<p><strong>ತಿರುವನಂತಪುರ</strong>: ಸಿಲ್ವರ್ಲೈನ್ ಸೆಮಿ ಹೈ–ಸ್ಪೀಡ್ ರೈಲು ಯೋಜನೆಗೆ ಕರ್ನಾಟಕ ಸರ್ಕಾರದ ಸಹಕಾರ ಪಡೆಯುವ ಪ್ರಯತ್ನ ವಿಫಲವಾದ ಬಳಿಕ ಕೇರಳವು ಈ ಯೋಜನೆಯನ್ನು ಕೈಬಿಟ್ಟಿದೆ.</p>.<p>ಭೂಮಾಪನ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ನಿಯೋಜಿಸಿದ್ದ 200 ಅಧಿಕಾರಿಗಳಿಗೆ ಮಾತೃ ಇಲಾಖೆಗೆ ಮರಳುವಂತೆ ನಿರ್ದೇಶಿಸಿ ಸರ್ಕಾರ ಆದೇಶ ಹೊರಡಿಸಿರುವುದು ಇದನ್ನು ಪುಷ್ಟೀಕರಿಸಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದ ನಂತರ ಯೋಜನೆ ಕುರಿತ ಮುಂದಿನ ತೀರ್ಮಾನಗಳನ್ನು ತಿಳಿಸಲಾಗುವುದು ಎಂದೂ ಆದೇಶದಲ್ಲಿ ಹೇಳಲಾಗಿದೆ.</p>.<p>‘ಯಾವುದೇ ಬೆಲೆ ತೆತ್ತಾದರೂ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತೇವೆ’ ಎಂದು ಈ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದರು. ಜನರ ತೀವ್ರ ವಿರೋಧದ ನಡುವೆಯೂ ಯೋಜನೆಗೆ ಸಂಬಂಧಿಸಿ ಗಡಿ ಗುರುತಿಸುವ ಕಲ್ಲುಗಳನ್ನು ಸ್ಥಾಪಿಸಲಾಗಿತ್ತು.</p>.<p>ಕೇಂದ್ರದ ಬಿಜೆಪಿ ಸರ್ಕಾರವು ಈ ಯೋಜನೆಗೆ ಇದುವರೆಗೂ ಒಪ್ಪಿಗೆ ನೀಡಿಲ್ಲ. ಯೋಜನೆಯನ್ನು ಮಂಗಳೂರಿನವರೆಗೆ ವಿಸ್ತರಿಸಲು ಕೇರಳ ಸರ್ಕಾರವು ಕರ್ನಾಟಕಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಈ ಬಗ್ಗೆ ಕರ್ನಾಟಕ ಸರ್ಕಾರವು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.</p>.<p>ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿದ ನಂತರವೇ ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿರುವುದಾಗಿ ಇದೀಗ ಕೇರಳ ಸರ್ಕಾರ ಹೇಳಿದೆ. ರೈಲ್ವೆ ಇಲಾಖೆ ಕೂಡ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ</strong>: ಸಿಲ್ವರ್ಲೈನ್ ಸೆಮಿ ಹೈ–ಸ್ಪೀಡ್ ರೈಲು ಯೋಜನೆಗೆ ಕರ್ನಾಟಕ ಸರ್ಕಾರದ ಸಹಕಾರ ಪಡೆಯುವ ಪ್ರಯತ್ನ ವಿಫಲವಾದ ಬಳಿಕ ಕೇರಳವು ಈ ಯೋಜನೆಯನ್ನು ಕೈಬಿಟ್ಟಿದೆ.</p>.<p>ಭೂಮಾಪನ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ನಿಯೋಜಿಸಿದ್ದ 200 ಅಧಿಕಾರಿಗಳಿಗೆ ಮಾತೃ ಇಲಾಖೆಗೆ ಮರಳುವಂತೆ ನಿರ್ದೇಶಿಸಿ ಸರ್ಕಾರ ಆದೇಶ ಹೊರಡಿಸಿರುವುದು ಇದನ್ನು ಪುಷ್ಟೀಕರಿಸಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದ ನಂತರ ಯೋಜನೆ ಕುರಿತ ಮುಂದಿನ ತೀರ್ಮಾನಗಳನ್ನು ತಿಳಿಸಲಾಗುವುದು ಎಂದೂ ಆದೇಶದಲ್ಲಿ ಹೇಳಲಾಗಿದೆ.</p>.<p>‘ಯಾವುದೇ ಬೆಲೆ ತೆತ್ತಾದರೂ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತೇವೆ’ ಎಂದು ಈ ಹಿಂದೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದರು. ಜನರ ತೀವ್ರ ವಿರೋಧದ ನಡುವೆಯೂ ಯೋಜನೆಗೆ ಸಂಬಂಧಿಸಿ ಗಡಿ ಗುರುತಿಸುವ ಕಲ್ಲುಗಳನ್ನು ಸ್ಥಾಪಿಸಲಾಗಿತ್ತು.</p>.<p>ಕೇಂದ್ರದ ಬಿಜೆಪಿ ಸರ್ಕಾರವು ಈ ಯೋಜನೆಗೆ ಇದುವರೆಗೂ ಒಪ್ಪಿಗೆ ನೀಡಿಲ್ಲ. ಯೋಜನೆಯನ್ನು ಮಂಗಳೂರಿನವರೆಗೆ ವಿಸ್ತರಿಸಲು ಕೇರಳ ಸರ್ಕಾರವು ಕರ್ನಾಟಕಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಆದರೆ ಈ ಬಗ್ಗೆ ಕರ್ನಾಟಕ ಸರ್ಕಾರವು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.</p>.<p>ಕೇಂದ್ರ ಸರ್ಕಾರದ ಒಪ್ಪಿಗೆ ಸಿಕ್ಕಿದ ನಂತರವೇ ಮುಂದಿನ ಹೆಜ್ಜೆ ಇಡಲು ತೀರ್ಮಾನಿಸಿರುವುದಾಗಿ ಇದೀಗ ಕೇರಳ ಸರ್ಕಾರ ಹೇಳಿದೆ. ರೈಲ್ವೆ ಇಲಾಖೆ ಕೂಡ ಈ ಯೋಜನೆಗೆ ವಿರೋಧ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>