<p><strong>ತಿರುವನಂತಪುರ:</strong> ರಾಜ್ಯದಲ್ಲಿ ಎಸ್ಐಆರ್ ಜಾರಿಗೊಳಿಸಿದ ಚುನಾವಣಾ ಆಯೋಗದ ಕ್ರಮದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ‘ಮೌನ’ವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶುಕ್ರವಾರ ಪ್ರಶ್ನಿಸಿದ್ದಾರೆ.</p>.<p>‘ಇಂಡಿಯಾ’ ಮೈತ್ರಿಕೂಟದ ಎಲ್ಲ ಮುಖ್ಯಮಂತ್ರಿಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿದ್ದರೂ, ವಿಜಯನ್ ಮಾತ್ರ ಇದರ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಎಸ್ಐಆರ್ ವಿರುದ್ಧ ಮಾತನಾಡಿದ್ದಾರೆ. ಸಿಪಿಎಂ ಸಹ ವಿರೋಧ ವ್ಯಕ್ತಪಡಿಸಿದೆ. ಆದರೆ ಕೇರಳ ಮುಖ್ಯಮಂತ್ರಿ ಮಾತ್ರ ಇನ್ನೂ ಏನನ್ನೂ ಹೇಳಿಲ್ಲ ಎಂದರು.</p>.<p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಚುನಾವಣಾ ಆಯೋಗದ ನಿರ್ಧಾರವನ್ನು ಟೀಕಿಸಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸಿದ ಹೊತ್ತಲ್ಲಿ ಎಸ್ಐಆರ್ ಅವೈಜ್ಞಾನಿಕ ಎಂದಿತ್ತು.</p>.<p>2002ರ ಮತದಾರರ ಪಟ್ಟಿಯನ್ನು ಆಧರಿಸಿ ಕೇರಳದಲ್ಲಿ ಎಸ್ಐಆರ್ ನಡೆಸಲಾಗುತ್ತಿದ್ದು, 53.25 ಲಕ್ಷ ಹೆಸರನ್ನು 2025ರ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಕೆಪಿಸಿಸಿ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ರಾಜ್ಯದಲ್ಲಿ ಎಸ್ಐಆರ್ ಜಾರಿಗೊಳಿಸಿದ ಚುನಾವಣಾ ಆಯೋಗದ ಕ್ರಮದ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ‘ಮೌನ’ವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಶುಕ್ರವಾರ ಪ್ರಶ್ನಿಸಿದ್ದಾರೆ.</p>.<p>‘ಇಂಡಿಯಾ’ ಮೈತ್ರಿಕೂಟದ ಎಲ್ಲ ಮುಖ್ಯಮಂತ್ರಿಗಳು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್ಐಆರ್) ವಿರೋಧಿಸಿದ್ದರೂ, ವಿಜಯನ್ ಮಾತ್ರ ಇದರ ಬಗ್ಗೆ ಪ್ರತಿಕ್ರಿಯಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದರು.</p>.<p>ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಜಾರ್ಖಂಡ್ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಎಸ್ಐಆರ್ ವಿರುದ್ಧ ಮಾತನಾಡಿದ್ದಾರೆ. ಸಿಪಿಎಂ ಸಹ ವಿರೋಧ ವ್ಯಕ್ತಪಡಿಸಿದೆ. ಆದರೆ ಕೇರಳ ಮುಖ್ಯಮಂತ್ರಿ ಮಾತ್ರ ಇನ್ನೂ ಏನನ್ನೂ ಹೇಳಿಲ್ಲ ಎಂದರು.</p>.<p>ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಚುನಾವಣಾ ಆಯೋಗದ ನಿರ್ಧಾರವನ್ನು ಟೀಕಿಸಿತ್ತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸಿದ ಹೊತ್ತಲ್ಲಿ ಎಸ್ಐಆರ್ ಅವೈಜ್ಞಾನಿಕ ಎಂದಿತ್ತು.</p>.<p>2002ರ ಮತದಾರರ ಪಟ್ಟಿಯನ್ನು ಆಧರಿಸಿ ಕೇರಳದಲ್ಲಿ ಎಸ್ಐಆರ್ ನಡೆಸಲಾಗುತ್ತಿದ್ದು, 53.25 ಲಕ್ಷ ಹೆಸರನ್ನು 2025ರ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ಕೆಪಿಸಿಸಿ ದೂರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>