<p><strong>ಕೊಲ್ಲಂ</strong>: ಕೇರಳದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಪಠ್ಯಕ್ರಮವನ್ನು ಶೇಕಡ 25ರಷ್ಟು ಕಡಿತಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತಿಳಿಸಿದ್ದಾರೆ. </p>.<p>ಕಳೆದ ವರ್ಷ ಇಲ್ಲಿನ ತೆವಲಕ್ಕರ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ವಿದ್ಯಾರ್ಥಿ ಮಿಥುನ್ ಕುಟುಂಬಕ್ಕೆ ನಿರ್ಮಿಸಲಾಗಿರುವ ಮನೆಯ ಕೀಲಿಯನ್ನು ಶನಿವಾರ ಹಸ್ತಾಂತರ ಮಾಡಿದ ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.</p>.<p>ಹೆಚ್ಚಿನ ಶೈಕ್ಷಣಿಕ ಹೊರೆಯ ಬಗ್ಗೆ ವಿದ್ಯಾರ್ಥಿಗಳು ಆಗಾಗ್ಗೆ ದೂರು ನೀಡುತ್ತಾರೆ. ಇದನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು. </p>.<p>‘ಈಗಿನ ಪಠ್ಯಪುಸ್ತಕಗಳಲ್ಲಿ ಇರುವ ಪಠ್ಯಕ್ರಮದಲ್ಲಿ ಶೇ 25ರಷ್ಟು ಪ್ರಮಾಣವನ್ನು ತೆಗೆಯಲಾಗುವುದು. ಆದರೆ ಪುಸ್ತಕಗಳಲ್ಲಿ ಇರುವ ವಿಷಯವನ್ನು ಬದಲಾಯಿಸುವುದಿಲ್ಲ. ಪಠ್ಯಪುಸ್ತಕ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಲ್ಲಂ</strong>: ಕೇರಳದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ 10ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಪಠ್ಯಕ್ರಮವನ್ನು ಶೇಕಡ 25ರಷ್ಟು ಕಡಿತಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ವಿ. ಶಿವನ್ಕುಟ್ಟಿ ತಿಳಿಸಿದ್ದಾರೆ. </p>.<p>ಕಳೆದ ವರ್ಷ ಇಲ್ಲಿನ ತೆವಲಕ್ಕರ ಬಾಲಕರ ಪ್ರೌಢಶಾಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ವಿದ್ಯಾರ್ಥಿ ಮಿಥುನ್ ಕುಟುಂಬಕ್ಕೆ ನಿರ್ಮಿಸಲಾಗಿರುವ ಮನೆಯ ಕೀಲಿಯನ್ನು ಶನಿವಾರ ಹಸ್ತಾಂತರ ಮಾಡಿದ ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಚಿವರು ಮಾತನಾಡಿದರು.</p>.<p>ಹೆಚ್ಚಿನ ಶೈಕ್ಷಣಿಕ ಹೊರೆಯ ಬಗ್ಗೆ ವಿದ್ಯಾರ್ಥಿಗಳು ಆಗಾಗ್ಗೆ ದೂರು ನೀಡುತ್ತಾರೆ. ಇದನ್ನು ಪರಿಗಣಿಸಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು. </p>.<p>‘ಈಗಿನ ಪಠ್ಯಪುಸ್ತಕಗಳಲ್ಲಿ ಇರುವ ಪಠ್ಯಕ್ರಮದಲ್ಲಿ ಶೇ 25ರಷ್ಟು ಪ್ರಮಾಣವನ್ನು ತೆಗೆಯಲಾಗುವುದು. ಆದರೆ ಪುಸ್ತಕಗಳಲ್ಲಿ ಇರುವ ವಿಷಯವನ್ನು ಬದಲಾಯಿಸುವುದಿಲ್ಲ. ಪಠ್ಯಪುಸ್ತಕ ಸಮಿತಿಯು ಈ ನಿರ್ಧಾರವನ್ನು ಅನುಮೋದಿಸಿದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>