅವರು ಕೆಲವು ದಿನಗಳ ಹಿಂದೆ ‘ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪಕ್ಷ, ಐಯುಎಂಎಲ್ ಮತ್ತು ಇಸ್ಲಾಮಿಕ್ ಸಂಘಟನೆ ಜಮಾತೆ-ಎ-ಇಸ್ಲಾಮಿ ಸಂಘಟನೆಗಳ ಬೆಂಬಲದೊಂದಿಗೆ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಧರ್ಮವನ್ನು ಬಳಸಿಕೊಳ್ಳುವ ಮೂಲಕ ಅಪಾಯಕಾರಿ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದ್ದರು. ಇದರ ಹಿನ್ನೆಲೆಯಲ್ಲಿ ಅಮಿತ್ ಶಾ ಮಾತನಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>