<p><strong>ಆಲಪ್ಪುಳ :</strong> ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ನಲ್ಲಿರುವ ದೇವಸ್ಥಾನದ ಆನೆ ಇಬ್ಬರು ಮಾವುತರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಕೆಲವು ತಿಂಗಳುಗಳಿಂದ ಸ್ಕಂದನ್ ಎಂಬ ಆನೆಗೆ ಮದವೇರಿತ್ತು. ಹೀಗಾಗಿ ದೇವಸ್ಥಾನದ ಅರ್ಚಕರ ಮನೆಯಲ್ಲಿ ಕಟ್ಟಿಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಭಾನುವಾರ ಮಧ್ಯಾಹ್ನ ಮದವೇರಿದ ಸ್ಕಂದನ್ ಆನೆ ಏಕಾಏಕಿ, ಸುನಿಲ್ ಕುಮಾರ್ ಎಂಬ ಮಾವುತನ ಮೇಲೆ ದಾಳಿ ನಡೆಸಿದೆ. </p>.Elephant Attack | ಆನೆ ದಾಳಿ ಸಂತ್ರಸ್ತರ ಅರಣ್ಯ ರೋದನ.<p>ಘಟನೆ ಬಳಿಕ ಸ್ಕಂದನ್ ಆನೆ ನಿರ್ವಾಹಕ ಮುರಳೀಧರನ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಂದಾದರು. </p><p>ದೇವಸ್ಥಾನಕ್ಕೆ ಸ್ಥಳಾಂತರಿಸುವಾಗ ಮತ್ತೆ ಕೋಪಗೊಂಡ ಸ್ಕಂದನ್, ನಿರ್ವಾಹಕ ಮುರಳೀಧರನ್ ಅವರ ಮೇಲೂ ಗಂಭೀರವಾಗಿ ದಾಳಿ ನಡೆಸಿತು.</p><p>ನಿರ್ವಾಹಕ ಮುರಳೀಧರನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಮೃತ ಪಟ್ಟಿದ್ದಾರೆ. ಗಾಯಳು ಸುನಿಲ್ ಕುಮಾರ್ ಸ್ಥಿತಿಯೂ ಗಂಭೀರವಾಗಿದೆ ಎಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲಪ್ಪುಳ :</strong> ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್ನಲ್ಲಿರುವ ದೇವಸ್ಥಾನದ ಆನೆ ಇಬ್ಬರು ಮಾವುತರ ಮೇಲೆ ದಾಳಿ ನಡೆಸಿದೆ. ಇದರ ಪರಿಣಾಮ ಒಬ್ಬರು ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸು ಅಧಿಕಾರಿಗಳು ತಿಳಿಸಿದ್ದಾರೆ.</p><p>ಕಳೆದ ಕೆಲವು ತಿಂಗಳುಗಳಿಂದ ಸ್ಕಂದನ್ ಎಂಬ ಆನೆಗೆ ಮದವೇರಿತ್ತು. ಹೀಗಾಗಿ ದೇವಸ್ಥಾನದ ಅರ್ಚಕರ ಮನೆಯಲ್ಲಿ ಕಟ್ಟಿಹಾಕಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. </p><p>ಭಾನುವಾರ ಮಧ್ಯಾಹ್ನ ಮದವೇರಿದ ಸ್ಕಂದನ್ ಆನೆ ಏಕಾಏಕಿ, ಸುನಿಲ್ ಕುಮಾರ್ ಎಂಬ ಮಾವುತನ ಮೇಲೆ ದಾಳಿ ನಡೆಸಿದೆ. </p>.Elephant Attack | ಆನೆ ದಾಳಿ ಸಂತ್ರಸ್ತರ ಅರಣ್ಯ ರೋದನ.<p>ಘಟನೆ ಬಳಿಕ ಸ್ಕಂದನ್ ಆನೆ ನಿರ್ವಾಹಕ ಮುರಳೀಧರನ್ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಂದಾದರು. </p><p>ದೇವಸ್ಥಾನಕ್ಕೆ ಸ್ಥಳಾಂತರಿಸುವಾಗ ಮತ್ತೆ ಕೋಪಗೊಂಡ ಸ್ಕಂದನ್, ನಿರ್ವಾಹಕ ಮುರಳೀಧರನ್ ಅವರ ಮೇಲೂ ಗಂಭೀರವಾಗಿ ದಾಳಿ ನಡೆಸಿತು.</p><p>ನಿರ್ವಾಹಕ ಮುರಳೀಧರನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲೇ ಮೃತ ಪಟ್ಟಿದ್ದಾರೆ. ಗಾಯಳು ಸುನಿಲ್ ಕುಮಾರ್ ಸ್ಥಿತಿಯೂ ಗಂಭೀರವಾಗಿದೆ ಎಂದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>