<p><strong>ಕೊಚ್ಚಿ:</strong> 'ದಿ ಕೇರಳ ಸ್ಟೋರಿ - ಗೋಸ್ ಬಿಯಾಂಡ್' ಚಿತ್ರವು ಕೇರಳದಂತದ ಜಾತ್ಯತೀತ ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. </p><p>ಕೇರಳದಲ್ಲಿ ಜನರು ಕೋಮು ಸೌಹಾರ್ದದಲ್ಲಿ ಬದುಕುತ್ತಾರೆ. ಹಾಗಿರುವಾಗ ಕೇರಳದ ಹೆಸರನ್ನು ಬಳಕೆ ಮಾಡುವುದು ಮತ್ತು ಚಿತ್ರವು ನೈಜ ಸಂಗತಿಗಳನ್ನು ಆಧರಿಸಿದೆ ಎಂದು ಹೇಳಿಕೊಳ್ಳುವುದು ಕೋಮು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿದೆ </p><p>ಕೇರಳ ಸ್ಟೋರಿ 2 ಚಿತ್ರಕ್ಕೆ ನೀಡಲಾದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮೂರು ಪ್ರತ್ಯೇಕ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಈ ಕುರಿತು ಉಲ್ಲೇಖಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಚಿತ್ರದ ಟೀಸರ್ ತೆಗೆಯಲು ಸಿದ್ಧವಿರುವುದಾಗಿ ನಿರ್ಮಾಪಕ ನ್ಯಾಯಾಲಯಕ್ಕೆ ತಿಳಿಸಿದರು. </p><p>ಫೆಬ್ರುವರಿ 27ರಂದು ಬಿಡುಗಡೆಯಾಗಲಿರುವ ಸಿನಿಮಾದ ಪ್ರಮಾಣೀಕರಣದ ಬಗ್ಗೆ ಮತ್ತೆ ಬುಧವಾರ ವಿಚಾರಣೆ ನಡೆಯಲಿದೆ. ತೀರ್ಪಿಗೂ ಮೊದಲು ಚಿತ್ರವನ್ನು ವೀಕ್ಷಿಸಲು ಇಂಗಿತ ವ್ಯಕ್ತಪಡಿಸಿತು. </p><p>ಈ ಚಿತ್ರವು ಎಲ್ಲ ಮಾನದಂಡಗಳನ್ನು ಅನುಸರಿಸಿದೆಯೇ ಎಂದೂ ಸೆನ್ಸಾರ್ ಮಂಡಳಿಯನ್ನು ಕೋರ್ಟ್ ಪ್ರಶ್ನಿಸಿದೆ. </p>.ಕೇರಳ ಸದ್ಯ, ಗೋಮಾಂಸ, ಹಂದಿಮಾಂಸ; ಇದುವೇ ನಿಜವಾದ ಕೇರಳ ಸ್ಟೋರಿ ಎಂದ ಪ್ರಕಾಶ್ ರಾಜ್.‘ದಿ ಕೇರಳ ಸ್ಟೋರಿ–2’ ಸಿನಿಮಾ ನಿರ್ದೇಶಕರಿಗೆ ಹೈಕೋರ್ಟ್ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಚ್ಚಿ:</strong> 'ದಿ ಕೇರಳ ಸ್ಟೋರಿ - ಗೋಸ್ ಬಿಯಾಂಡ್' ಚಿತ್ರವು ಕೇರಳದಂತದ ಜಾತ್ಯತೀತ ರಾಜ್ಯವನ್ನು ತಪ್ಪು ರೀತಿಯಲ್ಲಿ ಬಿಂಬಿಸುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. </p><p>ಕೇರಳದಲ್ಲಿ ಜನರು ಕೋಮು ಸೌಹಾರ್ದದಲ್ಲಿ ಬದುಕುತ್ತಾರೆ. ಹಾಗಿರುವಾಗ ಕೇರಳದ ಹೆಸರನ್ನು ಬಳಕೆ ಮಾಡುವುದು ಮತ್ತು ಚಿತ್ರವು ನೈಜ ಸಂಗತಿಗಳನ್ನು ಆಧರಿಸಿದೆ ಎಂದು ಹೇಳಿಕೊಳ್ಳುವುದು ಕೋಮು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಅಭಿಪ್ರಾಯಪಟ್ಟಿದೆ </p><p>ಕೇರಳ ಸ್ಟೋರಿ 2 ಚಿತ್ರಕ್ಕೆ ನೀಡಲಾದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಮೂರು ಪ್ರತ್ಯೇಕ ಅರ್ಜಿಗಳ ಕುರಿತು ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಬೆಚು ಕುರಿಯನ್ ಥಾಮಸ್ ಅವರು ಈ ಕುರಿತು ಉಲ್ಲೇಖಿಸಿದ್ದಾರೆ. </p><p>ಈ ಸಂದರ್ಭದಲ್ಲಿ ಚಿತ್ರದ ಟೀಸರ್ ತೆಗೆಯಲು ಸಿದ್ಧವಿರುವುದಾಗಿ ನಿರ್ಮಾಪಕ ನ್ಯಾಯಾಲಯಕ್ಕೆ ತಿಳಿಸಿದರು. </p><p>ಫೆಬ್ರುವರಿ 27ರಂದು ಬಿಡುಗಡೆಯಾಗಲಿರುವ ಸಿನಿಮಾದ ಪ್ರಮಾಣೀಕರಣದ ಬಗ್ಗೆ ಮತ್ತೆ ಬುಧವಾರ ವಿಚಾರಣೆ ನಡೆಯಲಿದೆ. ತೀರ್ಪಿಗೂ ಮೊದಲು ಚಿತ್ರವನ್ನು ವೀಕ್ಷಿಸಲು ಇಂಗಿತ ವ್ಯಕ್ತಪಡಿಸಿತು. </p><p>ಈ ಚಿತ್ರವು ಎಲ್ಲ ಮಾನದಂಡಗಳನ್ನು ಅನುಸರಿಸಿದೆಯೇ ಎಂದೂ ಸೆನ್ಸಾರ್ ಮಂಡಳಿಯನ್ನು ಕೋರ್ಟ್ ಪ್ರಶ್ನಿಸಿದೆ. </p>.ಕೇರಳ ಸದ್ಯ, ಗೋಮಾಂಸ, ಹಂದಿಮಾಂಸ; ಇದುವೇ ನಿಜವಾದ ಕೇರಳ ಸ್ಟೋರಿ ಎಂದ ಪ್ರಕಾಶ್ ರಾಜ್.‘ದಿ ಕೇರಳ ಸ್ಟೋರಿ–2’ ಸಿನಿಮಾ ನಿರ್ದೇಶಕರಿಗೆ ಹೈಕೋರ್ಟ್ ನೋಟಿಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>