<p><strong>ತಿರುವನಂತಪುರಂ</strong>: ಕೇರಳದ ಕಾಸರಗೋಡಿನಲ್ಲಿ ಕಲುಷಿತಆಹಾರ ಸೇವಿಸಿ 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿದ್ದಾರೆ.</p>.<p>ಸುದ್ದಿಮೂಲಗಳ ಪ್ರಕಾರ, ಇಲ್ಲಿನ ರೆಸ್ಟೋರೆಂಟ್ನಲ್ಲಿ ಅರೇಬಿಕ್ ಆಹಾರವಾದ ಷಾವರ್ಮಾವನ್ನು ಸೇವಿಸಿದ ಕಾರಣ ಬಾಲಕಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದೇ ರೆಸ್ಟೋರೆಂಟ್ನಲ್ಲಿ ಆಹಾರ ಸೇವಿಸಿದ್ದ 18 ಜನರು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ದೇವನಂದನಾ ಎಂಬ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾದ ಎಲ್ಲರ ಸ್ಥಿತಿ ಸ್ಥಿರವಾಗಿದೆ. ಆದರೆ, ತಡವಾಗಿ ಆಸ್ಪತ್ರೆಗೆ ಕರೆತಂದಿದ್ದರಿಂದ ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ. ರಾಮದಾಸ್ ತಿಳಿಸಿದ್ದಾರೆ.</p>.<p>ಘಟನೆ ನಡೆದ ಬಳಿಕ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರಂ</strong>: ಕೇರಳದ ಕಾಸರಗೋಡಿನಲ್ಲಿ ಕಲುಷಿತಆಹಾರ ಸೇವಿಸಿ 16 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, 18 ಮಂದಿ ಅಸ್ವಸ್ಥರಾಗಿದ್ದಾರೆ.</p>.<p>ಸುದ್ದಿಮೂಲಗಳ ಪ್ರಕಾರ, ಇಲ್ಲಿನ ರೆಸ್ಟೋರೆಂಟ್ನಲ್ಲಿ ಅರೇಬಿಕ್ ಆಹಾರವಾದ ಷಾವರ್ಮಾವನ್ನು ಸೇವಿಸಿದ ಕಾರಣ ಬಾಲಕಿಯು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದೇ ರೆಸ್ಟೋರೆಂಟ್ನಲ್ಲಿ ಆಹಾರ ಸೇವಿಸಿದ್ದ 18 ಜನರು ಅಸ್ವಸ್ಥರಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ದೇವನಂದನಾ ಎಂಬ ಬಾಲಕಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಆಸ್ಪತ್ರೆಗೆ ದಾಖಲಾದ ಎಲ್ಲರ ಸ್ಥಿತಿ ಸ್ಥಿರವಾಗಿದೆ. ಆದರೆ, ತಡವಾಗಿ ಆಸ್ಪತ್ರೆಗೆ ಕರೆತಂದಿದ್ದರಿಂದ ಬಾಲಕಿಯನ್ನು ಉಳಿಸಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾ ವೈದ್ಯಾಧಿಕಾರಿ ಎ.ವಿ. ರಾಮದಾಸ್ ತಿಳಿಸಿದ್ದಾರೆ.</p>.<p>ಘಟನೆ ನಡೆದ ಬಳಿಕ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>